ಜೂನ್ 11ರಿಂದ ರಾಜ್ಯದಲ್ಲಿ ಶಕ್ತಿ ಯೋಜನೆಯು ಜಾರಿಗೆ ಬಂದ ನಂತರ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಪ್ರಮಾಣವು ಗಣನೀಯ ಏರಿಕೆ ಕಾಣುತ್ತಿದೆ. ಮೈಸೂರು ಘಟಕ ವ್ಯಾಪ್ತಿಯಲ್ಲಿ 1,071 ಬಸ್ಗಳಿದ್ದು, ನಿತ್ಯ ಸರಾಸರಿ 4.09 ಲಕ್ಷ ಮಂದಿ ಪ್ರಯಾಣಿಸುತ್ತಿದ್ದರು. ಈಗ ಈ ಪ್ರಯಾಣಿಕರ ಪ್ರಮಾಣ ಶೇ 10-15ರಷ್ಟು ಹೆಚ್ಚಾಗಿದೆ. ಆದರೆ, ಬಸ್ಗಳ ಸಂಖ್ಯೆ ಮಾತ್ರ ಹೆಚ್ಚಿಲ್ಲ.
ಮೈಸೂರಿನ ರಾಮಸ್ವಾಮಿ ವೃತ್ತ ಸಮೀಪ ಗುರುವಾರ ಫುಟ್ಬೋರ್ಡ್ನಲ್ಲಿ ನಿಂತು ಪ್ರಯಾಣಿಸಿದ ವಿದ್ಯಾರ್ಥಿನಿಯರು
ಪ್ರಜಾವಾಣಿ ಚಿತ್ರ/ಅನೂಪ್ ರಾಘ್ ಟಿ.
ಬೆಳಿಗ್ಗೆ 8ರಿಂದ 9ರವರೆಗೆ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು ಬಸ್ ಹತ್ತುವುದೇ ಕಷ್ಟವಾಗುತ್ತಿದೆ. ಕಾಲೇಜಿಗೆ ತಡವಾಗುತ್ತದೆ ಎಂಬ ಕಾರಣಕ್ಕೆ ನಿಲ್ದಾಣದಿಂದ ನಡದೇ ಹೋಗುತ್ತಿದ್ದೇವೆ
- ಸುಮಾ, ವಿದ್ಯಾರ್ಥಿನಿ ಮಹಾರಾಣಿ ಕಾಲೇಜು
ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದ ಮುಂಭಾಗ ಸಿಟಿ ಬಸ್ ಏರಲು ನೂಕುನುಗ್ಗಲು ಕಂಡುಬಂತು
ಪ್ರಜಾವಾಣಿ ಚಿತ್ರ/ಅನೂಪ್ ರಾಘ್ ಟಿ.
ಭದ್ರತೆಗೆ ಗೃಹರಕ್ಷಕರು ಪೊಲೀಸರ ನಿಯೋಜನೆ
ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ಕೆಎಸ್ಆರ್ಟಿಸಿಯು ನಗರ ಹಾಗೂ ಕೇಂದ್ರೀಯ ಬಸ್ ನಿಲ್ದಾಣಗಳಲ್ಲಿ ಭದ್ರತೆಗೆ ಗೃಹರಕ್ಷಕ ದಳ ಹಾಗೂ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಯಾಣಿಕರು ಬಸ್ ಹತ್ತುವ ಸಂದರ್ಭಗಳಲ್ಲಿ ನೂಕುನುಗ್ಗಲು ಉಂಟಾದಾಗ ಸಿಬ್ಬಂದಿ ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ. ಕೇಂದ್ರೀಯ ಬಸ್ ನಿಲ್ದಾಣದ ಮುಂಭಾಗದ ಬಸ್ ನಿಲುಗಡೆ ತಾಣದಲ್ಲಿಯೂ ಈ ಕಾವಲು ಇದೆ. ಸರಗಳ್ಳರು ಪಿಕ್ಪಾಕೆಟ್ ಮಾಡುವವರು ಕೈಚಳಕ ತೋರುವ ಸಾಧ್ಯತೆ ಇದ್ದು ಎಚ್ಚರದಿಂದ ಇರುವಂತೆ ಸೂಚಿಸಲಾಗುತ್ತಿದೆ.