<p><strong>ಜಯಪುರ: </strong>ಹೋಬಳಿಯ ಬೀರಿಹುಂಡಿ ಗ್ರಾಮದ ರಸ್ತೆಗಳು ಮಳೆಯಿಂದ ಕೆಸರುಗದ್ದೆಯಂತಾಗಿದ್ದು, ಸಂಚಾರ ದುಸ್ತರವಾಗಿದೆ. ಅಲ್ಲಲ್ಲಿ ಗುಂಡಿಗಳು ಬಿದ್ದು, ವಾಹನ ಸವಾರರು ಪರದಾಡುವಂತಾಗಿದೆ.</p>.<p>ಕಳೆದ ವಾರ ಸುರಿದ ಮಳೆಯಿಂದಾಗಿ ಗುಂಡಿಗಳಲ್ಲಿ ನೀರು ನಿಂತು ಪಾದಚಾರಿಗಳು ಓಡಾಡದಂತ ಸ್ಥಿತಿ ನಿರ್ಮಾಣವಾಗಿದೆ.</p>.<p>ಬೀರಿಹುಂಡಿಯಿಂದ ಡಿ.ಸಾಲುಂಡಿ ಸಮೀಪದ ಎಚ್.ಡಿ ಕೋಟೆ ಮುಖ್ಯರಸ್ತೆ ವರೆಗಿನ ಡಾಂಬರು ರಸ್ತೆ ಯೋಜನೆಗೆ ಮೂರು ವರ್ಷಗಳ ಹಿಂದೆ ಮೈಸೂರು ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಅನುದಾನ ಬಿಡುಗಡೆಯಾಗದೇ ಕಾಮಗಾರಿ ಅರ್ಧಕ್ಕೆ ನಿಂತಿದೆ.</p>.<p>‘ಹೋಬಳಿಯ ಅನಗಳ್ಳಿ, ಬೀರಿಹುಂಡಿಗೆ ಹೋಗುವ ರಸ್ತೆಯಲ್ಲಿ ಹಳ್ಳಗಳಾಗಿ ನೀರು ನಿಂತು ಕೆಸರುಮಯವಾಗಿವೆ. ವಾಹನ ಸವಾರರು ತೀವ್ರ ತೊಂದೆರೆ ಅನುಭವಿಸುವಂತಾಗಿದೆ. ಮಳೆ ಬಂದರೆ ಸಮಸ್ಯೆ ಮತ್ತಷ್ಟು ಬಿಗಡಾಯಿಸುತ್ತದೆ’ ಎಂದು ಸ್ಥಳೀಯ ನಿವಾಸಿ ಶ್ರೀನಿವಾಸ್ ದೂರಿದರು.</p>.<p>‘ರಸ್ತೆ ದುರಸ್ತಿಪಡಿಸುವಂತೆ ಹಲವು ಬಾರಿ ಜಿಲ್ಲಾ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಬೀರಿಹುಂಡಿ ಮುಖಂಡ ಸಿ.ಬಸವೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೀರಿಹುಂಡಿಯಿಂದ ಗೋಪಾ ಲಪುರ ಸಂಪರ್ಕಿಸುವ ರಸ್ತೆ ಕಾಮಗಾರಿಯು ಪ್ರಾರಂಭವಾಗಿ ಅರ್ಧಕ್ಕೆ ನಿಂತಿದೆ. ಐದು ಕಡೆ ಡಕ್ ನಿರ್ಮಿಸಲಾಗಿದೆ. ಗುತ್ತಿಗೆದಾರರಿಗೆ ₹ 30 ಕೋಟಿ ಕಾಮಗಾರಿ ಹಣ ತಡೆ ಹಿಡಿದಿರುವುದರಿಂದ ರಸ್ತೆ ಕಾಮಗಾರಿಗೆ ಹಿನ್ನಡೆಯಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬೀರಿಹುಂಡಿ ಬಸವಣ್ಣ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಪುರ: </strong>ಹೋಬಳಿಯ ಬೀರಿಹುಂಡಿ ಗ್ರಾಮದ ರಸ್ತೆಗಳು ಮಳೆಯಿಂದ ಕೆಸರುಗದ್ದೆಯಂತಾಗಿದ್ದು, ಸಂಚಾರ ದುಸ್ತರವಾಗಿದೆ. ಅಲ್ಲಲ್ಲಿ ಗುಂಡಿಗಳು ಬಿದ್ದು, ವಾಹನ ಸವಾರರು ಪರದಾಡುವಂತಾಗಿದೆ.