<p><strong>ಮೈಸೂರು</strong>: ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಸೋತಿರುವುದು ವೈಯಕ್ತಿಕವಾಗಿ ಬೇಸರ ತಂದಿದೆ. ಹಿಂದುಳಿದ ವರ್ಗಕ್ಕೆ ಸೇರಿರುವ ಅವರ ಸೋಲಿಗೆ ಬಿಜೆಪಿಯವರೇ ಪ್ರಮುಖ ಕಾರಣ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ‘ಪರಿಶಿಷ್ಟರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿಗೆ ಕಾಳಜಿಯಿಲ್ಲ. ಬಿಜೆಪಿಯವರು ಮೇಲ್ವರ್ಗಕ್ಕೆ ಸೇರಿದ್ದ ಅಭ್ಯರ್ಥಿಯನ್ನು ನಿಲ್ಲಿಸಿದ್ದರೆ, ಈ ರೀತಿ ಚುನಾವಣೆ ಎದುರಿಸುತ್ತಿದ್ದರೇ ಎಂಬುದು ಕಾಂಗ್ರೆಸ್ನ ಪ್ರಶ್ನೆ’ ಎಂದರು.</p>.<p>‘ಸಾಮಾಜಿಕ ನ್ಯಾಯ, ಅವಕಾಶ ಇದ್ದರೆ ಅದು ಕಾಂಗ್ರೆಸ್ನಲ್ಲಿ ಮಾತ್ರ. ಬಿಜೆಪಿಯಲ್ಲಿ ಇಲ್ಲ. ಹಿಂದುಳಿದ ವರ್ಗದ ಅಭ್ಯರ್ಥಿಯನ್ನು ನಿಲ್ಲಿಸಿ, ಸೋಲಿಸುವ ಕೆಲಸ ಮಾಡಿದ್ದಾರೆ. ತಲೆ ಮೇಲೆ ಕಲ್ಲು ಹಾಕಿದ್ದಾರೆ’ ಎಂದು ದೂರಿದರು.</p>.<p>‘ನಾವು ಪರಿಶಿಷ್ಟ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯನ್ನು ಕಣಕ್ಕಿಳಿಸಿದಾಗ ಅವರ ನಾಮಪತ್ರ ತಿರಸ್ಕರಿಸುವಂತೆ ಬಿಜೆಪಿಯವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ರಘು ಮೂಲಕ ಆ ಕೆಲಸವನ್ನು ಬಿಜೆಪಿಯವರೇ ಮಾಡಿಸಿದ್ದರು. ದಲಿತ ಅಭ್ಯರ್ಥಿಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿರುವುದು ಸ್ಪಷ್ಟವಾಗಿದೆ. ಅದರಿಂದ ದಲಿತರು ಬಿಜೆಪಿಗೆ ವಿರುದ್ಧವಾಗಿ ನಿಂತರು’ ಎಂದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜೆಡಿಎಸ್ ಅಭ್ಯರ್ಥಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಅದು ಒಕ್ಕಲಿಗೆ ಸಮುದಾಯದ ಅಸಮಾಧಾನಕ್ಕೆ ಕಾರಣವಾಯಿತು. ಮತದಾರರು ಎರಡನೇ ಪ್ರಾಶಸ್ತ್ಯದ ಮತವನ್ನೂ ಬಿಜೆಪಿಯವರಿಗೆ ಕೊಡಲಿಲ್ಲ’ ಎಂದು ವಿಶ್ಲೇಷಿಸಿದರು.</p>.<p>‘ಜೆಡಿಎಸ್ ನಿರ್ನಾಮವಾದರೆ ಅದಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರೇ ಕಾರಣ. ಕೋಮುವಾದಿ ಬಿಜೆಪಿ ಜತೆ ಕೈಜೋಡಿಸಿದರೆ ಸಂಪೂರ್ಣ ನಾಶ ಆಗುವುದರಲ್ಲಿ ಅನುಮಾನವಿಲ್ಲ. 2015ರ ವಿಧಾನ ಪರಿಷತ್ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ಗೆ ನಾಲ್ಕು ಸ್ಥಾನಗಳು ಲಭಿಸಿದ್ದವು. ಈ ಬಾರಿ ಒಂದು ಸ್ಥಾನ ಮಾತ್ರ ಸಿಕ್ಕಿದೆ. ನಿಮ್ಮ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಮಂಡ್ಯದಲ್ಲೇ ಸೋತಿದ್ದೀರಿ. ಒಕ್ಕಲಿಗ ಸಮುದಾಯವು ಜೆಡಿಎಸ್ ಜತೆಗಿದ್ದಾರೆ ಎಂಬ ಭ್ರಮೆ ಬಿಟ್ಟುಬಿಡಿ’ ಎಂದರು.