<p><strong>ಮೈಸೂರು</strong>: ‘ಬೆಣ್ಣೆಹಣ್ಣು (ಬಟರ್ಫ್ರೂಟ್) ಬಹಳ ಬೇಡಿಕೆ ಗಳಿಸಿದ್ದು, ರೈತರು ಈ ಬೆಳೆಯತ್ತ ಗಮನಹರಿಸಬೇಕು’ ಎಂದು ತೋಟಗಾರಿಕೆ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ ತನ್ವೀರ್ ಅಹ್ಮದ್ ಸಲಹೆ ನೀಡಿದರು.</p>.<p>ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತಾಲ್ಲೂಕಿನ ಯಲಚಹಳ್ಳಿಯ ತೋಟಗಾರಿಕೆ ಕಾಲೇಜಿನಲ್ಲಿ ಈಚೆಗೆ ‘ಬೆಣ್ಣೆ ಹಣ್ಣು ಬೆಳೆಯ ಸುಧಾರಿತ ಉತ್ಪಾದನಾ ತಾಂತ್ರಿಕತೆಗಳು’ ವಿಷಯದ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೋವಿಡ್ ನಂತರ ಆರೋಗ್ಯದತ್ತ ಜನರು ಕಾಳಜಿ ವಹಿಸುವುದು ಹೆಚ್ಚಾದ ಕಾರಣ ಬೆಣ್ಣೆಹಣ್ಣಿಗೆ ಬೇಡಿಕೆ ಬಂದಿದೆ. ಮಾರುಕಟ್ಟೆಯಲ್ಲಿ ಬೆಲೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಅವಕಾಶವನ್ನು ಕೃಷಿಕರು ಬಳಸಿಕೊಳ್ಳಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಡೀನ್ ಸಿ.ಎನ್. ಹಂಚಿನಮನಿ, ‘ರೈತರು ಒಂದೇ ಬೆಳೆಯ ಮೇಲಷ್ಟೇ ಅವಲಂಬಿತರಾಗದೇ ಬಹು ಬೆಳೆ ಪದ್ಧತಿ ಅನುಸರಿಸಿದರೆ ಹಾಗೂ ಕೃಷಿಯ ಉಪಕಸುಬುಗಳಲ್ಲಿ ತೊಡಗಿದರೆ ಸುಸ್ಥಿರತೆ ಜೊತೆಗೆ ಲಾಭವೂ ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ಬೆಂಗಳೂರಿನ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಪ್ರಧಾನ ಸಂಶೋಧಕ ಕರುಣಾಕರನ್ ಜಿ. ಅವರು ಬೆಣ್ಣೆಹಣ್ಣಿನ ಪ್ರಸ್ತುತ ಸ್ಥಿತಿ, ವಾತಾವರಣ, ಮಣ್ಣು, ಸಸಿ ಉತ್ಪಾದನೆ, ಬೇಸಾಯ ಕ್ರಮಗಳು ಹಾಗೂ ಮಾರುಕಟ್ಟೆ ಬೇಡಿಕೆ-ಬೆಲೆ ಕುರಿತು ಮಾಹಿತಿ ನೀಡಿದರು.</p>.<p>‘ಬಟರ್ಫ್ರೂಟ್ ಬೆಳೆಯಲ್ಲಿ ಜೈವಿಕ ಉತ್ಪನ್ನಗಳ ಬಳಕೆ ಹಾಗೂ ಉಪಯೋಗ’ ಕುರಿತು ಮಂಜುನಾಥ್ ಜಿ., ‘ಸಂಸ್ಕರಣೆ, ಶೇಖರಣೆ ಹಾಗೂ ಮೌಲ್ಯವರ್ಧನೆ ಅವಕಾಶಗಳು’ ಬಗ್ಗೆ ಚಂದನ್ ಕೆ. ಉಪನ್ಯಾಸ ನೀಡಿದರು.</p>.<p>ವಿಷಯ ತಜ್ಞರಾದ ಅರವಿಂದ ಕುಮಾರ್ ಜೆ.ಎಸ್., ಶಿವಕುಮಾರ್ ಕೆ.ಎಂ., ಮನುಕುಮಾರ್ ಎಚ್.ಆರ್., ಮಮತಾಲಕ್ಷ್ಮಿ ಎನ್., ಸಿದ್ದಪ್ಪ ಆರ್. ಮತ್ತು ಮುತ್ತುರಾಜು ಜಿ.ಪಿ. ಅವರು ರೈತರೊಂದಿಗೆ ಸಂವಾದ ನಡೆಸಿದರು.</p>.