<p><strong>ಮೈಸೂರು:</strong> ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕಲ್ಲಳ್ಳಿ ವಲಯದಲ್ಲಿ ಈಚೆಗೆ ಹುಲಿಯೊಂದನ್ನು ಗುಂಡಿಟ್ಟು ಕೊಂದಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಅರಣ್ಯಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ.</p>.<p>‘ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದೀರಿ. ಇದಕ್ಕಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳಿಗೆ ಅಭಿನಂದನೆಗಳು’ ಎಂದಿದ್ದಾರೆ.</p>.<p>ಆರೋಪಿಗಳ ಪತ್ತೆಗಾಗಿ ಬಂಡೀಪುರ ರಾಷ್ಟ್ರೀಯ ಉದ್ಯಾನದಿಂದ ‘ರಾಣಾ’ ಎಂಬ ಶ್ವಾನವನ್ನು ಕರೆ ತರಲಾಗಿತ್ತು. ಅನುಮಾನ ಬಂದ ಪ್ರದೇಶಕ್ಕೆ ತೆರಳಿ ಪರಿಶೀಲಿಸಿದಾಗ ಈ ಶ್ವಾನವು ಮೊದಲಿಗೆ ಸಂತೋಷ್ ಎಂಬಾತನ ಮನೆಗೆ ಹೋಗಿದೆ. ಅಲ್ಲಿ ಒಂದೂವರೆ ಕೆ.ಜಿಯಷ್ಟು ಜಿಂಕೆ ಮಾಂಸ ಪತ್ತೆಯಾಗಿದೆ. ಸಂತೋಷ್ನನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಬೇಟೆಯಾಡಿರುವುದು ಗೊತ್ತಾಗಿದೆ.</p>.<p>ಆರೋಪಿಗಳಿಂದ ಹುಲಿಯ 13 ಉಗುರು ಹಾಗೂ 2 ಕೋರೆ ಹಲ್ಲು ಸೇರಿದಂತೆ 2 ಬೈಕ್ ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕಲ್ಲಳ್ಳಿ ವಲಯದಲ್ಲಿ ಈಚೆಗೆ ಹುಲಿಯೊಂದನ್ನು ಗುಂಡಿಟ್ಟು ಕೊಂದಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಅರಣ್ಯಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿ ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ.</p>.<p>‘ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದೀರಿ. ಇದಕ್ಕಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳಿಗೆ ಅಭಿನಂದನೆಗಳು’ ಎಂದಿದ್ದಾರೆ.</p>.<p>ಆರೋಪಿಗಳ ಪತ್ತೆಗಾಗಿ ಬಂಡೀಪುರ ರಾಷ್ಟ್ರೀಯ ಉದ್ಯಾನದಿಂದ ‘ರಾಣಾ’ ಎಂಬ ಶ್ವಾನವನ್ನು ಕರೆ ತರಲಾಗಿತ್ತು. ಅನುಮಾನ ಬಂದ ಪ್ರದೇಶಕ್ಕೆ ತೆರಳಿ ಪರಿಶೀಲಿಸಿದಾಗ ಈ ಶ್ವಾನವು ಮೊದಲಿಗೆ ಸಂತೋಷ್ ಎಂಬಾತನ ಮನೆಗೆ ಹೋಗಿದೆ. ಅಲ್ಲಿ ಒಂದೂವರೆ ಕೆ.ಜಿಯಷ್ಟು ಜಿಂಕೆ ಮಾಂಸ ಪತ್ತೆಯಾಗಿದೆ. ಸಂತೋಷ್ನನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಬೇಟೆಯಾಡಿರುವುದು ಗೊತ್ತಾಗಿದೆ.</p>.<p>ಆರೋಪಿಗಳಿಂದ ಹುಲಿಯ 13 ಉಗುರು ಹಾಗೂ 2 ಕೋರೆ ಹಲ್ಲು ಸೇರಿದಂತೆ 2 ಬೈಕ್ ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>