<p><strong>ನಂಜನಗೂಡು</strong>: ತಾಲ್ಲೂಕಿನ ಕೆಂಪಿಸಿದ್ದನಹುಂಡಿಯಲ್ಲಿ ಹುಟ್ಟುಹಬ್ಬದ ಆಚರಣೆಗೆಂದು ಕರೆಸಿಕೊಂಡ ಸ್ನೇಹಿತರೆಲ್ಲರೂ ಸೇರಿ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕೆ.ಕೆ.ಸ್ವಾಮಿ ಅವರ ಪುತ್ರ ಕಿರಣ್ ಈಚೆಗೆ ಮೃತಪಟ್ಟರು.</p>.<p>ಘಟನೆ ಸಂಬಂಧ ಕೆಂಪಿಸಿದ್ದನಹುಂಡಿ ಗ್ರಾಮದ ವಸಂತಕುಮಾರ, ಮಧುಸೂದನ, ರವಿಚಂದ್ರ, ಚಂದ್ರ, ಸಿದ್ದರಾಜು ಎಂಬ ಐವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p><strong>ಘಟನೆ ವಿವರ:</strong> ಜುಲೈ 15ರಂದು ಸ್ನೇಹಿತ ರವಿಚಂದ್ರ ಎಂಬುವವನ ಹುಟ್ಟುಹಬ್ಬದ ಆಚರಣೆಗಾಗಿ ತನ್ನ ಸ್ನೇಹಿತರಾದ ವಸಂತಕುಮಾರ, ಮಧುಸೂದನ್, ರವಿಚಂದ್ರ, ಚಂದ್ರ, ಸಿದ್ದರಾಜು ಎಂಬುವವರ ಜೊತೆಗೆ ಕಿರಣ್ ತೆರಳಿದ್ದನು. ಸಂಭ್ರಮಾಚರಣೆಯಲ್ಲಿ ಮಧ್ಯಪಾನ ಮಾಡುತ್ತಿದ್ದ ವೇಳೆ ವಸಂತನ ಮೊಬೈಲ್ಗೆ ಯುವತಿಯೊಬ್ಬಳು ಕರೆ ಮಾಡಿದ್ದಾಳೆ. ಆ ಕರೆಯನ್ನು ಕಿರಣ್ ರಿಸೀವ್ ಮಾಡಿದ್ದರಿಂದ ಕೋಪಗೊಂಡ ವಸಂತ, ಕಿರಣ್ಗೆ ಥಳಿಸಿ ಹಲ್ಲೆ ನಡೆಸಿದ್ದಾನೆ. ಬೈಕ್ ಹರಿಸಿ ಕೊಲೆಗೆ ಯತ್ನಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.</p>.<p>ಆರೋಪಿಗಳು ಕಿರಣ್ ಅಪಘಾತವಾಗಿ ಗಾಯಗೊಂಡಿದ್ದಾನೆಂದು ಬಿಂಬಿಸಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ತನಿಖೆ ನಡೆಸಿ ಇದು ಅಪಘಾತವಲ್ಲ, ಉದ್ದೇಶ ಪೂರ್ವಕವಾಗಿ ಕೊಲೆ ನಡೆಸಿದ್ದಾರೆ ಎಂದು ಪ್ರಕರಣದ ಸತ್ಯಾಂಶ ಭೇದಿಸಿದ್ದಾರೆ. ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ತಾಲ್ಲೂಕಿನ ಕೆಂಪಿಸಿದ್ದನಹುಂಡಿಯಲ್ಲಿ ಹುಟ್ಟುಹಬ್ಬದ ಆಚರಣೆಗೆಂದು ಕರೆಸಿಕೊಂಡ ಸ್ನೇಹಿತರೆಲ್ಲರೂ ಸೇರಿ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕೆ.ಕೆ.ಸ್ವಾಮಿ ಅವರ ಪುತ್ರ ಕಿರಣ್ ಈಚೆಗೆ ಮೃತಪಟ್ಟರು.</p>.<p>ಘಟನೆ ಸಂಬಂಧ ಕೆಂಪಿಸಿದ್ದನಹುಂಡಿ ಗ್ರಾಮದ ವಸಂತಕುಮಾರ, ಮಧುಸೂದನ, ರವಿಚಂದ್ರ, ಚಂದ್ರ, ಸಿದ್ದರಾಜು ಎಂಬ ಐವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p><strong>ಘಟನೆ ವಿವರ:</strong> ಜುಲೈ 15ರಂದು ಸ್ನೇಹಿತ ರವಿಚಂದ್ರ ಎಂಬುವವನ ಹುಟ್ಟುಹಬ್ಬದ ಆಚರಣೆಗಾಗಿ ತನ್ನ ಸ್ನೇಹಿತರಾದ ವಸಂತಕುಮಾರ, ಮಧುಸೂದನ್, ರವಿಚಂದ್ರ, ಚಂದ್ರ, ಸಿದ್ದರಾಜು ಎಂಬುವವರ ಜೊತೆಗೆ ಕಿರಣ್ ತೆರಳಿದ್ದನು. ಸಂಭ್ರಮಾಚರಣೆಯಲ್ಲಿ ಮಧ್ಯಪಾನ ಮಾಡುತ್ತಿದ್ದ ವೇಳೆ ವಸಂತನ ಮೊಬೈಲ್ಗೆ ಯುವತಿಯೊಬ್ಬಳು ಕರೆ ಮಾಡಿದ್ದಾಳೆ. ಆ ಕರೆಯನ್ನು ಕಿರಣ್ ರಿಸೀವ್ ಮಾಡಿದ್ದರಿಂದ ಕೋಪಗೊಂಡ ವಸಂತ, ಕಿರಣ್ಗೆ ಥಳಿಸಿ ಹಲ್ಲೆ ನಡೆಸಿದ್ದಾನೆ. ಬೈಕ್ ಹರಿಸಿ ಕೊಲೆಗೆ ಯತ್ನಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.</p>.<p>ಆರೋಪಿಗಳು ಕಿರಣ್ ಅಪಘಾತವಾಗಿ ಗಾಯಗೊಂಡಿದ್ದಾನೆಂದು ಬಿಂಬಿಸಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದರು.</p>.<p>ಪ್ರಕರಣ ದಾಖಲಿಸಿಕೊಂಡ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ತನಿಖೆ ನಡೆಸಿ ಇದು ಅಪಘಾತವಲ್ಲ, ಉದ್ದೇಶ ಪೂರ್ವಕವಾಗಿ ಕೊಲೆ ನಡೆಸಿದ್ದಾರೆ ಎಂದು ಪ್ರಕರಣದ ಸತ್ಯಾಂಶ ಭೇದಿಸಿದ್ದಾರೆ. ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>