<p><strong>ಮೈಸೂರು</strong>: ವಿವೇಕ ಸ್ಮಾರಕದ ಜೊತೆ ಮಹಾರಾಣಿ ಎನ್ಟಿಎಂ ಶಾಲೆ ನಿರ್ಮಾಣವೂ ನಡೆಯಬೇಕು ಎಂದು ಒತ್ತಾಯಿಸಿ ‘ಮಹಾರಾಣಿ ಎನ್ಟಿಎಂ ಶಾಲೆ ಉಳಿಸಿ ಹೋರಾಟ ಒಕ್ಕೂಟ’ ಮಂಗಳವಾರ ಪ್ರತಿಭಟನೆ ನಡೆಸಿತು.</p>.<p>ಗನ್ಹೌಸ್ನ ಕುವೆಂಪು ಉದ್ಯಾನದಲ್ಲಿ ಜಮಾಯಿಸಿದ ಒಕ್ಕೂಟದ ಸದಸ್ಯರು ಸರ್ಕಾರ ಹಾಗೂ ರಾಮಕೃಷ್ಣ ಆಶ್ರಮದ ವಿರುದ್ಧ ಘೋಷಣೆ ಕೂಗಿದರು.</p>.<p>ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಪುರುಷೋತ್ತಮ್ ಮಾತನಾಡಿ, ‘ವಾಣಿವಿಲಾಸ ಸನ್ನಿಧಾನ ನಿರ್ಮಿಸಿದ್ದ ಬಾಲಕಿಯರ ಶಾಲೆಯನ್ನು ಕೆಡವಿ ವಿವೇಕಾನಂದ ಸ್ಮಾರಕ ನಿರ್ಮಾಣ ಮಾಡುತ್ತಿರುವುದು ವಿವೇಕರಿಗೆ ಮಾಡಿದ ಅವಮಾನವಾಗಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕವನ್ನು ಅವರೂ ಒಪ್ಪುತ್ತಿರಲಿಲ್ಲ’ ಎಂದರು.</p>.<p>‘ಸುತ್ತೂರು ಸ್ವಾಮೀಜಿ, ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಉಪಸ್ಥಿತಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸ್ಮಾರಕದ ಜೊತೆ ಶಾಲೆಯನ್ನು ನಿರ್ಮಿಸುವ ಪ್ರಸ್ತಾವಕ್ಕೆ ರಾಮಕೃಷ್ಣ ಆಶ್ರಮ ಒಪ್ಪಿತ್ತು. ಆದರೆ, ಏಕಾಏಕಿ ಶಾಲೆಯನ್ನು ಕೆಡವಲಾಗಿದೆ. ಆಶ್ರಮವು ಭೂಮಿಪೂಜೆಯನ್ನು ನೆರವೇರಿಸಿರುವುದು ಅನ್ಯಾಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಒಪ್ಪಂದವನ್ನು ಉಲ್ಲಂಘಿಸಿರುವ ಆಶ್ರಮವು ಶಾಲೆಯ ಉಳಿವಿಗೆ ಹೋರಾಡಿದವರಿಗೂ ಅಪಚಾರ ಮಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಡಿಕೆ ಈಡೇಸುವುದಾಗಿ ತಿಳಿಸಿದ್ದರು. ಇದೀಗ ಅವರೂ ಆಶ್ರಮ ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಶಾಲೆ ನಿರ್ಮಾಣ ಆಗುವವರೆಗೂ ಹೋರಾಟ ನಿಲ್ಲುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ಆಶ್ರಮದ ಮಾತನ್ನು ನಂಬಿ ಒಕ್ಕೂಟವು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿಲ್ಲ. ಸಂಧಾನ ಸಭೆಯಲ್ಲಿ ಭಾಗವಹಿಸಿದ್ದ ಡಿ.