ಮೈಸೂರು: ನಗರದಲ್ಲೆಡೆ ಸಮಪ್ರಮಾಣದಲ್ಲಿ ಮಳೆ ಬೀಳುತ್ತಿಲ್ಲ. ಬಿಸಿಲಿನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಳೆ ಬಿದ್ದರೂ ಉಷ್ಣಾಂಶ ಕಡಿಮೆಯಾಗುತ್ತಿಲ್ಲ. ಇದರಿಂದಾಗಿ ತರಕಾರಿಗಳ ಆವಕ ಕಡಿಮೆಯಾಗುತ್ತಿದೆ. ಇದಕ್ಕೆ ವ್ಯತಿರಿಕ್ತವಾಗಿ ಕೇರಳ ವರ್ತಕರಿಂದ ಬೇಡಿಕೆ ಹೆಚ್ಚುತ್ತಿದೆ. ಹೀಗಾಗಿ, ತರಕಾರಿಗಳ ಬೆಲೆಗಳು ನಿಯಂತ್ರಣಕ್ಕೆ ಬರುತ್ತಿಲ್ಲ.