<p><strong>ನಾಗಮಂಗಲ</strong>: ‘ನಾನು ಕ್ಷೇತ್ರಕ್ಕೆ ಮರಳಿ ಬಂದಿರುವುದು ರಾಜಕೀಯಮಾಡುವ ಉದ್ದೇಶದಿಂದ ಅಲ್ಲ. ತಾಲ್ಲೂಕಿನ ಜನರ ಸೇವೆ ಮಾಡಲು ಮಾತ್ರ’ ಎಂದು ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೇಗೌಡ ಹೇಳಿದರು.</p>.<p>ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕ ಸುರೇಶ್ ಗೌಡ ಅವರು ನಾನು ಯಾವ ಪಕ್ಷದಲ್ಲಿದ್ದೇನೆ ಎಂದು ಗೊತ್ತಿಲ್ಲ ಎಂದು ಹೇಳಿರುವುದಕ್ಕೆ ಸಂಬಂಧಿಸಿ ನಾನು ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ಕಚೇರಿಯ ಮುಂದೆ ಹಾಕಿದ್ದೇನೆ. ಜನ ಸೇವೆಯಲ್ಲಿ ತೊಡಗಿ ದ್ದೇನೆ. ಅದನ್ನು ನೋಡಿದರೆ ನಾನು ಯಾವ ಪಕ್ಷದಲ್ಲಿದ್ದೇನೆ ಎಂದು ಅವರಿಗೆ ತಿಳಿಯುತ್ತದೆ. ಶಾಸಕ ಸುರೇಶ್ ಗೌಡ ಅವರಿಗೆ ಈಗ ಅಪ್ಪಾಜಿಗೌಡ ರಾಗಲೀ, ಶಿವ ರಾಮೇಗೌಡ ರಾಗಲೀ ಮತ್ತು ಮೂಲ ಜೆಡಿಎಸ್ನ ವರಾಗಲೀ ಕಣ್ಣಿಗೆ ಬೀಳುತ್ತಿಲ್ಲ’ ಎಂದರು.</p>.<p class="Subhead"><strong>ಜೆಡಿಎಸ್ ಬಗ್ಗೆ ಮಾತನಾಡಲು ಎಚ್.ವಿಶ್ವನಾಥ್ ಯಾರು?: </strong>ಎಚ್.ಡಿ.ಕುಮಾರಸ್ವಾಮಿ ಅವರು ತೆಗೆದುಕೊಳ್ಳುತ್ತಿರುವ ಅವಸರದ ತೀರ್ಮಾನಗಳಿಂದ ಜೆಡಿಎಸ್ ಪಕ್ಷ ಕುಸಿಯುತ್ತಿದೆ ಎಂದು ನಾಗಮಂಗಲಕ್ಕೆ ಈಚೆಗೆ ಭೇಟಿ ನೀಡಿದ್ದ ಎಚ್.ವಿಶ್ವನಾಥ್ ಹೇಳಿದ್ದರು. ವಿಶ್ವನಾಥ್ ಅವರಿಗೆ ಪಕ್ಷದಲ್ಲಿ ಸ್ಥಾನ, ಅಧಿಕಾರ ಕೊಟ್ಟಿದ್ದರು. ಈಗ ಪಕ್ಷ ಬಿಟ್ಟು ಹೋಗಿದ್ದು, ನಮ್ಮ ಪಕ್ಷದ ವಿಚಾರ ಮಾತನಾಡಲು ಅವರು ಯಾರು?. ಜೆಡಿಎಸ್ ಪಕ್ಷದ ಬಗ್ಗೆ ಅವರು ಚಿಂತಿಸುವ ಅವಶ್ಯಕತೆಯಿಲ್ಲ ಎಂದರು.</p>.