ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಕಳೆದ 15 ದಿನಗಳ ಹಿಂದೆ ಸಸಿ ನಾಟಿ ಮಾಡಿ, ಬೆಳೆಗೆ ಗೊಬ್ಬರ ಹಾಕಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ನಾಟಿ ಮಾಡಿದ ತಂಬಾಕು ಹಾನಿಯಾಗಿದೆ. ಬ್ಯಾಂಕಿನಿಂದ ಸಾಲ ಪಡೆದು ಬೇಸಾಯ ಮಾಡಲಾಗಿದ್ದು, ಅತಿಯಾದ ಮಳೆಯಿಂದ ಬೆಳೆಯು ಕೈಗೆ ಸಿಗದಂತಾಗಿದೆ. ಕೂಡಲೇ ತಂಬಾಕು ಮಂಡಳಿ ನಿರ್ದೇಶಕರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಸೂಕ್ತ ಪರಿಹಾರ ಒದಗಿಸುವಂತೆ’ ರೈತ ಅತ್ತರ್ ಮತೀನ್ ಮನವಿ ಮಾಡಿದ್ದರು.