ಲಕ್ಷ್ಮೀಪುರಂನ ಜೈನ್ಭವನದ ಸಮೀಪ ಇರುವ ಆಡಿಟರ್ ಕಚೇರಿಯೊಂದರ ಮುಂದೆ ಟೈಪ್ ಮಾಡಿರುವ ಪತ್ರ ಸಿಕ್ಕಿದೆ. ವ್ಯಕ್ತಿಯೊಬ್ಬರು ಈ ಪತ್ರವನ್ನು ಪೊಲೀಸರಿಗೆ ನೀಡಿದ್ದಾರೆ. ಅದರಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಕಟ್ಟಡಕ್ಕೆ ಬಾಂಬ್ ಇಡಲಾಗಿದೆ ಎಂದು ಬರೆಯಲಾಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.