<p><strong>ಮೈಸೂರು</strong>: ‘ಬೆಟ್ಕೆರೂರ್ ದಂಪತಿ ಉದಾರ ಮನೋಭಾವವುಳ್ಳ ದಾನಿಗಳು. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿಯೇ ಈ ದತ್ತಿನಿಧಿ ಸ್ಥಾಪಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ಶ್ಲಾಘನೀಯವಾದದ್ದು’ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಹೇಳಿದರು.</p>.<p>ಡಾ. ವಸಂತ್ ಬೆಟ್ಕೆರೂರ್ ಮತ್ತು ಡಾ. ಮಂಗಳ ಬೆಟ್ಕೆರೂರ್ ಅವರು ಸ್ಥಾಪಿಸಿರುವ ದತ್ತಿನಿಧಿಯ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಚೆನ್ನಾಗಿ ಓದಿ, ಉತ್ತಮ ಜೀವನ ನಡೆಸಬೇಕು. ಆಗ ಅದೇ ದತ್ತಿದಾನಿಗಳಿಗೆ ಅವರು ಸಲ್ಲಿಸಬಹುದಾದ ಕೃತಜ್ಞತೆ’ ಎಂದರು.</p>.<p>ದತ್ತಿದಾನಿ ಡಾ. ಮಂಗಳ ಬೆಟ್ಕೆರೂರ್ ಮಾತನಾಡಿ, ‘ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವಾಗಲೇ ವೃತ್ತಿ ಮಾರ್ಗದರ್ಶನ ಸಿಗಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಭವಿಷ್ಯದ ನಿರ್ಧಾರಗಳಿಗೆ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.</p>.<p>ಡಾ. ಬಿ. ಸುರೇಶ್, ಡಾ. ಜಯದೇವ ಬೆಟ್ಕೆರೂರ್ ಮಾತನಾಡಿದರು. ದತ್ತಿ ದಾನಿಗಳಾದ ಡಾ. ವಸಂತ್ ಬೆಟ್ಕೆರೂರ್, ಮಕ್ಕಳಾದ ಅನುಪಮಾ, ನಿವೇದಿತಾ ಮತ್ತು ಕವಿತಾ ಅವರು ಆನ್ಲೈನ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>ಸುನೀತಾ ಬೆಟ್ಕೆರೂರ್, ಉಮಾ ಬೆಟ್ಕೆರೂರ್ ಕಾರ್ಯಕ್ರಮದಲ್ಲಿ ಇದ್ದರು. ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್. ಮಹೇಶ್, ಪ್ರಾಂಶುಪಾಲ ಡಾ.ಎಂ. ಪ್ರಭು, ಮಾನಸ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಬೆಟ್ಕೆರೂರ್ ದಂಪತಿ ಉದಾರ ಮನೋಭಾವವುಳ್ಳ ದಾನಿಗಳು. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿಯೇ ಈ ದತ್ತಿನಿಧಿ ಸ್ಥಾಪಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ಶ್ಲಾಘನೀಯವಾದದ್ದು’ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಹೇಳಿದರು.</p>.<p>ಡಾ. ವಸಂತ್ ಬೆಟ್ಕೆರೂರ್ ಮತ್ತು ಡಾ. ಮಂಗಳ ಬೆಟ್ಕೆರೂರ್ ಅವರು ಸ್ಥಾಪಿಸಿರುವ ದತ್ತಿನಿಧಿಯ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಚೆನ್ನಾಗಿ ಓದಿ, ಉತ್ತಮ ಜೀವನ ನಡೆಸಬೇಕು. ಆಗ ಅದೇ ದತ್ತಿದಾನಿಗಳಿಗೆ ಅವರು ಸಲ್ಲಿಸಬಹುದಾದ ಕೃತಜ್ಞತೆ’ ಎಂದರು.</p>.<p>ದತ್ತಿದಾನಿ ಡಾ. ಮಂಗಳ ಬೆಟ್ಕೆರೂರ್ ಮಾತನಾಡಿ, ‘ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವಾಗಲೇ ವೃತ್ತಿ ಮಾರ್ಗದರ್ಶನ ಸಿಗಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಭವಿಷ್ಯದ ನಿರ್ಧಾರಗಳಿಗೆ ಅನುಕೂಲವಾಗುತ್ತದೆ’ ಎಂದು ತಿಳಿಸಿದರು.</p>.<p>ಡಾ. ಬಿ. ಸುರೇಶ್, ಡಾ. ಜಯದೇವ ಬೆಟ್ಕೆರೂರ್ ಮಾತನಾಡಿದರು. ದತ್ತಿ ದಾನಿಗಳಾದ ಡಾ. ವಸಂತ್ ಬೆಟ್ಕೆರೂರ್, ಮಕ್ಕಳಾದ ಅನುಪಮಾ, ನಿವೇದಿತಾ ಮತ್ತು ಕವಿತಾ ಅವರು ಆನ್ಲೈನ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<p>ಸುನೀತಾ ಬೆಟ್ಕೆರೂರ್, ಉಮಾ ಬೆಟ್ಕೆರೂರ್ ಕಾರ್ಯಕ್ರಮದಲ್ಲಿ ಇದ್ದರು. ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್. ಮಹೇಶ್, ಪ್ರಾಂಶುಪಾಲ ಡಾ.ಎಂ. ಪ್ರಭು, ಮಾನಸ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>