<p><strong>ಮೈಸೂರು</strong>: ಮಂಗಳವಾರ ಇಲ್ಲಿ ಆರಂಭವಾದ ಅಂತರರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನದಲ್ಲಿ ದೇಶ, ವಿದೇಶದ ನೂರಾರು ಭಿಕ್ಕುಗಳ ಸಮ್ಮುಖದಲ್ಲಿ ಸಾವಿರಾರು ಜನರು ಪ್ರಬುದ್ಧ ಭಾರತ ನಿರ್ಮಾಣಕ್ಕೆ ಬುದ್ಧ- ಅಂಬೇಡ್ಕರ್ ಮಾರ್ಗ ಅನುಸರಣೆ ಮಾಡುವ ಸಂಕಲ್ಪ ಮಾಡಿದರು. </p>.<p>ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಸಮ್ಮೇಳನವನ್ನು ಮಯನ್ಮಾರ್ನ ಭಿಕ್ಕು ಪನಿಂದ ಸಯಡೊ ಉದ್ಘಾಟಿಸಿದರು. 500ಕ್ಕೂ ಹೆಚ್ಚು ಪರಿಶಿಷ್ಟ ಕುಟುಂಬದವರು ಬೌದ್ಧ ಧರ್ಮ ಸ್ವೀಕರಿಸಿದರು. </p>.<p>‘ಶೂದ್ರರು, ದಲಿತರು ಇಂಗ್ಲಿಷ್ ಮಾಧ್ಯಮದಲ್ಲೇ ಮಕ್ಕಳಿಗೆ ಶಿಕ್ಷಣ ಕೊಡಿಸಿದಾಗ ಮಾತ್ರ ಹಿಂದೂ ಶ್ರೇಣಿಕೃತ ಸಾಮಾಜಿಕ ವ್ಯವಸ್ಥೆಯಿಂದ ವಿಮೋಚನೆ ಪಡೆಯಬಹುದು. ಬೌದ್ಧ ವಿಹಾರಗಳಲ್ಲಿ ಇಂಗ್ಲಿಷ್ ಕಲಿಕೆ, ಅಂಬೇಡ್ಕರ್ ಓದು ನಡೆಯಬೇಕು’ ಎಂದು ಚಿಂತಕ ಕಾಂಚಾ ಐಲಯ್ಯ ಪ್ರತಿಪಾದಿಸಿದರು. </p>.<p>‘ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನಿಜವಾದ ಬೌದ್ಧ. ತಮ್ಮತ್ತ ಶೂ ತೂರಿದವನ ಬಗ್ಗೆ ಕೋಪಗೊಳ್ಳದೇ ಕ್ಷಮಿಸಿದರು. ಇದಲ್ಲವೇ ಬುದ್ಧ ಹಾಗೂ ಅಂಬೇಡ್ಕರ್ ಮಾರ್ಗ’ ಎಂದರು.</p>.<p>ಭಿಕ್ಕುಗಳಾದ ಲಾವೋಸ್ನ ರಾಂಡಿಸೋಟ್, ವಿಯೆಟ್ನಾಂನ ತಿಚ್ಮಿನ್ ಹಾನ್, ನಳಂದ ವಿಶ್ವವಿದ್ಯಾಲಯದ ಧಮ್ಮಗುರು ಕರ್ಮ ರಾನ್ರಿಯನ್ ಪುಂಚೆ, ಅರುಣಾಚಲ ಪ್ರದೇಶದ ಭಂತೆ ವಿಸುದ್ದಶೀಲ, ಕೊಳ್ಳೇಗಾಲದ ಮನೋರಕ್ಖಿತ ಭಂತೇಜಿ, ಭಂತೆ ಬೋಧಿರತ್ನ, ಭಂತೆ ಮೈತ್ರಿಮಾತಾ ಅಮ್ಮ ಪಾಲ್ಗೊಂಡಿದ್ದರು. </p>.<div><blockquote>ಅಸಮಾನತೆಯನ್ನು ಜೀವಂತವಾಗಿರಿಸುತ್ತಿರುವ ಆರ್ಎಸ್ಎಸ್ ಟೀಕಿಸುತ್ತಿರುವುದರಿಂದ ನನ್ನನ್ನು ಕೊಲ್ಲುವುದಾಗಿ ಹೇಳುತ್ತಾರೆ. ಇತಿಹಾಸದಲ್ಲಿ ಕೊಂದವರ ಹೆಸರು ಉಳಿಯುವುದಿಲ್ಲ. ಕೊಲೆಯಾದವರು ಮಹಾತ್ಮರಾಗಿದ್ದಾರೆ</blockquote><span class="attribution">ಕಾಂಚಾ ಐಲಯ್ಯ ಚಿಂತಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮಂಗಳವಾರ ಇಲ್ಲಿ ಆರಂಭವಾದ ಅಂತರರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನದಲ್ಲಿ ದೇಶ, ವಿದೇಶದ ನೂರಾರು ಭಿಕ್ಕುಗಳ ಸಮ್ಮುಖದಲ್ಲಿ ಸಾವಿರಾರು ಜನರು ಪ್ರಬುದ್ಧ ಭಾರತ ನಿರ್ಮಾಣಕ್ಕೆ ಬುದ್ಧ- ಅಂಬೇಡ್ಕರ್ ಮಾರ್ಗ ಅನುಸರಣೆ ಮಾಡುವ ಸಂಕಲ್ಪ ಮಾಡಿದರು. </p>.<p>ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಸಮ್ಮೇಳನವನ್ನು ಮಯನ್ಮಾರ್ನ ಭಿಕ್ಕು ಪನಿಂದ ಸಯಡೊ ಉದ್ಘಾಟಿಸಿದರು. 500ಕ್ಕೂ ಹೆಚ್ಚು ಪರಿಶಿಷ್ಟ ಕುಟುಂಬದವರು ಬೌದ್ಧ ಧರ್ಮ ಸ್ವೀಕರಿಸಿದರು. </p>.<p>‘ಶೂದ್ರರು, ದಲಿತರು ಇಂಗ್ಲಿಷ್ ಮಾಧ್ಯಮದಲ್ಲೇ ಮಕ್ಕಳಿಗೆ ಶಿಕ್ಷಣ ಕೊಡಿಸಿದಾಗ ಮಾತ್ರ ಹಿಂದೂ ಶ್ರೇಣಿಕೃತ ಸಾಮಾಜಿಕ ವ್ಯವಸ್ಥೆಯಿಂದ ವಿಮೋಚನೆ ಪಡೆಯಬಹುದು. ಬೌದ್ಧ ವಿಹಾರಗಳಲ್ಲಿ ಇಂಗ್ಲಿಷ್ ಕಲಿಕೆ, ಅಂಬೇಡ್ಕರ್ ಓದು ನಡೆಯಬೇಕು’ ಎಂದು ಚಿಂತಕ ಕಾಂಚಾ ಐಲಯ್ಯ ಪ್ರತಿಪಾದಿಸಿದರು. </p>.<p>‘ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನಿಜವಾದ ಬೌದ್ಧ. ತಮ್ಮತ್ತ ಶೂ ತೂರಿದವನ ಬಗ್ಗೆ ಕೋಪಗೊಳ್ಳದೇ ಕ್ಷಮಿಸಿದರು. ಇದಲ್ಲವೇ ಬುದ್ಧ ಹಾಗೂ ಅಂಬೇಡ್ಕರ್ ಮಾರ್ಗ’ ಎಂದರು.</p>.<p>ಭಿಕ್ಕುಗಳಾದ ಲಾವೋಸ್ನ ರಾಂಡಿಸೋಟ್, ವಿಯೆಟ್ನಾಂನ ತಿಚ್ಮಿನ್ ಹಾನ್, ನಳಂದ ವಿಶ್ವವಿದ್ಯಾಲಯದ ಧಮ್ಮಗುರು ಕರ್ಮ ರಾನ್ರಿಯನ್ ಪುಂಚೆ, ಅರುಣಾಚಲ ಪ್ರದೇಶದ ಭಂತೆ ವಿಸುದ್ದಶೀಲ, ಕೊಳ್ಳೇಗಾಲದ ಮನೋರಕ್ಖಿತ ಭಂತೇಜಿ, ಭಂತೆ ಬೋಧಿರತ್ನ, ಭಂತೆ ಮೈತ್ರಿಮಾತಾ ಅಮ್ಮ ಪಾಲ್ಗೊಂಡಿದ್ದರು. </p>.<div><blockquote>ಅಸಮಾನತೆಯನ್ನು ಜೀವಂತವಾಗಿರಿಸುತ್ತಿರುವ ಆರ್ಎಸ್ಎಸ್ ಟೀಕಿಸುತ್ತಿರುವುದರಿಂದ ನನ್ನನ್ನು ಕೊಲ್ಲುವುದಾಗಿ ಹೇಳುತ್ತಾರೆ. ಇತಿಹಾಸದಲ್ಲಿ ಕೊಂದವರ ಹೆಸರು ಉಳಿಯುವುದಿಲ್ಲ. ಕೊಲೆಯಾದವರು ಮಹಾತ್ಮರಾಗಿದ್ದಾರೆ</blockquote><span class="attribution">ಕಾಂಚಾ ಐಲಯ್ಯ ಚಿಂತಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>