<p>ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಬೆಣ್ಣೆಹಣ್ಣು (ಬಟರ್ಫ್ರೂಟ್) ಬಹಳ ಬೇಡಿಕೆ ಗಳಿಸಿದ್ದು, ರೈತರು ಈ ಬೆಳೆಯತ್ತ ಗಮನಹರಿಸಬೇಕು’ ಎಂದು ತೋಟಗಾರಿಕೆ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ ತನ್ವೀರ್ ಅಹ್ಮದ್ ಸಲಹೆ ನೀಡಿದರು.</p>.<p>ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತಾಲ್ಲೂಕಿನ ಯಲಚಹಳ್ಳಿಯ ತೋಟಗಾರಿಕೆ ಕಾಲೇಜಿನಲ್ಲಿ ಈಚೆಗೆ ‘ಬೆಣ್ಣೆ ಹಣ್ಣು ಬೆಳೆಯ ಸುಧಾರಿತ ಉತ್ಪಾದನಾ ತಾಂತ್ರಿಕತೆಗಳು’ ವಿಷಯದ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೋವಿಡ್ ನಂತರ ಆರೋಗ್ಯದತ್ತ ಜನರು ಕಾಳಜಿ ವಹಿಸುವುದು ಹೆಚ್ಚಾದ ಕಾರಣ ಬೆಣ್ಣೆಹಣ್ಣಿಗೆ ಬೇಡಿಕೆ ಬಂದಿದೆ. ಮಾರುಕಟ್ಟೆಯಲ್ಲಿ ಬೆಲೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಅವಕಾಶವನ್ನು ಕೃಷಿಕರು ಬಳಸಿಕೊಳ್ಳಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಡೀನ್ ಸಿ.ಎನ್. ಹಂಚಿನಮನಿ, ‘ರೈತರು ಒಂದೇ ಬೆಳೆಯ ಮೇಲಷ್ಟೇ ಅವಲಂಬಿತರಾಗದೇ ಬಹು ಬೆಳೆ ಪದ್ಧತಿ ಅನುಸರಿಸಿದರೆ ಹಾಗೂ ಕೃಷಿಯ ಉಪಕಸುಬುಗಳಲ್ಲಿ ತೊಡಗಿದರೆ ಸುಸ್ಥಿರತೆ ಜೊತೆಗೆ ಲಾಭವೂ ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.</p>.<p>ಬೆಂಗಳೂರಿನ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಪ್ರಧಾನ ಸಂಶೋಧಕ ಕರುಣಾಕರನ್ ಜಿ. ಅವರು ಬೆಣ್ಣೆಹಣ್ಣಿನ ಪ್ರಸ್ತುತ ಸ್ಥಿತಿ, ವಾತಾವರಣ, ಮಣ್ಣು, ಸಸಿ ಉತ್ಪಾದನೆ, ಬೇಸಾಯ ಕ್ರಮಗಳು ಹಾಗೂ ಮಾರುಕಟ್ಟೆ ಬೇಡಿಕೆ-ಬೆಲೆ ಕುರಿತು ಮಾಹಿತಿ ನೀಡಿದರು.</p>.<p>‘ಬಟರ್ಫ್ರೂಟ್ ಬೆಳೆಯಲ್ಲಿ ಜೈವಿಕ ಉತ್ಪನ್ನಗಳ ಬಳಕೆ ಹಾಗೂ ಉಪಯೋಗ’ ಕುರಿತು ಮಂಜುನಾಥ್ ಜಿ., ‘ಸಂಸ್ಕರಣೆ, ಶೇಖರಣೆ ಹಾಗೂ ಮೌಲ್ಯವರ್ಧನೆ ಅವಕಾಶಗಳು’ ಬಗ್ಗೆ ಚಂದನ್ ಕೆ. ಉಪನ್ಯಾಸ ನೀಡಿದರು.</p>.<p>ವಿಷಯ ತಜ್ಞರಾದ ಅರವಿಂದ ಕುಮಾರ್ ಜೆ.ಎಸ್., ಶಿವಕುಮಾರ್ ಕೆ.ಎಂ., ಮನುಕುಮಾರ್ ಎಚ್.ಆರ್., ಮಮತಾಲಕ್ಷ್ಮಿ ಎನ್., ಸಿದ್ದಪ್ಪ ಆರ್. ಮತ್ತು ಮುತ್ತುರಾಜು ಜಿ.ಪಿ. ಅವರು ರೈತರೊಂದಿಗೆ ಸಂವಾದ ನಡೆಸಿದರು.</p>.<p>ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>