<p><strong>ಜಯಪುರ</strong>: ಗ್ರಾಮದ ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿನ ಬಿಲ್ಲಯ್ಯ ಸ್ವಾಮಿ ದೇಗುಲ ಶುಕ್ರವಾರ ಉದ್ಘಾಟನೆಗೊಂಡಿತು.</p>.<p>25 ವರ್ಷಗಳಿಂದ ಪಾಳು ಬಿದ್ದಿದ್ದ ದೇಗುಲಕ್ಕೆ ಮೈಮುಲ್ ಮಾಜಿ ಅಧ್ಯಕ್ಷ, ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷ ಮಾವಿನಹಳ್ಳಿ ಎಸ್.ಸಿದ್ದೇಗೌಡ ಅವರು ಸ್ವಂತ ಹಣ ಖರ್ಚು ಮಾಡಿ ದುರಸ್ತಿಪಡಿಸಿದ್ದರು. </p>.<p>ಬಿಲ್ಲಯ್ಯ ಸ್ವಾಮಿ ವಿಗ್ರಹವನ್ನು ತಮಿಳುನಾಡಿನ ಶಿಲ್ಪಿಗಳ ಮೂಲಕ ಕೆತ್ತನೆ ಮಾಡಿಸಿ, ದೇವಾಲಯ ಮತ್ತು ಗೋಪುರಕ್ಕೆ ಬಣ್ಣ ಮಾಡಿಸಿದ್ದರು.</p>.<p>ಬರಡನಪುರ ಗಣೇಶ್ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಹೋಮ, ಹವನಗಳು ಜರುಗಿದವು. ಗರ್ಭಗುಡಿಯಲ್ಲಿನ ಬಿಲ್ಲಯ್ಯ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಮಹಾಮಂಗಳಾರತಿ ನೆರವೇರಿಸುವ ಮೂಲಕ ನೆರೆದಿದ್ದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.</p>.<p>ದೇವಾಲಯ ಸಮಿತಿ ಸದಸ್ಯರು, ಜಯಪುರ, ಮಾವಿನಹಳ್ಳಿ ಮತ್ತು ಬರಡನಪುರ ಗ್ರಾಮಸ್ಥರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಪುರ</strong>: ಗ್ರಾಮದ ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿನ ಬಿಲ್ಲಯ್ಯ ಸ್ವಾಮಿ ದೇಗುಲ ಶುಕ್ರವಾರ ಉದ್ಘಾಟನೆಗೊಂಡಿತು.</p>.<p>25 ವರ್ಷಗಳಿಂದ ಪಾಳು ಬಿದ್ದಿದ್ದ ದೇಗುಲಕ್ಕೆ ಮೈಮುಲ್ ಮಾಜಿ ಅಧ್ಯಕ್ಷ, ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷ ಮಾವಿನಹಳ್ಳಿ ಎಸ್.ಸಿದ್ದೇಗೌಡ ಅವರು ಸ್ವಂತ ಹಣ ಖರ್ಚು ಮಾಡಿ ದುರಸ್ತಿಪಡಿಸಿದ್ದರು. </p>.<p>ಬಿಲ್ಲಯ್ಯ ಸ್ವಾಮಿ ವಿಗ್ರಹವನ್ನು ತಮಿಳುನಾಡಿನ ಶಿಲ್ಪಿಗಳ ಮೂಲಕ ಕೆತ್ತನೆ ಮಾಡಿಸಿ, ದೇವಾಲಯ ಮತ್ತು ಗೋಪುರಕ್ಕೆ ಬಣ್ಣ ಮಾಡಿಸಿದ್ದರು.</p>.<p>ಬರಡನಪುರ ಗಣೇಶ್ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಹೋಮ, ಹವನಗಳು ಜರುಗಿದವು. ಗರ್ಭಗುಡಿಯಲ್ಲಿನ ಬಿಲ್ಲಯ್ಯ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಮಹಾಮಂಗಳಾರತಿ ನೆರವೇರಿಸುವ ಮೂಲಕ ನೆರೆದಿದ್ದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.</p>.<p>ದೇವಾಲಯ ಸಮಿತಿ ಸದಸ್ಯರು, ಜಯಪುರ, ಮಾವಿನಹಳ್ಳಿ ಮತ್ತು ಬರಡನಪುರ ಗ್ರಾಮಸ್ಥರು ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>