ಮಾದೇಗೌಡ ಸೇರಿದಂತೆ ಯಾರೊಬ್ಬರೂ ಈಗ ಮಾತನಾಡುತ್ತಿಲ್ಲ. ಆಶ್ರಮದವರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>ರೈತಸಂಘದ ಪಿ.ಮರಂಕಯ್ಯ, ಮಂಡಕಳ್ಳಿ ಮಹೇಶ್, ಕರ್ನಾಟಕ ಕಾವಲು ಪಡೆಯ ಮೋಹನ್ ಕುಮಾರ್ ಗೌಡ, ಕರ್ನಾಟಕ ಜನಪರ ಶಕ್ತಿ ವೇದಿಕೆ ಅಧ್ಯಕ್ಷರಾದ ಮಧುಮತಿ, ಎಸ್.ಬಾಲಕೃಷ್ಣ, ಎಲ್ಐಸಿ ಸಿದ್ದಪ್ಪ, ಸುನಿಲ್ ಕುಮಾರ್, ಸಿದ್ದಲಿಂಗಪ್ಪ, ಪ್ರಕಾಶ್ ಇದ್ದರು.</p>.<p class="Briefhead"><strong><span class="Bullet">ದಲಿತ ಬಾಲಕ ಹತ್ಯೆ ಖಂಡಿಸಿ ಪ್ರತಿಭಟನೆ</span></strong></p>.<p><strong>ಮೈಸೂರು: </strong>ರಾಜಸ್ಥಾನದ ಶಾಲೆಯೊಂದರಲ್ಲಿಕುಡಿಯುವ ನೀರಿನ ಮಡಕೆ ಮುಟ್ಟಿದ ಕಾರಣಕ್ಕೆ ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ನಡೆದಿರುವುದನ್ನು ಖಂಡಿಸಿ ‘ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ’ದ ಸದಸ್ಯರು ಪ್ರತಿಭಟನೆ ನಡೆಸಿದರು.</p>.<p>ಮಾನಸಗಂಗೋತ್ರಿಯ ಅಂಬೇಡ್ಕರ್ ಪ್ರತಿಮೆ ಎದುರು ಸೇರಿದ ಸದಸ್ಯರು, ತಪ್ಪಿತಸ್ಥ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಅಧ್ಯಕ್ಷ ಎಚ್.ಎಸ್.ನಟರಾಜ ಮಾತನಾಡಿ, ‘ಬಡವರು, ಶೋಷಿತರ ಮೇಲೆ ಗದಾಪ್ರಹಾರ ಮುಂದುವರಿದಿದೆ. ಬ್ರಿಟಿಷರ ವಿರುದ್ಧ ಸಾಮಾನ್ಯ ಜನರೂ ಹೋರಾಡಿದ್ದಾರೆ. ಆದರೆ, ಸ್ವತಂತ್ರ ಭಾರತದಲ್ಲಿ ದಲಿತರನ್ನು ಹೀನಾಯವಾಗಿ ಇನ್ನೂ ನಡೆಸಿಕೊಳ್ಳಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಉಪಾಧ್ಯಕ್ಷ ಕಲ್ಲಹಳ್ಳಿ ಕುಮಾರ್ ಮಾತನಾಡಿ, ‘ಸ್ವಾತಂತ್ರ್ಯ ಬಂದು 75 ವರ್ಷವಾದರೂ ಸಮಾಜದಲ್ಲಿ ಅಸ್ಪೃಶ್ಯತೆ,ಜಾತಿಗ್ರಸ್ಥ ಮನಸ್ಥಿತಿ ಜೀವಂತವಾಗಿದೆ ಎಂಬುದಕ್ಕೆ ಘಟನೆಯು ನಿದರ್ಶನವಾಗಿದೆ. ಹಿಂದೂ ಒಂದು ಎನ್ನುವವರು ದಲಿತರ ಮೇಲೆ ದೌರ್ಜನ್ಯ ನಡೆದಾಗ ದನಿ ಎತ್ತುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸಂಘದ ಅವಿನಾಶ್, ರಂಗನಾಥ್, ಕೆ.ಮಹದೇವಸ್ವಾಮಿ, ಜಗದೀಶ್, ಮಹೇಶ್, ಕಲ್ಲಪ್ಪ, ಟಿ.ಎಂ.