</p>.<p>ಕಳೆದ ವಾರ ಸುರಿದ ಮಳೆಯಿಂದಾಗಿ ಗುಂಡಿಗಳಲ್ಲಿ ನೀರು ನಿಂತು ಪಾದಚಾರಿಗಳು ಓಡಾಡದಂತ ಸ್ಥಿತಿ ನಿರ್ಮಾಣವಾಗಿದೆ.</p>.<p>ಬೀರಿಹುಂಡಿಯಿಂದ ಡಿ.ಸಾಲುಂಡಿ ಸಮೀಪದ ಎಚ್.ಡಿ ಕೋಟೆ ಮುಖ್ಯರಸ್ತೆ ವರೆಗಿನ ಡಾಂಬರು ರಸ್ತೆ ಯೋಜನೆಗೆ ಮೂರು ವರ್ಷಗಳ ಹಿಂದೆ ಮೈಸೂರು ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಅನುದಾನ ಬಿಡುಗಡೆಯಾಗದೇ ಕಾಮಗಾರಿ ಅರ್ಧಕ್ಕೆ ನಿಂತಿದೆ.</p>.<p>‘ಹೋಬಳಿಯ ಅನಗಳ್ಳಿ, ಬೀರಿಹುಂಡಿಗೆ ಹೋಗುವ ರಸ್ತೆಯಲ್ಲಿ ಹಳ್ಳಗಳಾಗಿ ನೀರು ನಿಂತು ಕೆಸರುಮಯವಾಗಿವೆ. ವಾಹನ ಸವಾರರು ತೀವ್ರ ತೊಂದೆರೆ ಅನುಭವಿಸುವಂತಾಗಿದೆ. ಮಳೆ ಬಂದರೆ ಸಮಸ್ಯೆ ಮತ್ತಷ್ಟು ಬಿಗಡಾಯಿಸುತ್ತದೆ’ ಎಂದು ಸ್ಥಳೀಯ ನಿವಾಸಿ ಶ್ರೀನಿವಾಸ್ ದೂರಿದರು.</p>.<p>‘ರಸ್ತೆ ದುರಸ್ತಿಪಡಿಸುವಂತೆ ಹಲವು ಬಾರಿ ಜಿಲ್ಲಾ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಬೀರಿಹುಂಡಿ ಮುಖಂಡ ಸಿ.ಬಸವೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಬೀರಿಹುಂಡಿಯಿಂದ ಗೋಪಾ ಲಪುರ ಸಂಪರ್ಕಿಸುವ ರಸ್ತೆ ಕಾಮಗಾರಿಯು ಪ್ರಾರಂಭವಾಗಿ ಅರ್ಧಕ್ಕೆ ನಿಂತಿದೆ. ಐದು ಕಡೆ ಡಕ್ ನಿರ್ಮಿಸಲಾಗಿದೆ. ಗುತ್ತಿಗೆದಾರರಿಗೆ ₹ 30 ಕೋಟಿ ಕಾಮಗಾರಿ ಹಣ ತಡೆ ಹಿಡಿದಿರುವುದರಿಂದ ರಸ್ತೆ ಕಾಮಗಾರಿಗೆ ಹಿನ್ನಡೆಯಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬೀರಿಹುಂಡಿ ಬಸವಣ್ಣ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>