ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮಂತ್ರಿಗಳ 2–3 ಪಟ್ಟಿಯನ್ನು ಹೈಕಮಾಂಡ್ಗೆ ಕೊಟ್ಟಿದ್ದು, ಅದರಲ್ಲಿ ಯಾವುದಕ್ಕೆ ಒಪ್ಪಿಗೆ ಸಿಗುವುದೋ ಗೊತ್ತಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ವಿಚಾರದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಮಾತೇ ಅಂತಿಮ. ಕಾಂಗ್ರೆಸ್ನದ್ದು ಹೈಕಮಾಂಡ್ ಸಂಸ್ಕೃತಿ ಎಂದು ಮೂದಲಿಸುತ್ತಿದ್ದ ಬಿಜೆಪಿ ಮುಖಂಡರಿಗೆ ಈಗ ಒದಗಿರುವ ಪರಿಸ್ಥಿತಿಯಾದರೂ ಏನು’ ಎಂದು ಪ್ರಶ್ನಿಸಿದರು.