ಮೈಸೂರು: ಬಿಜೆಪಿ ಮುಖಂಡ ಕಾಪು ಸಿದ್ಧಲಿಂಗಸ್ಬಾಮಿ (56) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು.
ಬಿ.ಎಸ್. ಯಡಿಯೂರಪ್ಪ ಆಪ್ತರಾಗಿದ್ದ ಅವರು 2013ರಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಿದ್ದರಾಮಯ್ಯ ಎದುರು ಪರಾಭವಗೊಂಡಿದ್ದರು. 2021ರಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಅವಿವಾಹಿತರಾಗಿದ್ದ ಅವರಿಗೆ ತಂದೆ, ಸಹೋದರ ಹಾಗೂ ಸಹೋದರಿ ಇದ್ದಾರೆ. ಗುರುವಾರ ಸಂಜೆ ಸ್ವಗ್ರಾಮದ ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.