<p><strong>ಮೈಸೂರು</strong>: ‘ಮತಕಳ್ಳತನ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ಹಾಗೂ ನಿರೂಪಣೆಗೆ ಬೆಲೆ ಇಲ್ಲವೆಂಬುದು ಬಿಹಾರ ವಿಧಾನಸಭಾ ಚುನಾವಣೆಯಿಂದ ಸಾಬೀತಾಗಿದೆ’ ಎಂದು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮತ ಕಳ್ಳತನಕ್ಕೆ ಸಂಬಂಧಿಸಿದಂತೆ ಸಾಕ್ಷಿ ಇದ್ದರೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವಂತೆ ಹೇಳುತ್ತಲೇ ಬಂದಿದ್ದೇವೆ. ಆದರೆ, ಅವರು ಈವರೆಗೂ ದೂರು ಕೊಟ್ಟಿಲ್ಲ. ಆ ವಿಷಯವನ್ನು ಚುನಾವಣಾ ತಂತ್ರವನ್ನಾಗಿ ಬಳಸಿಕೊಂಡರಷ್ಟೆ’ ಎಂದರು.</p>.<p>‘ಜನರ ದಿಕ್ಕು ತಪ್ಪಿಸುವುದು, ಅರ್ಧ ಸತ್ಯ ಹೇಳುವುದು ಹಾಗೂ ಅಪಪ್ರಚಾರ ಮಾಡುವುದೇ ಕಾಂಗ್ರೆಸ್ನವರ ತಂತ್ರ. ಈ ನಿಟ್ಟಿನಲ್ಲಿ ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಬಿಹಾರ ಚುನಾವಣೆ ಸಂದರ್ಭದಲ್ಲಿ ಆ ಪಕ್ಷದ ನಾಯಕರು ವಿದೇಶದಲ್ಲಿ ಕುಳಿತು ಕಾಫಿ ಕುಡಿಯುತ್ತಿದ್ದುದ್ದನ್ನು ನೋಡಿದ್ದೇವೆ. ನಮ್ಮ ನಾಯಕರು ಹಳ್ಳಿ–ಹಳ್ಳಿಗೂ ಹೋಗಿ ಪ್ರಚಾರ ಮಾಡಿದ್ದಾರೆ. ಇದರಿಂದಲೇ ಎನ್ಡಿಎ ಮೈತ್ರಿಕೂಟಕ್ಕೆ ಅದ್ಭುತ ಫಲಿತಾಂಶ ದೊರೆತಿದೆ. ನರೇಂದ್ರ ಮೋದಿ ನಾಯಕತ್ವಕ್ಕೆ ಹಾಗೂ ಎನ್ಡಿಎ ಮೈತ್ರಿಕೂಟಕ್ಕೆ ಜಯ ಸಿಕ್ಕಿದೆ’ ಎಂದರು.</p>.<p>‘ಕಾಂಗ್ರೆಸ್ ಹಿಂದಿನಿಂದಲೂ ಅಭಿವೃದ್ಧಿಯಿಂದ ದೂರವೇ ಇದೆ. ಅಭಿವೃದ್ಧಿ ರಾಜಕಾರಣವನ್ನು ಆ ಪಕ್ಷದವರು ಮಾಡಿಯೇ ಇಲ್ಲ. ಸಮಾಜ ವಿಭಜನೆ ಮಾಡಿ ಲಾಭ ಪಡೆದುಕೊಳ್ಳಲು ಮುಂದಾಗುತ್ತದೆ’ ಎಂದು ಆರೋಪಿಸಿದರು.</p>.<p>‘ದೇಶವೀಗ ಏಕತೆಯಲ್ಲಿ ಮುನ್ನುಗ್ಗುತ್ತಿದೆ. ವಿಕಸಿತ ಭಾರತಕ್ಕೆ ಜನರ ಸ್ಪಂದನೆ ಇದೆ. 2028ಕ್ಕೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಗ್ಯಾರಂಟಿಗೂ– ಜನರ ಹಿತಕ್ಕಾಗಿ ಯೋಜನೆ ರೂಪಿಸುವುದಕ್ಕೂ ವ್ಯತ್ಯಾಸ ಇದೆ. ಹಣಕಾಸಿನ ಮಿತಿಯಲ್ಲಿ ಯೋಜನೆ ರೂಪಿಸಿದರೆ ಒಳ್ಳೆಯದು. ಹಣಕಾಸಿನ ಸಾಮರ್ಥ್ಯ ಇಲ್ಲದಿದ್ದರೂ ರಾಜ್ಯ ಸರ್ಕಾರ ಯೋಜನೆಗಳನ್ನು ಮಾಡಿದೆ. ಹೀಗಾಗಿ, ಗ್ಯಾರಂಟಿಗೆ ಹಣ ಹೊಂದಿಸಲಾಗದ ಪರಿಸ್ಥಿತಿಗೆ ಸರ್ಕಾರ ತಲುಪಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮತಕಳ್ಳತನ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ಹಾಗೂ ನಿರೂಪಣೆಗೆ ಬೆಲೆ ಇಲ್ಲವೆಂಬುದು ಬಿಹಾರ ವಿಧಾನಸಭಾ ಚುನಾವಣೆಯಿಂದ ಸಾಬೀತಾಗಿದೆ’ ಎಂದು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮತ ಕಳ್ಳತನಕ್ಕೆ ಸಂಬಂಧಿಸಿದಂತೆ ಸಾಕ್ಷಿ ಇದ್ದರೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವಂತೆ ಹೇಳುತ್ತಲೇ ಬಂದಿದ್ದೇವೆ. ಆದರೆ, ಅವರು ಈವರೆಗೂ ದೂರು ಕೊಟ್ಟಿಲ್ಲ. ಆ ವಿಷಯವನ್ನು ಚುನಾವಣಾ ತಂತ್ರವನ್ನಾಗಿ ಬಳಸಿಕೊಂಡರಷ್ಟೆ’ ಎಂದರು.</p>.<p>‘ಜನರ ದಿಕ್ಕು ತಪ್ಪಿಸುವುದು, ಅರ್ಧ ಸತ್ಯ ಹೇಳುವುದು ಹಾಗೂ ಅಪಪ್ರಚಾರ ಮಾಡುವುದೇ ಕಾಂಗ್ರೆಸ್ನವರ ತಂತ್ರ. ಈ ನಿಟ್ಟಿನಲ್ಲಿ ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಬಿಹಾರ ಚುನಾವಣೆ ಸಂದರ್ಭದಲ್ಲಿ ಆ ಪಕ್ಷದ ನಾಯಕರು ವಿದೇಶದಲ್ಲಿ ಕುಳಿತು ಕಾಫಿ ಕುಡಿಯುತ್ತಿದ್ದುದ್ದನ್ನು ನೋಡಿದ್ದೇವೆ. ನಮ್ಮ ನಾಯಕರು ಹಳ್ಳಿ–ಹಳ್ಳಿಗೂ ಹೋಗಿ ಪ್ರಚಾರ ಮಾಡಿದ್ದಾರೆ. ಇದರಿಂದಲೇ ಎನ್ಡಿಎ ಮೈತ್ರಿಕೂಟಕ್ಕೆ ಅದ್ಭುತ ಫಲಿತಾಂಶ ದೊರೆತಿದೆ. ನರೇಂದ್ರ ಮೋದಿ ನಾಯಕತ್ವಕ್ಕೆ ಹಾಗೂ ಎನ್ಡಿಎ ಮೈತ್ರಿಕೂಟಕ್ಕೆ ಜಯ ಸಿಕ್ಕಿದೆ’ ಎಂದರು.</p>.<p>‘ಕಾಂಗ್ರೆಸ್ ಹಿಂದಿನಿಂದಲೂ ಅಭಿವೃದ್ಧಿಯಿಂದ ದೂರವೇ ಇದೆ. ಅಭಿವೃದ್ಧಿ ರಾಜಕಾರಣವನ್ನು ಆ ಪಕ್ಷದವರು ಮಾಡಿಯೇ ಇಲ್ಲ. ಸಮಾಜ ವಿಭಜನೆ ಮಾಡಿ ಲಾಭ ಪಡೆದುಕೊಳ್ಳಲು ಮುಂದಾಗುತ್ತದೆ’ ಎಂದು ಆರೋಪಿಸಿದರು.</p>.<p>‘ದೇಶವೀಗ ಏಕತೆಯಲ್ಲಿ ಮುನ್ನುಗ್ಗುತ್ತಿದೆ. ವಿಕಸಿತ ಭಾರತಕ್ಕೆ ಜನರ ಸ್ಪಂದನೆ ಇದೆ. 2028ಕ್ಕೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಗ್ಯಾರಂಟಿಗೂ– ಜನರ ಹಿತಕ್ಕಾಗಿ ಯೋಜನೆ ರೂಪಿಸುವುದಕ್ಕೂ ವ್ಯತ್ಯಾಸ ಇದೆ. ಹಣಕಾಸಿನ ಮಿತಿಯಲ್ಲಿ ಯೋಜನೆ ರೂಪಿಸಿದರೆ ಒಳ್ಳೆಯದು. ಹಣಕಾಸಿನ ಸಾಮರ್ಥ್ಯ ಇಲ್ಲದಿದ್ದರೂ ರಾಜ್ಯ ಸರ್ಕಾರ ಯೋಜನೆಗಳನ್ನು ಮಾಡಿದೆ. ಹೀಗಾಗಿ, ಗ್ಯಾರಂಟಿಗೆ ಹಣ ಹೊಂದಿಸಲಾಗದ ಪರಿಸ್ಥಿತಿಗೆ ಸರ್ಕಾರ ತಲುಪಿದೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>