</p>.<p>ಕಾಂಗ್ರೆಸ್ನ ವಿಜೇತ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಎಂ.ಶಿವಣ್ಣ, ಬಿ.ಎಂ.ರಾಮು, ಗಿರೀಶ್ ಪಾಲ್ಗೊಂಡರು.</p>.<p><strong>‘ಫೆ.14ರ ಬಳಿಕ ಸಿ.ಎಂ ಬದಲು’</strong>: ‘ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾಗುವುದು ಖಚಿತ. ಬಸವರಾಜ ಬೊಮ್ಮಾಯಿ ಅವರನ್ನು ಫೆ.14ರ ಬಳಿಕ ಬದಲಾಯಿಸಲು ಬಿಜೆಪಿ ಹೈಕಮಾಂಡ್ ಈಗಾಗಲೇ ನಿರ್ಧರಿಸಿದೆ’ ಎಂದು ಲಕ್ಷ್ಮಣ ಹೇಳಿದರು.</p>.<p>‘ರಾಜ್ಯದಲ್ಲಿ ಮೂವರನ್ನು ಸಿ.ಎಂ ಮಾಡುವ ಗುರಿಯನ್ನು ಬಿಜೆಪಿ ಹೊಂದಿದೆ. ಬಿ.ಎಸ್.ಯಡಿಯೂರಪ್ಪ ಬಳಿಕ ಇದೀಗ ಬೊಮ್ಮಾಯಿ ಆಗಿದ್ದಾರೆ. ಅವರನ್ನೂ ಕೆಳಗಿಳಿಸಿ ಒಬ್ಬ ಡಮ್ಮಿ ವ್ಯಕ್ತಿಯನ್ನು ಕೂರಿಸಲಿದ್ದಾರೆ. ನಮಗೆ ದೆಹಲಿಯಿಂದಲೇ ಮಾಹಿತಿ ದೊರೆಯುತ್ತಿದೆ. ಬಿಜೆಪಿಯವರೇ ಆ ಮಾಹಿತಿ ಕೊಡುತ್ತಿದ್ದಾರೆ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಸೋತಿರುವುದು ವೈಯಕ್ತಿಕವಾಗಿ ಬೇಸರ ತಂದಿದೆ. ಹಿಂದುಳಿದ ವರ್ಗಕ್ಕೆ ಸೇರಿರುವ ಅವರ ಸೋಲಿಗೆ ಬಿಜೆಪಿಯವರೇ ಪ್ರಮುಖ ಕಾರಣ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪಿಸಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ‘ಪರಿಶಿಷ್ಟರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಬಗ್ಗೆ ಬಿಜೆಪಿಗೆ ಕಾಳಜಿಯಿಲ್ಲ. ಬಿಜೆಪಿಯವರು ಮೇಲ್ವರ್ಗಕ್ಕೆ ಸೇರಿದ್ದ ಅಭ್ಯರ್ಥಿಯನ್ನು ನಿಲ್ಲಿಸಿದ್ದರೆ, ಈ ರೀತಿ ಚುನಾವಣೆ ಎದುರಿಸುತ್ತಿದ್ದರೇ ಎಂಬುದು ಕಾಂಗ್ರೆಸ್ನ ಪ್ರಶ್ನೆ’ ಎಂದರು.</p>.<p>‘ಸಾಮಾಜಿಕ ನ್ಯಾಯ, ಅವಕಾಶ ಇದ್ದರೆ ಅದು ಕಾಂಗ್ರೆಸ್ನಲ್ಲಿ ಮಾತ್ರ. ಬಿಜೆಪಿಯಲ್ಲಿ ಇಲ್ಲ. ಹಿಂದುಳಿದ ವರ್ಗದ ಅಭ್ಯರ್ಥಿಯನ್ನು ನಿಲ್ಲಿಸಿ, ಸೋಲಿಸುವ ಕೆಲಸ ಮಾಡಿದ್ದಾರೆ. ತಲೆ ಮೇಲೆ ಕಲ್ಲು ಹಾಕಿದ್ದಾರೆ’ ಎಂದು ದೂರಿದರು.</p>.