<p>ಬೆಟ್ಟದಪುರ: ‘ಕಣಗಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು’ ಎಂದು ಸದಸ್ಯರು ಹಾಗೂ ಸ್ಥಳೀಯರು ಆಗ್ರಹಿಸಿದರು.</p>.<p>ಸಮೀಪದ ಕಣಗಾಲು ಗ್ರಾಮದಲ್ಲಿ ಈಚೆಗೆ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮನವಿ ಮಾಡಿದ ಸದಸ್ಯರು, ‘ಸಂಘದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಯದರ್ಶಿಯು ಅವ್ಯವಹಾರ ಮಾಡಿದ್ದು, ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು, ಆದರೆ ಅಧಿಕಾರಿಗಳು, ಪಕ್ಷದವರು ಶಾಮೀಲಾಗಿ ದೊಡ್ಡ ಪಿತೂರಿ ಮಾಡಿಕೊಂಡು ಕಾರ್ಯದರ್ಶಿಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಸಚಿವರ ಮತ್ತು ನಿಮ್ಮ ಹೆಸರುಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ನ್ಯಾಯ ಕೇಳಲು ಹೋಗುವರ ಮೇಲೆ ಪೊಲೀಸರ ಮೂಲಕ ಹೆದರಿಸುತ್ತಾರೆ’ ಎಂದು ಆರೋಪಿಸಿದರು.</p>.<p>ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನೀವು ಸಮಸ್ಯೆಗೆ ಮುಕ್ತಿ ನೀಡಿ, ನ್ಯಾಯ ದೊರಕಿಸಿಕೊಡಬೇಕು ಎಂದು ಡೇರಿ ಸದಸ್ಯರು, ಸ್ಥಳೀಯರು ನಿತಿನ್ ವೆಂಕಟೇಶ್ ಅವರ ಗಮನಕ್ಕೆ ತಂದರು.</p>.<p>ಪ್ರತಿಕ್ರಿಯಿಸಿದ ನಿತಿನ್ ವೆಂಕಟೇಶ್, ‘ಸಮಸ್ಯೆಯ ಬಗ್ಗೆ ತಂದೆ ಕೆ.ವೆಂಕಟೇಶ್ ಅವರ ಬಳಿ ಚರ್ಚಿಸಿ, ಮಾತನಾಡುತ್ತೇನೆ. ಪೊಲೀಸರ ವಿಚಾರದಲ್ಲಿ ಕ್ರಮವಹಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಪಕ್ಷ ಸೇರ್ಪಡೆ:ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಲವರು ಜೆಡಿಎಸ್ನಿಂದ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ತಾಲ್ಲೂಕು ಆಶ್ರಯ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಹೇಳಿದರು.</p>.<p>‘ಪಕ್ಷದ ಸಿದ್ಧಾಂತ ಮೆಚ್ಚಿ ಬರುತ್ತಿದ್ದು, ಸಂಘಟನೆ ಶಕ್ತಿ ಮತ್ತಷ್ಟು ಹೆಚ್ಚಾಗುತ್ತಿದೆ. ಹಿರಿಯ ಕಾರ್ಯಕರ್ತರು ಇದೀಗ ಸೇರ್ಪಡೆಗೊಂಡ ಹೊಸ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಬಲವರ್ಧನೆ ಮುಂದಾಬೇಕು’ ಎಂದರು.</p>.<p>ಶಿವಮ್ಮ, ಪ್ರತಿಮಾ, ಜಯಮ್ಮ, ಭಾಗ್ಯಮ್ಮ, ಮಧು, ಪ್ರಕಾಶ್, ಅರುಣ, ಉಮೇಶ್, ಸ್ವಾಮಿಗೌಡ, ರೇವಣ್ಣ, ಪ್ರಭಾಕರ, ಶ್ರೀನಿವಾಸ, ಧನಪಾಲ್, ಸ್ವಾಮಿಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-38-875338086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಟ್ಟದಪುರ: ‘ಕಣಗಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು’ ಎಂದು ಸದಸ್ಯರು ಹಾಗೂ ಸ್ಥಳೀಯರು ಆಗ್ರಹಿಸಿದರು.