<p><strong>ಮೈಸೂರು</strong>: ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಪಿಐಎಲ್ ವಜಾಗೊಂಡಿರುವುದನ್ನು ಸ್ವಾಗತಿಸಿ ನಗರ (ಜಿಲ್ಲಾ ) ಕಾಂಗ್ರೆಸ್ ಹಾಗೂ ದಲಿತ ಮಹಾ ಸಭಾದ ಸದಸ್ಯರು ಪುರಭವನ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಮಂಗಳವಾರ ಹರ್ಷಾಚರಣೆ ನಡೆಸಿದರು.</p>.<p>ಸಂಘಟನೆ ಅಧ್ಯಕ್ಷ ಎಸ್.ರಾಜೇಶ್ ಮಾತನಾಡಿ, ‘ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ನಿಸಾರ್ ಅಹಮದ್ ಹಾಗೂ ಜೈನ ಸಮುದಾಯಕ್ಕೆ ಸೇರಿದ್ದ ಹಂಪಾ ನಾಗರಾಜ್ ದಸರಾ ಉದ್ಘಾಟಿಸುವ ಸಂದರ್ಭದಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಚಕಾರವೆತ್ತಿರಲಿಲ್ಲ. ಆದರೆ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತರಾಗಿರುವ ಬಾನು ಮಸ್ತಾಕ್ ದಸರಾ ಉದ್ಘಾಟಿಸಲು ಸರ್ಕಾರ ಅಹ್ವಾನ ಮಾಡಿರುವುದನ್ನು ಕೆಲ ಸಂಘಟನೆಗಳು ವಿರೋಧಿಸುವುದರ ಮೂಲಕ ನಗರದಲ್ಲಿ ಕೋಮು ಗಲಭೆ ಸೃಷ್ಟಿಸಬೇಕೆಂದು ಪ್ರಯತ್ನಿಸಿದ್ದವು. ಹೈಕೋರ್ಟ್ ಆದೇಶವು ಅವರ ಪ್ರಯತ್ನಕ್ಕೆ ತಣ್ಣೀರೆರಚಿದೆ’ ಎಂದರು.</p>.<p>ಮುಖಂಡರಾದ ಶಿವಣ್ಣ, ಮರಿದೇವಯ್ಯ, ಸುನೀಲ್ ನಾರಾಯಣ, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಕುರುಬರಹಳ್ಳಿ ಪ್ರಕಾಶ್, ಎಸ್.ಎ.ರಹೀಂ, ಅಮ್ರಾನ್ ಪಾಷಾ, ಮಹದೇವು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರನ್ನಾಗಿ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಪಿಐಎಲ್ ವಜಾಗೊಂಡಿರುವುದನ್ನು ಸ್ವಾಗತಿಸಿ ನಗರ (ಜಿಲ್ಲಾ ) ಕಾಂಗ್ರೆಸ್ ಹಾಗೂ ದಲಿತ ಮಹಾ ಸಭಾದ ಸದಸ್ಯರು ಪುರಭವನ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಮಂಗಳವಾರ ಹರ್ಷಾಚರಣೆ ನಡೆಸಿದರು.</p>.<p>ಸಂಘಟನೆ ಅಧ್ಯಕ್ಷ ಎಸ್.ರಾಜೇಶ್ ಮಾತನಾಡಿ, ‘ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ನಿಸಾರ್ ಅಹಮದ್ ಹಾಗೂ ಜೈನ ಸಮುದಾಯಕ್ಕೆ ಸೇರಿದ್ದ ಹಂಪಾ ನಾಗರಾಜ್ ದಸರಾ ಉದ್ಘಾಟಿಸುವ ಸಂದರ್ಭದಲ್ಲಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಚಕಾರವೆತ್ತಿರಲಿಲ್ಲ. ಆದರೆ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತರಾಗಿರುವ ಬಾನು ಮಸ್ತಾಕ್ ದಸರಾ ಉದ್ಘಾಟಿಸಲು ಸರ್ಕಾರ ಅಹ್ವಾನ ಮಾಡಿರುವುದನ್ನು ಕೆಲ ಸಂಘಟನೆಗಳು ವಿರೋಧಿಸುವುದರ ಮೂಲಕ ನಗರದಲ್ಲಿ ಕೋಮು ಗಲಭೆ ಸೃಷ್ಟಿಸಬೇಕೆಂದು ಪ್ರಯತ್ನಿಸಿದ್ದವು. ಹೈಕೋರ್ಟ್ ಆದೇಶವು ಅವರ ಪ್ರಯತ್ನಕ್ಕೆ ತಣ್ಣೀರೆರಚಿದೆ’ ಎಂದರು.</p>.<p>ಮುಖಂಡರಾದ ಶಿವಣ್ಣ, ಮರಿದೇವಯ್ಯ, ಸುನೀಲ್ ನಾರಾಯಣ, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಕುರುಬರಹಳ್ಳಿ ಪ್ರಕಾಶ್, ಎಸ್.ಎ.ರಹೀಂ, ಅಮ್ರಾನ್ ಪಾಷಾ, ಮಹದೇವು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>