<p><strong>ಹುಣಸೂರು:</strong> ತಾಲ್ಲೂಕಿನ ಜಡಗನ ಕೊಪ್ಪಲು ಬಳಿ ಶುಕ್ರವಾರ ಮುಂಜಾನೆ ಲಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p><p>ಬಸ್ ಚಾಲಕ ಸಂಶದ್ ಹಾಗೂ ಕ್ಲೀನರ್ ದಿನೇಶ್ ಮೃತಪಟ್ಟವರು.</p><p>ಕೇರಳ ಕೋಯಿಕ್ಕೋಡ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಮೈಸೂರಿನಿಂದ ಹುಣಸೂರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. </p><p>ರಾತ್ರಿ ಸುರಿದ ಗಾಳಿ, ಮಳೆಯಿಂದ ರಸ್ತೆ ಬದಿಯಲ್ಲಿದ್ದ ಒಣ ಮರ ರಸ್ತೆಗೆ ಉರುಳಿತ್ತು. ಬಸ್ ಚಾಲಕ ಅದನ್ನು ಗಮನಿಸಿ, ಮರವನ್ನು ತಪ್ಪಿಸಲು ಬಸ್ಅನ್ನು ಬಲಕ್ಕೆ ತಿರುಗಿಸಿದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಲಾರಿ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ.</p><p>'ಮಾಹಿತಿ ನೀಡಿದರೂ 108 ಆಂಬುಲೆನ್ಸ್ ಅಪಘಾತ ಸ್ಥಳಕ್ಕೆ ಸಕಾಲದಲ್ಲಿ ಬಾರದ ಕಾರಣ ಗಾಯಗೊಂಡವರನ್ನು ಪೊಲೀಸ್ ವಾಹನದಲ್ಲಿ ಮೈಸೂರು ಹಾಗೂ ಹುಣಸೂರು ಆಸ್ಪತ್ರೆಗೆ ಸಾಗಿಸಬೇಕಾಯಿತು' ಎಂದು ಸರ್ಕಲ್ ಇನ್ಸ್ಪೆಕ್ಟರ್ ಮುನಿಯಪ್ಪ ತಿಳಿಸಿದರು. ಘಟನಾ ಸ್ಥಳಕ್ಕೆ ಎಎಸ್ಪಿ ನಾಗೇಶ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ತಾಲ್ಲೂಕಿನ ಜಡಗನ ಕೊಪ್ಪಲು ಬಳಿ ಶುಕ್ರವಾರ ಮುಂಜಾನೆ ಲಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.</p><p>ಬಸ್ ಚಾಲಕ ಸಂಶದ್ ಹಾಗೂ ಕ್ಲೀನರ್ ದಿನೇಶ್ ಮೃತಪಟ್ಟವರು.</p><p>ಕೇರಳ ಕೋಯಿಕ್ಕೋಡ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಮೈಸೂರಿನಿಂದ ಹುಣಸೂರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. </p><p>ರಾತ್ರಿ ಸುರಿದ ಗಾಳಿ, ಮಳೆಯಿಂದ ರಸ್ತೆ ಬದಿಯಲ್ಲಿದ್ದ ಒಣ ಮರ ರಸ್ತೆಗೆ ಉರುಳಿತ್ತು. ಬಸ್ ಚಾಲಕ ಅದನ್ನು ಗಮನಿಸಿ, ಮರವನ್ನು ತಪ್ಪಿಸಲು ಬಸ್ಅನ್ನು ಬಲಕ್ಕೆ ತಿರುಗಿಸಿದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಲಾರಿ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ.</p><p>'ಮಾಹಿತಿ ನೀಡಿದರೂ 108 ಆಂಬುಲೆನ್ಸ್ ಅಪಘಾತ ಸ್ಥಳಕ್ಕೆ ಸಕಾಲದಲ್ಲಿ ಬಾರದ ಕಾರಣ ಗಾಯಗೊಂಡವರನ್ನು ಪೊಲೀಸ್ ವಾಹನದಲ್ಲಿ ಮೈಸೂರು ಹಾಗೂ ಹುಣಸೂರು ಆಸ್ಪತ್ರೆಗೆ ಸಾಗಿಸಬೇಕಾಯಿತು' ಎಂದು ಸರ್ಕಲ್ ಇನ್ಸ್ಪೆಕ್ಟರ್ ಮುನಿಯಪ್ಪ ತಿಳಿಸಿದರು. ಘಟನಾ ಸ್ಥಳಕ್ಕೆ ಎಎಸ್ಪಿ ನಾಗೇಶ್ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>