<p><strong>ಬೆಟ್ಟದಪುರ</strong>: ಸಮೀಪದ ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ ಆಚರಣೆ ಮಾಡಲಾಯಿತು.</p>.<p>ಕೇಂದ್ರದ ಆರೋಗ್ಯ ನಿರೀಕ್ಷಾಣಾಧಿಕಾರಿ ಎಚ್.ಎಸ್.ರವಿ ಮಾತನಾಡಿ, ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ರಕ್ಷಿಸಿಕೊಳ್ಳಲು ಜಂತುಹುಳು ನಿವಾರಣೆಯ ಆಲ್ಬೆಂಡಜೋಲ್ ಮಾತ್ರೆ ಸೇವಿಸಬೇಕು. ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತವಾಗದಂತೆ ಜಂತು ಹುಳು ಮಾತ್ರೆ ಸೇವನೆಯಿಂದ ರಕ್ಷಿಸಿಕೊಳ್ಳಬಹುದು ಎಂದರು.</p>.<p>ಮಕ್ಕಳು ಉಗುರುಗಳನ್ನು ಸ್ವಚ್ಚವಾಗಿ ಮತ್ತು ಚಿಕ್ಕದಾಗಿ ಇರಿಸಿಕೊಳ್ಳಬೇಕು. ಜಂತುಹುಳುಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಶುದ್ಧ ನೀರನ್ನು ಕುಡಿಯಬೇಕು. ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.</p>.<p>ಮುಖ್ಯಶಿಕ್ಷಕ ಎಸ್.ಮಹೇಶ್, ಮಂಜುನಾಥ್ ಶಿಕ್ಷಕ ಅಶೋಕ್, ಆರೋಗ್ಯ ಸುರಕ್ಷಾಧಿಕಾರಿ ಚೈತ್ರಾ, ಸಮುದಾಯ ಆರೋಗ್ಯಾಧಿಕಾರಿ ಜಿ.ಎಂ.ರಚನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟದಪುರ</strong>: ಸಮೀಪದ ಚಪ್ಪರದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ ಆಚರಣೆ ಮಾಡಲಾಯಿತು.</p>.<p>ಕೇಂದ್ರದ ಆರೋಗ್ಯ ನಿರೀಕ್ಷಾಣಾಧಿಕಾರಿ ಎಚ್.ಎಸ್.ರವಿ ಮಾತನಾಡಿ, ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ರಕ್ಷಿಸಿಕೊಳ್ಳಲು ಜಂತುಹುಳು ನಿವಾರಣೆಯ ಆಲ್ಬೆಂಡಜೋಲ್ ಮಾತ್ರೆ ಸೇವಿಸಬೇಕು. ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತವಾಗದಂತೆ ಜಂತು ಹುಳು ಮಾತ್ರೆ ಸೇವನೆಯಿಂದ ರಕ್ಷಿಸಿಕೊಳ್ಳಬಹುದು ಎಂದರು.</p>.<p>ಮಕ್ಕಳು ಉಗುರುಗಳನ್ನು ಸ್ವಚ್ಚವಾಗಿ ಮತ್ತು ಚಿಕ್ಕದಾಗಿ ಇರಿಸಿಕೊಳ್ಳಬೇಕು. ಜಂತುಹುಳುಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಶುದ್ಧ ನೀರನ್ನು ಕುಡಿಯಬೇಕು. ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.</p>.<p>ಮುಖ್ಯಶಿಕ್ಷಕ ಎಸ್.ಮಹೇಶ್, ಮಂಜುನಾಥ್ ಶಿಕ್ಷಕ ಅಶೋಕ್, ಆರೋಗ್ಯ ಸುರಕ್ಷಾಧಿಕಾರಿ ಚೈತ್ರಾ, ಸಮುದಾಯ ಆರೋಗ್ಯಾಧಿಕಾರಿ ಜಿ.ಎಂ.ರಚನಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>