<p><strong>ಮೈಸೂರು:</strong> ರೈತರು ಮತ್ತು ಕಾರ್ಮಿಕರ ಪಾಲಿಗೆ ಮಾರಕವಾಗಿರುವ ಮಸೂದೆ ಗಳನ್ನು ರದ್ದುಪಡಿಸುವಂತೆ ಕೋರಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.</p>.<p>ಶನಿವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಪಕ್ಷದ ಮುಖಂಡರು ಮನವಿ ಪತ್ರವನ್ನು ರೋಹಿಣಿ ಸಿಂಧೂರಿ ಅವರಿಗೆ ನೀಡಿದರು.</p>.<p>ರೈತರು, ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಕೃಷಿ ಸೇವೆಗಳ ಮಸೂದೆ, ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಗಳು ರೈತರ ಪಾಲಿಕೆ ಕರಾಳವಾಗಿ ಪರಿಣಮಿಸಿವೆ. ಇವುಗಳನ್ನು ರದ್ದುಪಡಿಸಬೇಕು<br />ಎಂದು ಅವರು ಆಗ್ರಹಿಸಿದರು.</p>.<p>ಪಕ್ಷದ ಮುಖಂಡ ವಾಸು ಮಾತನಾಡಿ, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುವ ಮೂಲಕ ಹಸಿರು ಕ್ರಾಂತಿಯನ್ನು ಇಲ್ಲವಾಗಿಸಲು ಸಂಚು ರೂಪಿಸಿದೆ ಎಂದು ಟೀಕಿಸಿದರು.</p>.<p>ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಬಂಡವಾಳಶಾಹಿಗಳ ಪರವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಪ್ರತಿಭಟನೆ ಕಾಣದಂತೆ ನಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ರಾಷ್ಟ್ರಪತಿ ಮಧ್ಯಪ್ರವೇಶಿಸಿ ಈ ಮಸೂದೆಗಳನ್ನು ವಾಪಸ್ ಪಡೆಯು ವಂತೆ ಆದೇಶಿಸಬೇಕು. ಮೋದಿ ಸರ್ಕಾ ರದ ಈ ನಡೆಯನ್ನು ಕೃಷಿಕ ಸಮುದಾಯ ಎಂದೂ ಕ್ಷಮಿಸದು ಎಂದರು.</p>.<p>ಮುಖಂಡ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಚಂದ್ರಶೇಖರ್, ಶಿವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರೈತರು ಮತ್ತು ಕಾರ್ಮಿಕರ ಪಾಲಿಗೆ ಮಾರಕವಾಗಿರುವ ಮಸೂದೆ ಗಳನ್ನು ರದ್ದುಪಡಿಸುವಂತೆ ಕೋರಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.</p>.<p>ಶನಿವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಪಕ್ಷದ ಮುಖಂಡರು ಮನವಿ ಪತ್ರವನ್ನು ರೋಹಿಣಿ ಸಿಂಧೂರಿ ಅವರಿಗೆ ನೀಡಿದರು.</p>.<p>ರೈತರು, ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಕೃಷಿ ಸೇವೆಗಳ ಮಸೂದೆ, ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಗಳು ರೈತರ ಪಾಲಿಕೆ ಕರಾಳವಾಗಿ ಪರಿಣಮಿಸಿವೆ. ಇವುಗಳನ್ನು ರದ್ದುಪಡಿಸಬೇಕು<br />ಎಂದು ಅವರು ಆಗ್ರಹಿಸಿದರು.</p>.<p>ಪಕ್ಷದ ಮುಖಂಡ ವಾಸು ಮಾತನಾಡಿ, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸುವ ಮೂಲಕ ಹಸಿರು ಕ್ರಾಂತಿಯನ್ನು ಇಲ್ಲವಾಗಿಸಲು ಸಂಚು ರೂಪಿಸಿದೆ ಎಂದು ಟೀಕಿಸಿದರು.</p>.<p>ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಬಂಡವಾಳಶಾಹಿಗಳ ಪರವಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಪ್ರತಿಭಟನೆ ಕಾಣದಂತೆ ನಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ರಾಷ್ಟ್ರಪತಿ ಮಧ್ಯಪ್ರವೇಶಿಸಿ ಈ ಮಸೂದೆಗಳನ್ನು ವಾಪಸ್ ಪಡೆಯು ವಂತೆ ಆದೇಶಿಸಬೇಕು. ಮೋದಿ ಸರ್ಕಾ ರದ ಈ ನಡೆಯನ್ನು ಕೃಷಿಕ ಸಮುದಾಯ ಎಂದೂ ಕ್ಷಮಿಸದು ಎಂದರು.</p>.<p>ಮುಖಂಡ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಚಂದ್ರಶೇಖರ್, ಶಿವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>