<p><strong>ಮೈಸೂರು:</strong> ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಚಾಮುಂಡಿ ಬೆಟ್ಟ ಪಾದದಲ್ಲಿರುವ ಸುತ್ತೂರು ಮಠದ ಮೈಸೂರು ಶಾಖೆಗೆ ಭೇಟಿ ನೀಡಿ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು.</p><p>ಬಳಿಕ ಮದ್ಯಮದೊಂದಿಗೆ ಮಾತನಾಡಿ, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ದಲಿತರು, ಶೋಷಿತರ ಪರವಾಗಿ ಕೆಲಸ ಮಾಡಲಿ. ಈವರೆಗೆ ಆ ಕಾರ್ಯ ನಡೆದಿಲ್ಲ. ರಾಜ್ಯದಲ್ಲಿ ಹೊಸ ಬದಲಾವಣೆ ತರಲು ರಾಜ್ಯಾದ್ಯಂತ ಪ್ರವಾಸ ಆರಂಭಿಸಿದ್ದೇನೆ' ಎಂದು ಹೇಳಿದರು.</p><p>ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಠಕ್ಕೆ ಭೇಟಿ ನೀಡಿದರು.</p><p>ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ವಿಧಾನಪರಿಷತ್ ಸದಸ್ಯ ತೋಂಟದಾರ್ಯ, ಎನ್.ಮಹೇಶ್, ಪ್ರತಾಪ ಸಿಂಹ, ಮಲ್ಲಿಕಾರ್ಜುನಪ್ಪ, ಶಂಕರ್ ರಾವ್ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಚಾಮುಂಡಿ ಬೆಟ್ಟ ಪಾದದಲ್ಲಿರುವ ಸುತ್ತೂರು ಮಠದ ಮೈಸೂರು ಶಾಖೆಗೆ ಭೇಟಿ ನೀಡಿ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು.</p><p>ಬಳಿಕ ಮದ್ಯಮದೊಂದಿಗೆ ಮಾತನಾಡಿ, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ದಲಿತರು, ಶೋಷಿತರ ಪರವಾಗಿ ಕೆಲಸ ಮಾಡಲಿ. ಈವರೆಗೆ ಆ ಕಾರ್ಯ ನಡೆದಿಲ್ಲ. ರಾಜ್ಯದಲ್ಲಿ ಹೊಸ ಬದಲಾವಣೆ ತರಲು ರಾಜ್ಯಾದ್ಯಂತ ಪ್ರವಾಸ ಆರಂಭಿಸಿದ್ದೇನೆ' ಎಂದು ಹೇಳಿದರು.</p><p>ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಠಕ್ಕೆ ಭೇಟಿ ನೀಡಿದರು.</p><p>ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ, ಮಾಜಿ ವಿಧಾನಪರಿಷತ್ ಸದಸ್ಯ ತೋಂಟದಾರ್ಯ, ಎನ್.ಮಹೇಶ್, ಪ್ರತಾಪ ಸಿಂಹ, ಮಲ್ಲಿಕಾರ್ಜುನಪ್ಪ, ಶಂಕರ್ ರಾವ್ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>