ಕಾರಿನ ಚಕ್ರ ಕಳ್ಳರ ಬಂಧನ: ರಾತ್ರಿ ಹೊತ್ತು ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಚಕ್ರಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕುವೆಂಪುನಗರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಶ್ರೀರಂಗಪಟ್ಟಣದ ಗಂಜಾಂನ ಸಿದ್ದಿಕ್ (24), ಶಾರೂಖ್ ಖಾನ್ (25), ಮೈಸೂರು ನಗರದ ಕೆಸರೆಯ ಸಕ್ಲೆನ್ ಮುಷ್ತಾಕ್ (24) ಬಂಧಿತರು. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತರಿಂದ ₹2.56 ಲಕ್ಷ ಮೌಲ್ಯದ ಮೂರು ಕಾರುಗಳ 12 ಚಕ್ರಗಳು, ಕಳ್ಳತನ ಮಾಡಿದ್ದ 2 ಸ್ಕೂಟರ್ಗಳು, ಕೃತ್ಯಕ್ಕೆ ಬಳಸಿದ್ದ ₹1.5 ಲಕ್ಷ ಮೌಲ್ಯದ ಕಾರ್, ₹40 ಸಾವಿರ ವೌಲ್ಯದ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
‘ದಟ್ಟಗಳ್ಳಿಯ ಯೂನಿವರ್ಸಿಟಿ ಲೇಔಟ್ನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಚಕ್ರ ಕಳವಾಗಿರುವ ಬಗ್ಗೆ ಕಾರಿನ ಮಾಲೀಕರು ನೀಡಿದ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಮೂವರು ಖದೀಮರನ್ನು ಬಂಧಿಸಿದ್ದಾರೆ’ ಎಂದು ರಮೇಶ್ ಬಾನೋತ್ ತಿಳಿಸಿದರು.
ಡಿಸಿಪಿ ಎಸ್.ಜಾಹ್ನವಿ ಮಾರ್ಗದರ್ಶನದಲ್ಲಿ ಎಸಿಪಿ ಗಂಗಾಧರ ಸ್ವಾಮಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕುವೆಂಪು ನಗರ ಠಾಣೆ ಇನ್ಸ್ಪೆಕ್ಟರ್ ಎಲ್.ಅರುಣ್, ಎಸ್ಐಗಳಾದ ಎಸ್.ಪಿ.ಗೋಪಾಲ್, ಎಂ.ರಾಧಾ, ಸಿಬ್ಬಂದಿಯಾದ ವಿ.ಆನಂದ್, ಎಂ.ಪಿ. ಮಂಜುನಾಥ್, ಹಜರತ್, ಪುಟ್ಟಪ್ಪ, ಸುರೇಶ್, ನಾಗೇಶ, ಅಮೋಘ್, ಕುಮಾರ್ ಇದ್ದರು.