<p><strong>ಮೈಸೂರು: ‘</strong>ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ದೀಪಾವಳಿ ಅಂಗವಾಗಿ ಸ್ವೀಟ್ ಬಾಕ್ಸ್ನೊಂದಿಗೆ ಹಣ ನೀಡಿರುವ ಘಟನೆಯ ಕುರಿತು ಸರ್ಕಾರ ತ್ವರಿತವಾಗಿ ತನಿಖೆ ನಡೆಸಬೇಕು’ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಆಗ್ರಹಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಹಣ ಕೊಟ್ಟಿರುವುದು ಮಾಧ್ಯಮಕ್ಕೆ ಮಾಡಿದ ಅಪಮಾನವಾಗಿದೆ. ಪತ್ರಕರ್ತರೊಂದಿಗೆ 40 ವರ್ಷಗಳಿಂದ ಕೆ.ಆರ್.ನಗರ, ಮೈಸೂರು, ಬೆಂಗಳೂರಿನಿಂದ ಹಿಡಿದು ದೆಹಲಿಯವರೆಗೆ ಪತ್ರಕರ್ತರೊಂದಿಗೆ ಒಡನಾಟವಿದೆ. ಆದರೆ, ಯಾವತ್ತೂ ಅವರನ್ನು ಭ್ರಷ್ಟರನ್ನಾಗಿ ಮಾಡಿಲ್ಲ’ ಎಂದರು.</p>.<p>‘ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ ಜತೆ ಹಣ ನೀಡಿರುವುದನ್ನು ಒಪ್ಪಲು ಸಾಧ್ಯವಿಲ್ಲ. ವಾಚ್, ಸ್ಕಾಚ್ ಕೂಡ ಕೊಡಲಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಬೇಕು. ಅವರ ಮಾಧ್ಯಮ ಕಾರ್ಯದರ್ಶಿಯನ್ನು ಕೂಡಲೇ ಹೊರ ಹಾಕಬೇಕು’ ಎಂದು ಒತ್ತಾಯಿಸಿದರು.</p>.<p>‘ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಪ್ರಮುಖ ಅಂಗ. ಆ ಅಂಗವನ್ನು ಹಾಳು ಮಾಡುವುದು ಸರಿಯಲ್ಲ. ಕರ್ನಾಟಕದ ಮಾಧ್ಯಮಕ್ಕೆ ಬಹಳ ಹೆಸರಿಗೆ; ತನ್ನದೇ ಆದ ಪ್ರತಿಷ್ಠೆ ಇದೆ. ಅದರ ಗೌರವ, ಪ್ರಖರತೆ, ವ್ಯಕ್ತಿತ್ವ, ಶಕ್ತಿಯನ್ನು ನಾವೇ ಹಾಳು ಮಾಡುತ್ತಿದ್ದೇವೆಯೇ ಎನಿಸುತ್ತಿದೆ’ ಎಂದರು.</p>.<p>‘ಪತ್ರಕರ್ತರಿಗೆ ಆಮಿಷ ಒಡ್ಡಿರುವುದನ್ನು ಗಮನಿಸಿದರೆ ಮುಂಬರುವ ಚುನಾವಣೆಗೆ ಈಗಲೇ ಹಣ ಹೂಡಿಕೆ ಆರಂಭವಾಯಿತೇ ಎಂಬ ಪ್ರಶ್ನೆ ಬರುವಂತೆ ಮಾಡಿದೆ. ಹೀಗಾಗಿ, ಯಾರು ತಪ್ಪು ಮಾಡಿದ್ದಾರೆಯೋ ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಗೂ ಮುನ್ನ, ಮಾಧ್ಯಮ ಪ್ರತಿನಿಧಿಗಳಿಗೆ ಮೈಸೂರು ಪಾಕ್ ವಿತರಿಸಿ ದೀಪಾವಳಿ ಶುಭಾಶಯ ಕೋರಿದರು. ‘ನಾನು ಕೊಟ್ಟಿರುವ ಬಾಕ್ಸ್ನಲ್ಲಿ ಮೈಸೂರು ಪಾಕ್ ಮಾತ್ರವೇ ಇದೆ. ವಾಚ್, ಸ್ಕಾಚು, ಹಣ, ಚಿನ್ನವೇನೂ ಇಲ್ಲ’ ಎಂದು ಹಾಸ್ಯ ಚಟಾಕಿ ಹಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ದೀಪಾವಳಿ ಅಂಗವಾಗಿ ಸ್ವೀಟ್ ಬಾಕ್ಸ್ನೊಂದಿಗೆ ಹಣ ನೀಡಿರುವ ಘಟನೆಯ ಕುರಿತು ಸರ್ಕಾರ ತ್ವರಿತವಾಗಿ ತನಿಖೆ ನಡೆಸಬೇಕು’ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಆಗ್ರಹಿಸಿದರು.