ಬಡಾವಣೆಯ ನಿವಾಸಿ ಚೇತನ್ ದಾಸ್ ಮಾತನಾಡಿ, ‘ನಮ್ಮ ಬಡಾವಣೆಯ ಮುಂಭಾಗದಲ್ಲಿರುವ ಪ್ರೊ.ರಂಗಪ್ಪ ಬಡಾವಣೆಯಲ್ಲಿ 83 ಸೈಟ್ಗಳನ್ನು ನಿರ್ಮಿಸಿ ಮಾರಾಟ ಮಾಡಲಾಗಿದೆ. ಆದರೆ, ಬಿಲ್ಡರ್ಸ್ ಇಲ್ಲಿ ಮೂಲ ಸೌಕರ್ಯ ಕಲ್ಪಿಸಿಲ್ಲ. ವಿದ್ಯುತ್, ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಹೊಸ ಮನೆ ಕಟ್ಟಿಸಿಕೊಳ್ಳುವವರು ಮನೆಗೊಂದರಂತೆ ಕೊಳವೆಬಾವಿ ಕೊರೆಸಲು ಆರಂಭಿಸಿದ್ದಾರೆ. ಇದರಿಂದ ಅಂತರ್ಜಲ ಮಟ್ಟ ಕುಸಿಯುವ ಭೀತಿ ಎದುರಾಗಿದೆ’ ಎಂದು ಆತಂಕ ವ್ಯಕ್ತಪಡಿಸಿದರು.