<p><strong>ಮೈಸೂರು</strong>: ಜೀವಧಾರ ರಕ್ತ ನಿಧಿ ಕೇಂದ್ರ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಮತ್ತು ಬ್ಲಡ್ ಆನ್ ಕಾಲ್ ಕ್ಲಬ್ ವತಿಯಿಂದ ಏ.5ರಂದು ಬೆಳಿಗ್ಗೆ 10.30ಕ್ಕೆ ನಗರದ ರೈಲು ನಿಲ್ದಾಣ ಮುಂಭಾಗದ ಜೆ.ಕೆ. ಮೈದಾನದ ಸಭಾಂಗಣದಲ್ಲಿ ‘ರಕ್ತ ದಾನಿಗಳ ಹಬ್ಬ’ ಆಯೋಜಿಸಲಾಗಿದೆ.</p><p>15ಕ್ಕೂ ಹೆಚ್ಚು ಬಾರಿ ಸ್ವಯಂ ಪ್ರೇರಿತವಾಗಿ ರಕ್ತ ದಾನ ಮಾಡಿದ 300ಕ್ಕೂ ಹೆಚ್ಚು ಸ್ವಯಂ ಪ್ರೇರಿತ ರಕ್ತದಾನಿಗಳನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮದ ಪೋಸ್ಟರ್ಗಳನ್ನು ಗಣಪತಿ ಸಚ್ಚಿದಾನಂದ ಆಶ್ರಮದ ಕಿರಿಯ ಪೀಠಾಧಿಪತಿ ದತ್ತವಿಜಯಾನಂದ ತೀರ್ಥ ಸ್ವಾಮೀಜಿ ಬಿಡುಗಡೆ ಮಾಡಿದರು.</p><p>‘ರಕ್ತ ದಾನ ಅತ್ಯಂತ ಶ್ರೇಷ್ಠವಾದುದು. ಅದು ಜೀವ ರಕ್ಷಕ ಸಾಧನ. ಜೀವವನ್ನು ಉಳಿಸಬಲ್ಲದು. ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕು’ ಎಂದರು.</p><p>ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಸಾಮಾಜಿಕ ಹೋರಾಟಗಾರ ವಿಕಾಶ್ ಶಾಸ್ತ್ರಿ, ಬ್ಲಡ್ ಆನ್ ಕಾಲ್ ಕ್ಲಬ್ ಮೈಸೂರು ದೇವೇಂದ್ರ ಪರಿಹಾರಿಯ, ಆನಂದ್, ನವೀನ್, ರಾಮಚಂದ್ರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಜೀವಧಾರ ರಕ್ತ ನಿಧಿ ಕೇಂದ್ರ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಮತ್ತು ಬ್ಲಡ್ ಆನ್ ಕಾಲ್ ಕ್ಲಬ್ ವತಿಯಿಂದ ಏ.5ರಂದು ಬೆಳಿಗ್ಗೆ 10.30ಕ್ಕೆ ನಗರದ ರೈಲು ನಿಲ್ದಾಣ ಮುಂಭಾಗದ ಜೆ.ಕೆ. ಮೈದಾನದ ಸಭಾಂಗಣದಲ್ಲಿ ‘ರಕ್ತ ದಾನಿಗಳ ಹಬ್ಬ’ ಆಯೋಜಿಸಲಾಗಿದೆ.</p><p>15ಕ್ಕೂ ಹೆಚ್ಚು ಬಾರಿ ಸ್ವಯಂ ಪ್ರೇರಿತವಾಗಿ ರಕ್ತ ದಾನ ಮಾಡಿದ 300ಕ್ಕೂ ಹೆಚ್ಚು ಸ್ವಯಂ ಪ್ರೇರಿತ ರಕ್ತದಾನಿಗಳನ್ನು ಸನ್ಮಾನಿಸಲಾಗುವುದು. ಈ ಕಾರ್ಯಕ್ರಮದ ಪೋಸ್ಟರ್ಗಳನ್ನು ಗಣಪತಿ ಸಚ್ಚಿದಾನಂದ ಆಶ್ರಮದ ಕಿರಿಯ ಪೀಠಾಧಿಪತಿ ದತ್ತವಿಜಯಾನಂದ ತೀರ್ಥ ಸ್ವಾಮೀಜಿ ಬಿಡುಗಡೆ ಮಾಡಿದರು.</p><p>‘ರಕ್ತ ದಾನ ಅತ್ಯಂತ ಶ್ರೇಷ್ಠವಾದುದು. ಅದು ಜೀವ ರಕ್ಷಕ ಸಾಧನ. ಜೀವವನ್ನು ಉಳಿಸಬಲ್ಲದು. ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳಬೇಕು’ ಎಂದರು.</p><p>ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಸಾಮಾಜಿಕ ಹೋರಾಟಗಾರ ವಿಕಾಶ್ ಶಾಸ್ತ್ರಿ, ಬ್ಲಡ್ ಆನ್ ಕಾಲ್ ಕ್ಲಬ್ ಮೈಸೂರು ದೇವೇಂದ್ರ ಪರಿಹಾರಿಯ, ಆನಂದ್, ನವೀನ್, ರಾಮಚಂದ್ರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>