ಕಾರ್ತಿಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ವಿವೇಕ ಸ್ಮಾರಕದ ಜೊತೆ ಮಹಾರಾಣಿ ಎನ್ಟಿಎಂ ಶಾಲೆ ನಿರ್ಮಾಣವೂ ನಡೆಯಬೇಕು ಎಂದು ಒತ್ತಾಯಿಸಿ ‘ಮಹಾರಾಣಿ ಎನ್ಟಿಎಂ ಶಾಲೆ ಉಳಿಸಿ ಹೋರಾಟ ಒಕ್ಕೂಟ’ ಮಂಗಳವಾರ ಪ್ರತಿಭಟನೆ ನಡೆಸಿತು.</p>.<p>ಗನ್ಹೌಸ್ನ ಕುವೆಂಪು ಉದ್ಯಾನದಲ್ಲಿ ಜಮಾಯಿಸಿದ ಒಕ್ಕೂಟದ ಸದಸ್ಯರು ಸರ್ಕಾರ ಹಾಗೂ ರಾಮಕೃಷ್ಣ ಆಶ್ರಮದ ವಿರುದ್ಧ ಘೋಷಣೆ ಕೂಗಿದರು.</p>.<p>ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಪುರುಷೋತ್ತಮ್ ಮಾತನಾಡಿ, ‘ವಾಣಿವಿಲಾಸ ಸನ್ನಿಧಾನ ನಿರ್ಮಿಸಿದ್ದ ಬಾಲಕಿಯರ ಶಾಲೆಯನ್ನು ಕೆಡವಿ ವಿವೇಕಾನಂದ ಸ್ಮಾರಕ ನಿರ್ಮಾಣ ಮಾಡುತ್ತಿರುವುದು ವಿವೇಕರಿಗೆ ಮಾಡಿದ ಅವಮಾನವಾಗಿದೆ. ಶಾಲೆಯ ಸಮಾಧಿ ಮೇಲೆ ಸ್ಮಾರಕವನ್ನು ಅವರೂ ಒಪ್ಪುತ್ತಿರಲಿಲ್ಲ’ ಎಂದರು.</p>.<p>‘ಸುತ್ತೂರು ಸ್ವಾಮೀಜಿ, ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಉಪಸ್ಥಿತಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸ್ಮಾರಕದ ಜೊತೆ ಶಾಲೆಯನ್ನು ನಿರ್ಮಿಸುವ ಪ್ರಸ್ತಾವಕ್ಕೆ ರಾಮಕೃಷ್ಣ ಆಶ್ರಮ ಒಪ್ಪಿತ್ತು. ಆದರೆ, ಏಕಾಏಕಿ ಶಾಲೆಯನ್ನು ಕೆಡವಲಾಗಿದೆ. ಆಶ್ರಮವು ಭೂಮಿಪೂಜೆಯನ್ನು ನೆರವೇರಿಸಿರುವುದು ಅನ್ಯಾಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಒಪ್ಪಂದವನ್ನು ಉಲ್ಲಂಘಿಸಿರುವ ಆಶ್ರಮವು ಶಾಲೆಯ ಉಳಿವಿಗೆ ಹೋರಾಡಿದವರಿಗೂ ಅಪಚಾರ ಮಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಡಿಕೆ ಈಡೇಸುವುದಾಗಿ ತಿಳಿಸಿದ್ದರು. ಇದೀಗ ಅವರೂ ಆಶ್ರಮ ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಶಾಲೆ ನಿರ್ಮಾಣ ಆಗುವವರೆಗೂ ಹೋರಾಟ ನಿಲ್ಲುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ಆಶ್ರಮದ ಮಾತನ್ನು ನಂಬಿ ಒಕ್ಕೂಟವು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿಲ್ಲ. ಸಂಧಾನ ಸಭೆಯಲ್ಲಿ ಭಾಗವಹಿಸಿದ್ದ ಡಿ.