<p>‘ನಾವು ಪರಿಶಿಷ್ಟ ಸಮುದಾಯಕ್ಕೆ ಸೇರಿದ ಅಭ್ಯರ್ಥಿಯನ್ನು ಕಣಕ್ಕಿಳಿಸಿದಾಗ ಅವರ ನಾಮಪತ್ರ ತಿರಸ್ಕರಿಸುವಂತೆ ಬಿಜೆಪಿಯವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ರಘು ಮೂಲಕ ಆ ಕೆಲಸವನ್ನು ಬಿಜೆಪಿಯವರೇ ಮಾಡಿಸಿದ್ದರು. ದಲಿತ ಅಭ್ಯರ್ಥಿಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿರುವುದು ಸ್ಪಷ್ಟವಾಗಿದೆ. ಅದರಿಂದ ದಲಿತರು ಬಿಜೆಪಿಗೆ ವಿರುದ್ಧವಾಗಿ ನಿಂತರು’ ಎಂದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜೆಡಿಎಸ್ ಅಭ್ಯರ್ಥಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಅದು ಒಕ್ಕಲಿಗೆ ಸಮುದಾಯದ ಅಸಮಾಧಾನಕ್ಕೆ ಕಾರಣವಾಯಿತು. ಮತದಾರರು ಎರಡನೇ ಪ್ರಾಶಸ್ತ್ಯದ ಮತವನ್ನೂ ಬಿಜೆಪಿಯವರಿಗೆ ಕೊಡಲಿಲ್ಲ’ ಎಂದು ವಿಶ್ಲೇಷಿಸಿದರು.</p>.<p>‘ಜೆಡಿಎಸ್ ನಿರ್ನಾಮವಾದರೆ ಅದಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರೇ ಕಾರಣ. ಕೋಮುವಾದಿ ಬಿಜೆಪಿ ಜತೆ ಕೈಜೋಡಿಸಿದರೆ ಸಂಪೂರ್ಣ ನಾಶ ಆಗುವುದರಲ್ಲಿ ಅನುಮಾನವಿಲ್ಲ. 2015ರ ವಿಧಾನ ಪರಿಷತ್ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ಗೆ ನಾಲ್ಕು ಸ್ಥಾನಗಳು ಲಭಿಸಿದ್ದವು. ಈ ಬಾರಿ ಒಂದು ಸ್ಥಾನ ಮಾತ್ರ ಸಿಕ್ಕಿದೆ. ನಿಮ್ಮ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಮಂಡ್ಯದಲ್ಲೇ ಸೋತಿದ್ದೀರಿ. ಒಕ್ಕಲಿಗ ಸಮುದಾಯವು ಜೆಡಿಎಸ್ ಜತೆಗಿದ್ದಾರೆ ಎಂಬ ಭ್ರಮೆ ಬಿಟ್ಟುಬಿಡಿ’ ಎಂದರು.</p>.<p>ಕಾಂಗ್ರೆಸ್ನ ವಿಜೇತ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಎಂ.ಶಿವಣ್ಣ, ಬಿ.ಎಂ.ರಾಮು, ಗಿರೀಶ್ ಪಾಲ್ಗೊಂಡರು.</p>.<p><strong>‘ಫೆ.14ರ ಬಳಿಕ ಸಿ.ಎಂ ಬದಲು’</strong>: ‘ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾಗುವುದು ಖಚಿತ. ಬಸವರಾಜ ಬೊಮ್ಮಾಯಿ ಅವರನ್ನು ಫೆ.14ರ ಬಳಿಕ ಬದಲಾಯಿಸಲು ಬಿಜೆಪಿ ಹೈಕಮಾಂಡ್ ಈಗಾಗಲೇ ನಿರ್ಧರಿಸಿದೆ’ ಎಂದು ಲಕ್ಷ್ಮಣ ಹೇಳಿದರು.</p>.<p>‘ರಾಜ್ಯದಲ್ಲಿ ಮೂವರನ್ನು ಸಿ.ಎಂ ಮಾಡುವ ಗುರಿಯನ್ನು ಬಿಜೆಪಿ ಹೊಂದಿದೆ. ಬಿ.ಎಸ್.ಯಡಿಯೂರಪ್ಪ ಬಳಿಕ ಇದೀಗ ಬೊಮ್ಮಾಯಿ ಆಗಿದ್ದಾರೆ. ಅವರನ್ನೂ ಕೆಳಗಿಳಿಸಿ ಒಬ್ಬ ಡಮ್ಮಿ ವ್ಯಕ್ತಿಯನ್ನು ಕೂರಿಸಲಿದ್ದಾರೆ. ನಮಗೆ ದೆಹಲಿಯಿಂದಲೇ ಮಾಹಿತಿ ದೊರೆಯುತ್ತಿದೆ. ಬಿಜೆಪಿಯವರೇ ಆ ಮಾಹಿತಿ ಕೊಡುತ್ತಿದ್ದಾರೆ’ ಎಂದು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>