<p><strong>ಮೈಸೂರು:</strong> ಜಮೀರ್ ಆಹಮದ್ ಪದೇ ಪದೇ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದುದ್ದರಿಂದ ಡಿ.ಕೆ.ಶಿವಕುಮಾರ್ ಅವರೇ ಜಮೀರ್ ನಿವಾಸದ ಮೇಲೆ ದಾಳಿ ಮಾಡಿಸಿರಬೇಕು ಎಂದು ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದರು.</p>.<p>ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಯ ಸಂಪರ್ಕ ಸಾಕಷ್ಟಿದೆ ಎಂದು ಕುಹಕವಾಡಿದರು.</p>.<p>ಬಿಜೆಪಿ ಇಂತಹ ದಾಳಿ ಮಾಡಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದರೆ, ನಾವು ಹೀಗೆ ಅವರತ್ತಲೆ ಬೆರಳು ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.</p>.<p>ಜಾರಿ ನಿರ್ದೇಶನಾಲಯದವರು ಅವರ ಕೆಲಸ ಮಾಡುತ್ತಾರೆ. ವ್ಯವಹಾರಗಳು ಸರಿ ಇದ್ದಾಗ, ಯಾರು ಅದಕ್ಕೆ ಹೆದರುವ ಅಗತ್ಯವಿಲ್ಲ. ಅಧಿಕಾರಿಗಳಿಗೆ ದಾಖಲೆ ಕೊಟ್ಟರೆ ಸಾಕು. ಕಾಂಗ್ರೆಸ್ ಆರೋಪ ನೋಡಿದರೆ ವ್ಯವಹಾರ ಸರಿ ಇಲ್ಲ ಅನ್ನಿಸುತ್ತದೆ ಎಂದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/karnataka-news/ed-raids-over-house-construction-says-zameer-ahmed-roshan-baig-855169.html">ಮನೆ ನಿರ್ಮಾಣದ ಬಗ್ಗೆ ಯಾರೋ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಇ.ಡಿ ದಾಳಿ: ಜಮೀರ್ | Prajavani</a></p>.<p>ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನಡೆಸಿದ್ದ ದಾಳಿ ಶುಕ್ರವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ.</p>.<p>ಸತತ 23 ಗಂಟೆಗಳ ಕಾಲ ದಾಖಲೆಗಳ ಹುಡುಕಾಟ, ವಿಚಾರಣೆ ನಡೆಸಿ ಬೆಳಗಿನ ಜಾವ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಮೀರ್ ಆಹಮದ್ ಪದೇ ಪದೇ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಿದ್ದುದ್ದರಿಂದ ಡಿ.ಕೆ.ಶಿವಕುಮಾರ್ ಅವರೇ ಜಮೀರ್ ನಿವಾಸದ ಮೇಲೆ ದಾಳಿ ಮಾಡಿಸಿರಬೇಕು ಎಂದು ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದರು.</p>.<p>ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಯ ಸಂಪರ್ಕ ಸಾಕಷ್ಟಿದೆ ಎಂದು ಕುಹಕವಾಡಿದರು.</p>.<p>ಬಿಜೆಪಿ ಇಂತಹ ದಾಳಿ ಮಾಡಿಸುತ್ತಿದೆ ಎಂದು ಕಾಂಗ್ರೆಸ್ ಹೇಳಿದರೆ, ನಾವು ಹೀಗೆ ಅವರತ್ತಲೆ ಬೆರಳು ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.</p>.<p>ಜಾರಿ ನಿರ್ದೇಶನಾಲಯದವರು ಅವರ ಕೆಲಸ ಮಾಡುತ್ತಾರೆ. ವ್ಯವಹಾರಗಳು ಸರಿ ಇದ್ದಾಗ, ಯಾರು ಅದಕ್ಕೆ ಹೆದರುವ ಅಗತ್ಯವಿಲ್ಲ. ಅಧಿಕಾರಿಗಳಿಗೆ ದಾಖಲೆ ಕೊಟ್ಟರೆ ಸಾಕು. ಕಾಂಗ್ರೆಸ್ ಆರೋಪ ನೋಡಿದರೆ ವ್ಯವಹಾರ ಸರಿ ಇಲ್ಲ ಅನ್ನಿಸುತ್ತದೆ ಎಂದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/karnataka-news/ed-raids-over-house-construction-says-zameer-ahmed-roshan-baig-855169.html">ಮನೆ ನಿರ್ಮಾಣದ ಬಗ್ಗೆ ಯಾರೋ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಇ.ಡಿ ದಾಳಿ: ಜಮೀರ್ | Prajavani</a></p>.<p>ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ನಡೆಸಿದ್ದ ದಾಳಿ ಶುಕ್ರವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ.</p>.<p>ಸತತ 23 ಗಂಟೆಗಳ ಕಾಲ ದಾಖಲೆಗಳ ಹುಡುಕಾಟ, ವಿಚಾರಣೆ ನಡೆಸಿ ಬೆಳಗಿನ ಜಾವ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>