<p>ಪುಟ್ಟಸ್ವಾಮಿಗೌಡ, ವೆಂಕಟೇಶ್, ಚನ್ನಪ್ಪ, ರಾಮೇಗೌಡ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ‘ನಾನು ಕ್ಷೇತ್ರಕ್ಕೆ ಮರಳಿ ಬಂದಿರುವುದು ರಾಜಕೀಯಮಾಡುವ ಉದ್ದೇಶದಿಂದ ಅಲ್ಲ. ತಾಲ್ಲೂಕಿನ ಜನರ ಸೇವೆ ಮಾಡಲು ಮಾತ್ರ’ ಎಂದು ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೇಗೌಡ ಹೇಳಿದರು.</p>.<p>ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕ ಸುರೇಶ್ ಗೌಡ ಅವರು ನಾನು ಯಾವ ಪಕ್ಷದಲ್ಲಿದ್ದೇನೆ ಎಂದು ಗೊತ್ತಿಲ್ಲ ಎಂದು ಹೇಳಿರುವುದಕ್ಕೆ ಸಂಬಂಧಿಸಿ ನಾನು ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ಕಚೇರಿಯ ಮುಂದೆ ಹಾಕಿದ್ದೇನೆ. ಜನ ಸೇವೆಯಲ್ಲಿ ತೊಡಗಿ ದ್ದೇನೆ. ಅದನ್ನು ನೋಡಿದರೆ ನಾನು ಯಾವ ಪಕ್ಷದಲ್ಲಿದ್ದೇನೆ ಎಂದು ಅವರಿಗೆ ತಿಳಿಯುತ್ತದೆ. ಶಾಸಕ ಸುರೇಶ್ ಗೌಡ ಅವರಿಗೆ ಈಗ ಅಪ್ಪಾಜಿಗೌಡ ರಾಗಲೀ, ಶಿವ ರಾಮೇಗೌಡ ರಾಗಲೀ ಮತ್ತು ಮೂಲ ಜೆಡಿಎಸ್ನ ವರಾಗಲೀ ಕಣ್ಣಿಗೆ ಬೀಳುತ್ತಿಲ್ಲ’ ಎಂದರು.</p>.<p class="Subhead"><strong>ಜೆಡಿಎಸ್ ಬಗ್ಗೆ ಮಾತನಾಡಲು ಎಚ್.ವಿಶ್ವನಾಥ್ ಯಾರು?: </strong>ಎಚ್.ಡಿ.ಕುಮಾರಸ್ವಾಮಿ ಅವರು ತೆಗೆದುಕೊಳ್ಳುತ್ತಿರುವ ಅವಸರದ ತೀರ್ಮಾನಗಳಿಂದ ಜೆಡಿಎಸ್ ಪಕ್ಷ ಕುಸಿಯುತ್ತಿದೆ ಎಂದು ನಾಗಮಂಗಲಕ್ಕೆ ಈಚೆಗೆ ಭೇಟಿ ನೀಡಿದ್ದ ಎಚ್.ವಿಶ್ವನಾಥ್ ಹೇಳಿದ್ದರು. ವಿಶ್ವನಾಥ್ ಅವರಿಗೆ ಪಕ್ಷದಲ್ಲಿ ಸ್ಥಾನ, ಅಧಿಕಾರ ಕೊಟ್ಟಿದ್ದರು. ಈಗ ಪಕ್ಷ ಬಿಟ್ಟು ಹೋಗಿದ್ದು, ನಮ್ಮ ಪಕ್ಷದ ವಿಚಾರ ಮಾತನಾಡಲು ಅವರು ಯಾರು?. ಜೆಡಿಎಸ್ ಪಕ್ಷದ ಬಗ್ಗೆ ಅವರು ಚಿಂತಿಸುವ ಅವಶ್ಯಕತೆಯಿಲ್ಲ ಎಂದರು.</p>.<p>ಪುಟ್ಟಸ್ವಾಮಿಗೌಡ, ವೆಂಕಟೇಶ್, ಚನ್ನಪ್ಪ, ರಾಮೇಗೌಡ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>