ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಕಡಿಮೆ ಅವಧಿಯಲ್ಲೇ ಜನರ ವಿಶ್ವಾಸ ಕಳೆದುಕೊಂಡಿದೆ. ಯಾವ ವೇಗದಲ್ಲಿ ಅಧಿಕಾರಕ್ಕೆ ಬಂದಿತೋ ಅದೇ ವೇಗದಲ್ಲಿ ಪಾತಾಳಕ್ಕೆ ಬಿದ್ದಿದೆ. ಕಾಂಗ್ರೆಸ್ ಸರ್ಕಾರ ಶೇ 40ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ಗುತ್ತಿಗೆದಾರರ ಸಂಘದ ಕೆಂಪಣ್ಣ ಆರೋಪಿಸಿದ್ದಾರೆ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಒತ್ತಾಯಿಸಿದರು.