<p><strong>ಮೈಸೂರು</strong>: ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್ ಮರುವಿನ್ಯಾಸ ಕಾಮಗಾರಿ ಕೈಗೊಂಡಿರುವ ಕಾರಣದಿಂದ, ಕೆಲವು ರೈಲುಗಳ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದೆ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗ ತಿಳಿಸಿದೆ.</p><p>ರೈಲು ಸಂಖ್ಯೆ 20687 ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ಏ.29ರಿಂದ ಮೇ 1ರವರೆಗೆ ಯಶವಂತಪುರ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಯಶವಂತಪುರದಲ್ಲೇ ಕೊನೆಗೊಳ್ಳಲಿದೆ.</p><p>ರೈಲು ಸಂಖ್ಯೆ 20688 ಕೆಎಸ್ಆರ್ ಬೆಂಗಳೂರು – ಹುಬ್ಬಳ್ಳಿ ಎಕ್ಸ್ಪ್ರೆಸ್ ಏ.30ರಿಂದ ಮೇ 2ರವರೆಗೆ ಕೆಎಸ್ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಕೆಎಸ್ಆರ್ ಬೆಂಗಳೂರು ಬದಲಿಗೆ ಯಶವಂತಪುರದಿಂದ ನಿಗದಿತ ವೇಳೆಗೆ ಹೊರಡಲಿದೆ.</p><p><strong>ರೈಲುಗಳ ಮಾರ್ಗ ಬದಲಾವಣೆ</strong></p><p>ರೈಲು ಸಂಖ್ಯೆ 12785 ಕಾಚಿಗುಡ – ಅಶೋಕಪುರಂ ಎಕ್ಸ್ಪ್ರೆಸ್ ಏ.29ರಿಂದ ಮೇ 2ರವರೆಗೆ ಯಲಹಂಕ, ಯಶವಂತಪುರ ಹಾಗೂ ಕೆಎಸ್ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಬೆಂಗಳೂರು ಈಸ್ಟ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಲ್ಲುವುದಿಲ್ಲ.</p><p>ರೈಲು ಸಂಖ್ಯೆ 12786 ಅಶೋಕಪುರಂ – ಕಾಚಿಗುಡ ಎಕ್ಸ್ಪ್ರೆಸ್ ಏ.30ರಿಂದ ಮೇ 2ರವರೆಗೆ ಕೆಎಸ್ಆರ್ ಬೆಂಗಳೂರು, ಯಶವಂತಪುರ ಹಾಗೂ ಯಲಹಂಕ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಎಂದು ವಿಭಾಗೀಯ ಹಣಕಾಸು ವ್ಯವಸ್ಥಾಪಕ ಪೃಥ್ವಿ ಎಸ್. ಹುಲ್ಲತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್ ಮರುವಿನ್ಯಾಸ ಕಾಮಗಾರಿ ಕೈಗೊಂಡಿರುವ ಕಾರಣದಿಂದ, ಕೆಲವು ರೈಲುಗಳ ಸೇವೆಯನ್ನು ಭಾಗಶಃ ರದ್ದುಪಡಿಸಲಾಗಿದೆ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗ ತಿಳಿಸಿದೆ.</p><p>ರೈಲು ಸಂಖ್ಯೆ 20687 ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ಏ.29ರಿಂದ ಮೇ 1ರವರೆಗೆ ಯಶವಂತಪುರ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಿದೆ. ಇದು ಯಶವಂತಪುರದಲ್ಲೇ ಕೊನೆಗೊಳ್ಳಲಿದೆ.</p><p>ರೈಲು ಸಂಖ್ಯೆ 20688 ಕೆಎಸ್ಆರ್ ಬೆಂಗಳೂರು – ಹುಬ್ಬಳ್ಳಿ ಎಕ್ಸ್ಪ್ರೆಸ್ ಏ.30ರಿಂದ ಮೇ 2ರವರೆಗೆ ಕೆಎಸ್ಆರ್ ಬೆಂಗಳೂರು ಮತ್ತು ಯಶವಂತಪುರ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಕೆಎಸ್ಆರ್ ಬೆಂಗಳೂರು ಬದಲಿಗೆ ಯಶವಂತಪುರದಿಂದ ನಿಗದಿತ ವೇಳೆಗೆ ಹೊರಡಲಿದೆ.</p><p><strong>ರೈಲುಗಳ ಮಾರ್ಗ ಬದಲಾವಣೆ</strong></p><p>ರೈಲು ಸಂಖ್ಯೆ 12785 ಕಾಚಿಗುಡ – ಅಶೋಕಪುರಂ ಎಕ್ಸ್ಪ್ರೆಸ್ ಏ.29ರಿಂದ ಮೇ 2ರವರೆಗೆ ಯಲಹಂಕ, ಯಶವಂತಪುರ ಹಾಗೂ ಕೆಎಸ್ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಬೆಂಗಳೂರು ಈಸ್ಟ್ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಲ್ಲುವುದಿಲ್ಲ.</p><p>ರೈಲು ಸಂಖ್ಯೆ 12786 ಅಶೋಕಪುರಂ – ಕಾಚಿಗುಡ ಎಕ್ಸ್ಪ್ರೆಸ್ ಏ.30ರಿಂದ ಮೇ 2ರವರೆಗೆ ಕೆಎಸ್ಆರ್ ಬೆಂಗಳೂರು, ಯಶವಂತಪುರ ಹಾಗೂ ಯಲಹಂಕ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಎಂದು ವಿಭಾಗೀಯ ಹಣಕಾಸು ವ್ಯವಸ್ಥಾಪಕ ಪೃಥ್ವಿ ಎಸ್. ಹುಲ್ಲತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>