<p><strong>ಮೈಸೂರು:</strong> ‘ಡಿಐಜಿ ರಾಮಚಂದ್ರ ರಾವ್ ವಜಾಗೊಳಿಸಬೇಕು ಹಾಗೂ ಶಿಡ್ಲಘಟ್ಟದ ರಾಜೀವಗೌಡರನ್ನು ತಕ್ಷಣ ಬಂಧಿಸಬೇಕು’ ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಗ್ರಾಮಾಂತರ ಮಹಿಳಾ ಮೋರ್ಚಾ ಸದಸ್ಯೆಯರು ಎಡಿಸಿ ಪಿ.ಶಿವರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಕುಂಬರಹಳ್ಳಿ ಸುಬ್ಬಣ್ಣ ಮಾತನಾಡಿ, ‘ಕಾನೂನು ರಕ್ಷಕರೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಜನಸಾಮಾನ್ಯರಿಗೆ ನ್ಯಾಯ ಹೇಗೆ ದೊರೆಯುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಿ ಗೌಡ ಮಾತನಾಡಿ, ‘ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಯಾವುದೇ ರಾಜಕೀಯ ಅಥವಾ ಅಧಿಕಾರದ ಪ್ರಭಾವಕ್ಕೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್ ರಾಜೇ ಅರಸು ಮತ್ತು ನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಮಾತನಾಡಿದರು.</p>.<p>ರಾಜ್ಯ ಉಪಾಧ್ಯಕ್ಷೆ ಪ್ರಪುಲ್ಲಾ ಮಲ್ಲಾಡಿ, ನಿಕಟ ಪೂರ್ವ ಜಿಲ್ಲಾದ್ಯಕ್ಷೆ ಮಂಗಳ ಸೋಮಶೇಖರ್, ಉಪಾಧ್ಯಕ್ಷೆ ಸುಲೋಚನ, ಲಕ್ಷ್ಮಿ, ಅರುಣಾ, ಮಂಜುಳಾ ತಟ್ಟೆಕೆರೆ, ನಿವೇದಿತಾ, ಅರುಣ ಮತ್ತು ಲಕ್ಷ್ಮಣ ತಟ್ಟೆಕೆರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಡಿಐಜಿ ರಾಮಚಂದ್ರ ರಾವ್ ವಜಾಗೊಳಿಸಬೇಕು ಹಾಗೂ ಶಿಡ್ಲಘಟ್ಟದ ರಾಜೀವಗೌಡರನ್ನು ತಕ್ಷಣ ಬಂಧಿಸಬೇಕು’ ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಗ್ರಾಮಾಂತರ ಮಹಿಳಾ ಮೋರ್ಚಾ ಸದಸ್ಯೆಯರು ಎಡಿಸಿ ಪಿ.ಶಿವರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಕುಂಬರಹಳ್ಳಿ ಸುಬ್ಬಣ್ಣ ಮಾತನಾಡಿ, ‘ಕಾನೂನು ರಕ್ಷಕರೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡರೆ ಜನಸಾಮಾನ್ಯರಿಗೆ ನ್ಯಾಯ ಹೇಗೆ ದೊರೆಯುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಿ ಗೌಡ ಮಾತನಾಡಿ, ‘ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಯಾವುದೇ ರಾಜಕೀಯ ಅಥವಾ ಅಧಿಕಾರದ ಪ್ರಭಾವಕ್ಕೆ ಅವಕಾಶ ನೀಡಬಾರದು’ ಎಂದು ಆಗ್ರಹಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್ ರಾಜೇ ಅರಸು ಮತ್ತು ನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಮಾತನಾಡಿದರು.</p>.<p>ರಾಜ್ಯ ಉಪಾಧ್ಯಕ್ಷೆ ಪ್ರಪುಲ್ಲಾ ಮಲ್ಲಾಡಿ, ನಿಕಟ ಪೂರ್ವ ಜಿಲ್ಲಾದ್ಯಕ್ಷೆ ಮಂಗಳ ಸೋಮಶೇಖರ್, ಉಪಾಧ್ಯಕ್ಷೆ ಸುಲೋಚನ, ಲಕ್ಷ್ಮಿ, ಅರುಣಾ, ಮಂಜುಳಾ ತಟ್ಟೆಕೆರೆ, ನಿವೇದಿತಾ, ಅರುಣ ಮತ್ತು ಲಕ್ಷ್ಮಣ ತಟ್ಟೆಕೆರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>