<p><strong>ಮೈಸೂರು</strong>: ಬ್ಯಾಂಕ್ಗೆ ವಂಚಿಸಿದ ಆರೋಪ ಸಾಬೀತಾದ ಕಾರಣ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ನಿವಾಸಿ ಎಂ.ನವೀನ್ ಕುಮಾರ್ಗೆ ಒಂದನೇ ಅಧಿಕ ಸಿಜೆಎಂ ನ್ಯಾಯಾಲಯವು 3 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ನವೀನ್ ಕೆ.ಆರ್. ಮೊಹಲ್ಲಾದ ಇಂಡಸ್ ಇಂಡ್ ಬ್ಯಾಂಕಿನಲ್ಲಿ ಕಮರ್ಷಿಯಲ್ ವೆಹಿಕಲ್ ವಿಭಾಗದ ಸಹಾಯಕ ಮ್ಯಾನೇಜರ್ ಆಗಿದ್ದು, ತಮ್ಮ ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದ ಮಣಿಕಂದನ್ ಎಂಬುವರ ಹೆಸರಿನಲ್ಲಿ ಸುಂದರೇಶನ್ ಹೆಸರಿನ ಗ್ಯಾರಂಟಿಯರ್ ಮಾಡಿ ಬಳಕೆಯಾದ ಲಾರಿಗೆ ₹14.87 ಲಕ್ಷ ಲೋನ್ ಮಂಜೂರಾಗುವಂತೆ ಮಾಡಿದ್ದರು. ನಂತರ ಅದರಲ್ಲಿ ₹7 ಲಕ್ಷ ಪಡೆದು ತಾವು ಹೊಸ ಲಾರಿ ಖರೀದಿಸಿದ್ದರು. ಈ ಬಗ್ಗೆ ಕೆ.ಆರ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ಇನ್ಸ್ಪೆಕ್ಟರ್ ಶ್ರೀನಿವಾಸ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ನ್ಯಾಯಾಧೀಶರಾದ ಎ.ಜಿ.ಶಿಲ್ಪ ವಿಚಾರಣೆ ನಡೆಸಿ, 3 ವರ್ಷ ಜೈಲು ₹ 20 ಸಾವಿರ ದಂಡ ಹಾಗೂ ದೂರುದಾರರಿಗೆ ₹ 10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಕೆ.ಪ್ರಕಾಶ್ ಸರ್ಕಾರದ ಪರವಾಗಿ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಬ್ಯಾಂಕ್ಗೆ ವಂಚಿಸಿದ ಆರೋಪ ಸಾಬೀತಾದ ಕಾರಣ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ನಿವಾಸಿ ಎಂ.ನವೀನ್ ಕುಮಾರ್ಗೆ ಒಂದನೇ ಅಧಿಕ ಸಿಜೆಎಂ ನ್ಯಾಯಾಲಯವು 3 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ನವೀನ್ ಕೆ.ಆರ್. ಮೊಹಲ್ಲಾದ ಇಂಡಸ್ ಇಂಡ್ ಬ್ಯಾಂಕಿನಲ್ಲಿ ಕಮರ್ಷಿಯಲ್ ವೆಹಿಕಲ್ ವಿಭಾಗದ ಸಹಾಯಕ ಮ್ಯಾನೇಜರ್ ಆಗಿದ್ದು, ತಮ್ಮ ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದ ಮಣಿಕಂದನ್ ಎಂಬುವರ ಹೆಸರಿನಲ್ಲಿ ಸುಂದರೇಶನ್ ಹೆಸರಿನ ಗ್ಯಾರಂಟಿಯರ್ ಮಾಡಿ ಬಳಕೆಯಾದ ಲಾರಿಗೆ ₹14.87 ಲಕ್ಷ ಲೋನ್ ಮಂಜೂರಾಗುವಂತೆ ಮಾಡಿದ್ದರು. ನಂತರ ಅದರಲ್ಲಿ ₹7 ಲಕ್ಷ ಪಡೆದು ತಾವು ಹೊಸ ಲಾರಿ ಖರೀದಿಸಿದ್ದರು. ಈ ಬಗ್ಗೆ ಕೆ.ಆರ್. ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಂದಿನ ಇನ್ಸ್ಪೆಕ್ಟರ್ ಶ್ರೀನಿವಾಸ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ನ್ಯಾಯಾಧೀಶರಾದ ಎ.ಜಿ.ಶಿಲ್ಪ ವಿಚಾರಣೆ ನಡೆಸಿ, 3 ವರ್ಷ ಜೈಲು ₹ 20 ಸಾವಿರ ದಂಡ ಹಾಗೂ ದೂರುದಾರರಿಗೆ ₹ 10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಕೆ.ಪ್ರಕಾಶ್ ಸರ್ಕಾರದ ಪರವಾಗಿ ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>