</p>.<p>ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ಹಣ ಕೊಟ್ಟಿರುವುದು ಮಾಧ್ಯಮಕ್ಕೆ ಮಾಡಿದ ಅಪಮಾನವಾಗಿದೆ. ಪತ್ರಕರ್ತರೊಂದಿಗೆ 40 ವರ್ಷಗಳಿಂದ ಕೆ.ಆರ್.ನಗರ, ಮೈಸೂರು, ಬೆಂಗಳೂರಿನಿಂದ ಹಿಡಿದು ದೆಹಲಿಯವರೆಗೆ ಪತ್ರಕರ್ತರೊಂದಿಗೆ ಒಡನಾಟವಿದೆ. ಆದರೆ, ಯಾವತ್ತೂ ಅವರನ್ನು ಭ್ರಷ್ಟರನ್ನಾಗಿ ಮಾಡಿಲ್ಲ’ ಎಂದರು.</p>.<p>‘ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ ಜತೆ ಹಣ ನೀಡಿರುವುದನ್ನು ಒಪ್ಪಲು ಸಾಧ್ಯವಿಲ್ಲ. ವಾಚ್, ಸ್ಕಾಚ್ ಕೂಡ ಕೊಡಲಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಬೇಕು. ಅವರ ಮಾಧ್ಯಮ ಕಾರ್ಯದರ್ಶಿಯನ್ನು ಕೂಡಲೇ ಹೊರ ಹಾಕಬೇಕು’ ಎಂದು ಒತ್ತಾಯಿಸಿದರು.</p>.<p>‘ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಪ್ರಮುಖ ಅಂಗ. ಆ ಅಂಗವನ್ನು ಹಾಳು ಮಾಡುವುದು ಸರಿಯಲ್ಲ. ಕರ್ನಾಟಕದ ಮಾಧ್ಯಮಕ್ಕೆ ಬಹಳ ಹೆಸರಿಗೆ; ತನ್ನದೇ ಆದ ಪ್ರತಿಷ್ಠೆ ಇದೆ. ಅದರ ಗೌರವ, ಪ್ರಖರತೆ, ವ್ಯಕ್ತಿತ್ವ, ಶಕ್ತಿಯನ್ನು ನಾವೇ ಹಾಳು ಮಾಡುತ್ತಿದ್ದೇವೆಯೇ ಎನಿಸುತ್ತಿದೆ’ ಎಂದರು.</p>.<p>‘ಪತ್ರಕರ್ತರಿಗೆ ಆಮಿಷ ಒಡ್ಡಿರುವುದನ್ನು ಗಮನಿಸಿದರೆ ಮುಂಬರುವ ಚುನಾವಣೆಗೆ ಈಗಲೇ ಹಣ ಹೂಡಿಕೆ ಆರಂಭವಾಯಿತೇ ಎಂಬ ಪ್ರಶ್ನೆ ಬರುವಂತೆ ಮಾಡಿದೆ. ಹೀಗಾಗಿ, ಯಾರು ತಪ್ಪು ಮಾಡಿದ್ದಾರೆಯೋ ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸುದ್ದಿಗೋಷ್ಠಿಗೂ ಮುನ್ನ, ಮಾಧ್ಯಮ ಪ್ರತಿನಿಧಿಗಳಿಗೆ ಮೈಸೂರು ಪಾಕ್ ವಿತರಿಸಿ ದೀಪಾವಳಿ ಶುಭಾಶಯ ಕೋರಿದರು. ‘ನಾನು ಕೊಟ್ಟಿರುವ ಬಾಕ್ಸ್ನಲ್ಲಿ ಮೈಸೂರು ಪಾಕ್ ಮಾತ್ರವೇ ಇದೆ. ವಾಚ್, ಸ್ಕಾಚು, ಹಣ, ಚಿನ್ನವೇನೂ ಇಲ್ಲ’ ಎಂದು ಹಾಸ್ಯ ಚಟಾಕಿ ಹಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>