<p>ಮೈಸೂರು: ‘ಬಿಜೆಪಿಯವರು ಹೇಳುವುದು ಒಂದು, ಮಾಡುವುದು ಇನ್ನೊಂದು. ದಲಿತರು, ಹಿಂದುಳಿದವರು, ಶೋಷಿತರ ಬಗ್ಗೆ ಇವರಿಗೆ ಕಿಂಚಿತ್ ಕಾಳಜಿಯಿಲ್ಲ’ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶುಕ್ರವಾರ ಇಲ್ಲಿ ಟೀಕಿಸಿದರು.</p>.<p>ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ, ಒಂದು ತಾಸಿಗೂ ಹೆಚ್ಚಿನ ಸಮಯ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದವರಿಗೆ ಅವಕಾಶ ನೀಡಿರಬಹುದು. ಆದರೆ, ಮಂಡಲ್ ಆಯೋಗದ ವರದಿ ಜಾರಿಗೊಳಿಸಲು ವಿ.ಪಿ.ಸಿಂಗ್ ಮುಂದಾದಾಗ ರಥಯಾತ್ರೆ ಹೊರಟವರು ಯಾರು? ಇದೇ ಬಿಜೆಪಿಯ ಲಾಲ್ಕೃಷ್ಣ ಅಡ್ವಾಣಿ ಅವರಲ್ಲವೇ?’ ಎಂದು ಮಹದೇವಪ್ಪ ಕಿಡಿಕಾರಿದರು.</p>.<p>‘ಜಾತಿ ಗುರುತಿಸಿ ಸಚಿವ ಸ್ಥಾನ ನೀಡುವುದು ಮತ್ತು ಅದನ್ನೇ ಹೇಳಿಕೊಳ್ಳುವುದು ಜಾತ್ಯತೀತ ವ್ಯವಸ್ಥೆಗೆ ಮಾಡಿದ ಅಪಮಾನ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸುತ್ತೂರು ಮತ್ತು ನಮ್ಮೂರು ಹದಿನಾರು ಅಕ್ಕಪಕ್ಕದ ಗ್ರಾಮಗಳು. ನಾನು ಶ್ರೀಗಳನ್ನು ಆಗಾಗ್ಗೆ ಭೇಟಿ ಆಗುತ್ತೇನೆ. ಇಂದಿನ ಭೇಟಿ ವಿಶೇಷವಲ್ಲ. ಅವರ ಪೂರ್ವಾಶ್ರಮದ ಮಾತೃಶ್ರೀ ನಿಧನರಾದ ಬಳಿಕ ಭೇಟಿ ಆಗಿರಲಿಲ್ಲ. ಈಗ ಭೇಟಿಯಾಗಿ ಮಾತನಾಡಿದೆಯಷ್ಟೇ’ ಎಂದು ಮಹದೇವಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಬಿಜೆಪಿಯವರು ಹೇಳುವುದು ಒಂದು, ಮಾಡುವುದು ಇನ್ನೊಂದು. ದಲಿತರು, ಹಿಂದುಳಿದವರು, ಶೋಷಿತರ ಬಗ್ಗೆ ಇವರಿಗೆ ಕಿಂಚಿತ್ ಕಾಳಜಿಯಿಲ್ಲ’ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶುಕ್ರವಾರ ಇಲ್ಲಿ ಟೀಕಿಸಿದರು.</p>.<p>ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ, ಒಂದು ತಾಸಿಗೂ ಹೆಚ್ಚಿನ ಸಮಯ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿಂದುಳಿದವರಿಗೆ ಅವಕಾಶ ನೀಡಿರಬಹುದು. ಆದರೆ, ಮಂಡಲ್ ಆಯೋಗದ ವರದಿ ಜಾರಿಗೊಳಿಸಲು ವಿ.ಪಿ.ಸಿಂಗ್ ಮುಂದಾದಾಗ ರಥಯಾತ್ರೆ ಹೊರಟವರು ಯಾರು? ಇದೇ ಬಿಜೆಪಿಯ ಲಾಲ್ಕೃಷ್ಣ ಅಡ್ವಾಣಿ ಅವರಲ್ಲವೇ?’ ಎಂದು ಮಹದೇವಪ್ಪ ಕಿಡಿಕಾರಿದರು.</p>.<p>‘ಜಾತಿ ಗುರುತಿಸಿ ಸಚಿವ ಸ್ಥಾನ ನೀಡುವುದು ಮತ್ತು ಅದನ್ನೇ ಹೇಳಿಕೊಳ್ಳುವುದು ಜಾತ್ಯತೀತ ವ್ಯವಸ್ಥೆಗೆ ಮಾಡಿದ ಅಪಮಾನ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಸುತ್ತೂರು ಮತ್ತು ನಮ್ಮೂರು ಹದಿನಾರು ಅಕ್ಕಪಕ್ಕದ ಗ್ರಾಮಗಳು. ನಾನು ಶ್ರೀಗಳನ್ನು ಆಗಾಗ್ಗೆ ಭೇಟಿ ಆಗುತ್ತೇನೆ. ಇಂದಿನ ಭೇಟಿ ವಿಶೇಷವಲ್ಲ. ಅವರ ಪೂರ್ವಾಶ್ರಮದ ಮಾತೃಶ್ರೀ ನಿಧನರಾದ ಬಳಿಕ ಭೇಟಿ ಆಗಿರಲಿಲ್ಲ. ಈಗ ಭೇಟಿಯಾಗಿ ಮಾತನಾಡಿದೆಯಷ್ಟೇ’ ಎಂದು ಮಹದೇವಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>