ಮಾದೇಗೌಡ ಸೇರಿದಂತೆ ಯಾರೊಬ್ಬರೂ ಈಗ ಮಾತನಾಡುತ್ತಿಲ್ಲ. ಆಶ್ರಮದವರು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>ರೈತಸಂಘದ ಪಿ.ಮರಂಕಯ್ಯ, ಮಂಡಕಳ್ಳಿ ಮಹೇಶ್, ಕರ್ನಾಟಕ ಕಾವಲು ಪಡೆಯ ಮೋಹನ್ ಕುಮಾರ್ ಗೌಡ, ಕರ್ನಾಟಕ ಜನಪರ ಶಕ್ತಿ ವೇದಿಕೆ ಅಧ್ಯಕ್ಷರಾದ ಮಧುಮತಿ, ಎಸ್.ಬಾಲಕೃಷ್ಣ, ಎಲ್ಐಸಿ ಸಿದ್ದಪ್ಪ, ಸುನಿಲ್ ಕುಮಾರ್, ಸಿದ್ದಲಿಂಗಪ್ಪ, ಪ್ರಕಾಶ್ ಇದ್ದರು.</p>.<p class="Briefhead"><strong><span class="Bullet">ದಲಿತ ಬಾಲಕ ಹತ್ಯೆ ಖಂಡಿಸಿ ಪ್ರತಿಭಟನೆ</span></strong></p>.<p><strong>ಮೈಸೂರು: </strong>ರಾಜಸ್ಥಾನದ ಶಾಲೆಯೊಂದರಲ್ಲಿಕುಡಿಯುವ ನೀರಿನ ಮಡಕೆ ಮುಟ್ಟಿದ ಕಾರಣಕ್ಕೆ ಶಿಕ್ಷಕನಿಂದ ದಲಿತ ಬಾಲಕನ ಹತ್ಯೆ ನಡೆದಿರುವುದನ್ನು ಖಂಡಿಸಿ ‘ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘ’ದ ಸದಸ್ಯರು ಪ್ರತಿಭಟನೆ ನಡೆಸಿದರು.</p>.<p>ಮಾನಸಗಂಗೋತ್ರಿಯ ಅಂಬೇಡ್ಕರ್ ಪ್ರತಿಮೆ ಎದುರು ಸೇರಿದ ಸದಸ್ಯರು, ತಪ್ಪಿತಸ್ಥ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಅಧ್ಯಕ್ಷ ಎಚ್.ಎಸ್.ನಟರಾಜ ಮಾತನಾಡಿ, ‘ಬಡವರು, ಶೋಷಿತರ ಮೇಲೆ ಗದಾಪ್ರಹಾರ ಮುಂದುವರಿದಿದೆ. ಬ್ರಿಟಿಷರ ವಿರುದ್ಧ ಸಾಮಾನ್ಯ ಜನರೂ ಹೋರಾಡಿದ್ದಾರೆ. ಆದರೆ, ಸ್ವತಂತ್ರ ಭಾರತದಲ್ಲಿ ದಲಿತರನ್ನು ಹೀನಾಯವಾಗಿ ಇನ್ನೂ ನಡೆಸಿಕೊಳ್ಳಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಉಪಾಧ್ಯಕ್ಷ ಕಲ್ಲಹಳ್ಳಿ ಕುಮಾರ್ ಮಾತನಾಡಿ, ‘ಸ್ವಾತಂತ್ರ್ಯ ಬಂದು 75 ವರ್ಷವಾದರೂ ಸಮಾಜದಲ್ಲಿ ಅಸ್ಪೃಶ್ಯತೆ,ಜಾತಿಗ್ರಸ್ಥ ಮನಸ್ಥಿತಿ ಜೀವಂತವಾಗಿದೆ ಎಂಬುದಕ್ಕೆ ಘಟನೆಯು ನಿದರ್ಶನವಾಗಿದೆ. ಹಿಂದೂ ಒಂದು ಎನ್ನುವವರು ದಲಿತರ ಮೇಲೆ ದೌರ್ಜನ್ಯ ನಡೆದಾಗ ದನಿ ಎತ್ತುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಸಂಘದ ಅವಿನಾಶ್, ರಂಗನಾಥ್, ಕೆ.ಮಹದೇವಸ್ವಾಮಿ, ಜಗದೀಶ್, ಮಹೇಶ್, ಕಲ್ಲಪ್ಪ, ಟಿ.ಎಂ.ಕಾರ್ತಿಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>