</p>.<p>ಸಮೀಪದ ಕಣಗಾಲು ಗ್ರಾಮದಲ್ಲಿ ಈಚೆಗೆ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮನವಿ ಮಾಡಿದ ಸದಸ್ಯರು, ‘ಸಂಘದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಯದರ್ಶಿಯು ಅವ್ಯವಹಾರ ಮಾಡಿದ್ದು, ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು, ಆದರೆ ಅಧಿಕಾರಿಗಳು, ಪಕ್ಷದವರು ಶಾಮೀಲಾಗಿ ದೊಡ್ಡ ಪಿತೂರಿ ಮಾಡಿಕೊಂಡು ಕಾರ್ಯದರ್ಶಿಯನ್ನು ಉಳಿಸುವ ಕೆಲಸ ಮಾಡುತ್ತಿದ್ದಾರೆ. ಸಚಿವರ ಮತ್ತು ನಿಮ್ಮ ಹೆಸರುಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ನ್ಯಾಯ ಕೇಳಲು ಹೋಗುವರ ಮೇಲೆ ಪೊಲೀಸರ ಮೂಲಕ ಹೆದರಿಸುತ್ತಾರೆ’ ಎಂದು ಆರೋಪಿಸಿದರು.</p>.<p>ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನೀವು ಸಮಸ್ಯೆಗೆ ಮುಕ್ತಿ ನೀಡಿ, ನ್ಯಾಯ ದೊರಕಿಸಿಕೊಡಬೇಕು ಎಂದು ಡೇರಿ ಸದಸ್ಯರು, ಸ್ಥಳೀಯರು ನಿತಿನ್ ವೆಂಕಟೇಶ್ ಅವರ ಗಮನಕ್ಕೆ ತಂದರು.</p>.<p>ಪ್ರತಿಕ್ರಿಯಿಸಿದ ನಿತಿನ್ ವೆಂಕಟೇಶ್, ‘ಸಮಸ್ಯೆಯ ಬಗ್ಗೆ ತಂದೆ ಕೆ.ವೆಂಕಟೇಶ್ ಅವರ ಬಳಿ ಚರ್ಚಿಸಿ, ಮಾತನಾಡುತ್ತೇನೆ. ಪೊಲೀಸರ ವಿಚಾರದಲ್ಲಿ ಕ್ರಮವಹಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಪಕ್ಷ ಸೇರ್ಪಡೆ:ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಲವರು ಜೆಡಿಎಸ್ನಿಂದ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ತಾಲ್ಲೂಕು ಆಶ್ರಯ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಹೇಳಿದರು.</p>.<p>‘ಪಕ್ಷದ ಸಿದ್ಧಾಂತ ಮೆಚ್ಚಿ ಬರುತ್ತಿದ್ದು, ಸಂಘಟನೆ ಶಕ್ತಿ ಮತ್ತಷ್ಟು ಹೆಚ್ಚಾಗುತ್ತಿದೆ. ಹಿರಿಯ ಕಾರ್ಯಕರ್ತರು ಇದೀಗ ಸೇರ್ಪಡೆಗೊಂಡ ಹೊಸ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಬಲವರ್ಧನೆ ಮುಂದಾಬೇಕು’ ಎಂದರು.</p>.<p>ಶಿವಮ್ಮ, ಪ್ರತಿಮಾ, ಜಯಮ್ಮ, ಭಾಗ್ಯಮ್ಮ, ಮಧು, ಪ್ರಕಾಶ್, ಅರುಣ, ಉಮೇಶ್, ಸ್ವಾಮಿಗೌಡ, ರೇವಣ್ಣ, ಪ್ರಭಾಕರ, ಶ್ರೀನಿವಾಸ, ಧನಪಾಲ್, ಸ್ವಾಮಿಗೌಡ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-38-875338086</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>