<p><strong>ಹುಣಸೂರು:</strong> ‘ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೆ ಉಚಿತ ಚಿಕಿತ್ಸಾ ಶಿಬಿರಗಳ ಅಗತ್ಯವಿದೆ’ ಎಂದು ಹೃದ್ರೋಗ ತಜ್ಞ ಡಾ.ಮುರಳೀಧರ್ ಹೇಳಿದರು.</p>.<p>ತಾಲ್ಲೂಕಿನ ಗಾವಡಗೆರೆ ಗ್ರಾಮದಲ್ಲಿ ಶಿವ ಛತ್ರಪತಿ ಮರಾಠ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಮುಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ರಾಯಚೂರಿನ ಹೃದಯ ಚಿಕಿತ್ಸಾ ಆಸ್ಪತ್ರೆ ಹಮ್ಮಿಕೊಂಡಿದ್ದ ಉಚಿತ ಚಿಕಿತ್ಸೆ ಉದ್ಘಾಟಿಸಿ ಮಾತನಾಡಿದರು.</p>.<p>‘ಹುಟ್ಟೂರು ಗಾವಡಗೆರೆಯಲ್ಲಿ ಕಳೆದ 9 ವರ್ಷದಿಂದ ಜನ್ಮದಿನದಂದು ಗ್ರಾಮದ ಜನರಿಗೆ ಆರೋಗ್ಯ ಸೇವೆ ಕಲ್ಪಿಸಲು ಹೃದಯ ತಪಾಸಣಾ ಶಿಬಿರ ಹಮ್ಮಿಕೊಳ್ಳುತ್ತಿದ್ದೇನೆ. ಸ್ಥಳೀಯರ ಸೇವೆ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಹಾಗೂ ನಮ್ಮೂರ ಜನರಿಗೆ ಸೇವೆ ಮಾಡಿದ ನೆಮ್ಮದಿ ಸಿಗುತ್ತಿದೆ’ ಎಂದರು.</p>.<p>‘ಮುಳ್ಳೂರು ಪ್ರಾಥಮಿಕ ಆಸ್ಪತ್ರೆಗೆ ಇಸಿಜಿ ಯಂತ್ರ ಕೊಡುಗೆ ನೀಡಿದ್ದು, ಮುಂದಿನ ದಿನದಲ್ಲಿ ಸ್ಥಳಿಯ ಆಸ್ಪತ್ರೆಗೆ ಹೃದಯ ಸಂಬಂಧಿ ಕಾಯಿಲೆ ಪರೀಕ್ಷೆಗೆ ಬೇಕಾಗುವ ಅಗತ್ಯ ಯಂತ್ರವನ್ನು ಕೊಡುಗೆ ನೀಡುತ್ತೇನೆ’ ಎಂದು ತಿಳಿಸಿದರು.</p>.<p>300ಕ್ಕೂ ಹೆಚ್ಚು ಜನರಿಗೆ ಹೃದಯ ತಪಾಸಣೆ ಮಾಡಲಾಯಿತು.</p>.<p>ಶಿಬಿರದಲ್ಲಿ ಡಾ.ಕಿರಣ್ ಕುಮಾರ್, ಡಾ.ದಿನೇಶ್ ಬಾಬು, ಡಾ.ಶ್ರೀಕಾಂತ್, ಭಾನುಮತಿ, ಸುರೇಶ್, ಶ್ರೀನಿವಾಸ್ ಸಿಂಧೆ, ಮಮತ, ಸವಿತ, ಸೌಂದರ್ಯ, ಹರ್ಷಿತ್ ಮರಾಠ ಸಮಿತಿಯ ಕಾರ್ಯದರ್ಶಿ ಜಿ.ವಿ.ಶ್ರೀನಾಥ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ‘ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೆ ಉಚಿತ ಚಿಕಿತ್ಸಾ ಶಿಬಿರಗಳ ಅಗತ್ಯವಿದೆ’ ಎಂದು ಹೃದ್ರೋಗ ತಜ್ಞ ಡಾ.ಮುರಳೀಧರ್ ಹೇಳಿದರು.</p>.<p>ತಾಲ್ಲೂಕಿನ ಗಾವಡಗೆರೆ ಗ್ರಾಮದಲ್ಲಿ ಶಿವ ಛತ್ರಪತಿ ಮರಾಠ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಮುಳ್ಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ರಾಯಚೂರಿನ ಹೃದಯ ಚಿಕಿತ್ಸಾ ಆಸ್ಪತ್ರೆ ಹಮ್ಮಿಕೊಂಡಿದ್ದ ಉಚಿತ ಚಿಕಿತ್ಸೆ ಉದ್ಘಾಟಿಸಿ ಮಾತನಾಡಿದರು.</p>.<p>‘ಹುಟ್ಟೂರು ಗಾವಡಗೆರೆಯಲ್ಲಿ ಕಳೆದ 9 ವರ್ಷದಿಂದ ಜನ್ಮದಿನದಂದು ಗ್ರಾಮದ ಜನರಿಗೆ ಆರೋಗ್ಯ ಸೇವೆ ಕಲ್ಪಿಸಲು ಹೃದಯ ತಪಾಸಣಾ ಶಿಬಿರ ಹಮ್ಮಿಕೊಳ್ಳುತ್ತಿದ್ದೇನೆ. ಸ್ಥಳೀಯರ ಸೇವೆ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಹಾಗೂ ನಮ್ಮೂರ ಜನರಿಗೆ ಸೇವೆ ಮಾಡಿದ ನೆಮ್ಮದಿ ಸಿಗುತ್ತಿದೆ’ ಎಂದರು.</p>.<p>‘ಮುಳ್ಳೂರು ಪ್ರಾಥಮಿಕ ಆಸ್ಪತ್ರೆಗೆ ಇಸಿಜಿ ಯಂತ್ರ ಕೊಡುಗೆ ನೀಡಿದ್ದು, ಮುಂದಿನ ದಿನದಲ್ಲಿ ಸ್ಥಳಿಯ ಆಸ್ಪತ್ರೆಗೆ ಹೃದಯ ಸಂಬಂಧಿ ಕಾಯಿಲೆ ಪರೀಕ್ಷೆಗೆ ಬೇಕಾಗುವ ಅಗತ್ಯ ಯಂತ್ರವನ್ನು ಕೊಡುಗೆ ನೀಡುತ್ತೇನೆ’ ಎಂದು ತಿಳಿಸಿದರು.</p>.<p>300ಕ್ಕೂ ಹೆಚ್ಚು ಜನರಿಗೆ ಹೃದಯ ತಪಾಸಣೆ ಮಾಡಲಾಯಿತು.</p>.<p>ಶಿಬಿರದಲ್ಲಿ ಡಾ.ಕಿರಣ್ ಕುಮಾರ್, ಡಾ.ದಿನೇಶ್ ಬಾಬು, ಡಾ.ಶ್ರೀಕಾಂತ್, ಭಾನುಮತಿ, ಸುರೇಶ್, ಶ್ರೀನಿವಾಸ್ ಸಿಂಧೆ, ಮಮತ, ಸವಿತ, ಸೌಂದರ್ಯ, ಹರ್ಷಿತ್ ಮರಾಠ ಸಮಿತಿಯ ಕಾರ್ಯದರ್ಶಿ ಜಿ.ವಿ.ಶ್ರೀನಾಥ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>