<p><strong>ಮೈಸೂರು:</strong> ಬೆಂಗಳೂರು ದಂಡು ನಿಲ್ದಾಣದಲ್ಲಿ ರಸ್ತೆ ಮೇಲ್ಸೇತುವೆ ಹಾಗೂ ಏರ್ ಕನ್ಕೋರ್ಸ್ (ಭಾಗ–2) ಕಾಮಗಾರಿ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಮತ್ತು ವಿಳಂಬ ಆಗಲಿದೆ.</p><p><strong>ರೈಲುಗಳ ಮಾರ್ಗ ಬದಲಾವಣೆ:</strong> ರೈಲು ಸಂಖ್ಯೆ 06269 ಮೈಸೂರು–ಎಸ್ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ಫೆ.17ರಿಂದ ಮಾರ್ಚ್ 16ರವರೆಗೆ ತನ್ನ ನಿಯಮಿತ ಮಾರ್ಗವಾದ ಬೆಂಗಳೂರು ದಂಡು ನಿಲ್ದಾಣದಲ್ಲಿ ನಿಲುಗಡೆ ನೀಡದೇ, ಕೆಎಸ್ಆರ್ ಬೆಂಗಳೂರು–ಯಶವಂತಪುರ– ಬಾನಸವಾಡಿ –ಎಸ್ಎಂವಿಟಿ ಬೆಂಗಳೂರು ಮಾರ್ಗದ ಮೂಲಕ ಸಂಚರಿಸಲಿದೆ.</p><p>ಅದೇ ರೀತಿ, ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು–ಮೈಸೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ಫೆ.17ರಿಂದ ಮಾರ್ಚ್ 16ರವರೆಗೆ ತನ್ನ ನಿಯಮಿತ ಮಾರ್ಗವಾದ ಬೆಂಗಳೂರು ದಂಡು ನಿಲ್ದಾಣದಲ್ಲಿ ನಿಲುಗಡೆ ನೀಡದೇ, ಎಸ್ಎಂವಿಟಿ ಬೆಂಗಳೂರು– ಬಾನಸವಾಡಿ –ಯಶವಂತಪುರ–ಕೆಎಸ್ಆರ್ ಬೆಂಗಳೂರು ಮಾರ್ಗದ ಮೂಲಕ ಸಂಚರಿಸಲಿದೆ.</p><p>ರೈಲು ಸಂಖ್ಯೆ 16021 ಎಂ.ಜಿ.ಆರ್ ಚೆನ್ನೈ ಸೆಂಟ್ರಲ್–ಅಶೋಕಪುರಂ ದೈನಂದಿನ ಎಕ್ಸ್ಪ್ರೆಸ್ ಫೆ.17ರಿಂದ ಫೆ.19ರವರೆಗೆ ಹಾಗೂ ಮಾರ್ಚ್ 3 ಮತ್ತು 4ರಂದು ಮಾರ್ಗಮಧ್ಯೆ 30 ನಿಮಿಷಗಳ ಕಾಲ ವಿಳಂಬವಾಗಲಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಬೆಂಗಳೂರು ದಂಡು ನಿಲ್ದಾಣದಲ್ಲಿ ರಸ್ತೆ ಮೇಲ್ಸೇತುವೆ ಹಾಗೂ ಏರ್ ಕನ್ಕೋರ್ಸ್ (ಭಾಗ–2) ಕಾಮಗಾರಿ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ ಮತ್ತು ವಿಳಂಬ ಆಗಲಿದೆ.</p><p><strong>ರೈಲುಗಳ ಮಾರ್ಗ ಬದಲಾವಣೆ:</strong> ರೈಲು ಸಂಖ್ಯೆ 06269 ಮೈಸೂರು–ಎಸ್ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ಫೆ.17ರಿಂದ ಮಾರ್ಚ್ 16ರವರೆಗೆ ತನ್ನ ನಿಯಮಿತ ಮಾರ್ಗವಾದ ಬೆಂಗಳೂರು ದಂಡು ನಿಲ್ದಾಣದಲ್ಲಿ ನಿಲುಗಡೆ ನೀಡದೇ, ಕೆಎಸ್ಆರ್ ಬೆಂಗಳೂರು–ಯಶವಂತಪುರ– ಬಾನಸವಾಡಿ –ಎಸ್ಎಂವಿಟಿ ಬೆಂಗಳೂರು ಮಾರ್ಗದ ಮೂಲಕ ಸಂಚರಿಸಲಿದೆ.</p><p>ಅದೇ ರೀತಿ, ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು–ಮೈಸೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ಫೆ.17ರಿಂದ ಮಾರ್ಚ್ 16ರವರೆಗೆ ತನ್ನ ನಿಯಮಿತ ಮಾರ್ಗವಾದ ಬೆಂಗಳೂರು ದಂಡು ನಿಲ್ದಾಣದಲ್ಲಿ ನಿಲುಗಡೆ ನೀಡದೇ, ಎಸ್ಎಂವಿಟಿ ಬೆಂಗಳೂರು– ಬಾನಸವಾಡಿ –ಯಶವಂತಪುರ–ಕೆಎಸ್ಆರ್ ಬೆಂಗಳೂರು ಮಾರ್ಗದ ಮೂಲಕ ಸಂಚರಿಸಲಿದೆ.</p><p>ರೈಲು ಸಂಖ್ಯೆ 16021 ಎಂ.ಜಿ.ಆರ್ ಚೆನ್ನೈ ಸೆಂಟ್ರಲ್–ಅಶೋಕಪುರಂ ದೈನಂದಿನ ಎಕ್ಸ್ಪ್ರೆಸ್ ಫೆ.17ರಿಂದ ಫೆ.19ರವರೆಗೆ ಹಾಗೂ ಮಾರ್ಚ್ 3 ಮತ್ತು 4ರಂದು ಮಾರ್ಗಮಧ್ಯೆ 30 ನಿಮಿಷಗಳ ಕಾಲ ವಿಳಂಬವಾಗಲಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>