‘ಏ.1 ರಂದು ತಾಲ್ಲೂಕಿನ ಕರ್ಣಕುಪ್ಪೆ ಗ್ರಾಮದಲ್ಲಿ ಅನುಮತಿ ಪಡೆಯದೆ ದೇವಸ್ಥಾನದ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದರು. ಆಗ ಬೆಂಬಲಿಗರು ಪಕ್ಷದ ಪರ ಘೋಷಣೆ ಕೂಗಿದ್ದರು. ಆ ಸಂಬಂಧ ನೀಡಿದ್ದ ನೋಟಿಸ್ಗೆ ಲಲಿತಾ ಅವರು ಏ.5 ರಂದು ನೀಡಿದ್ದ ಉತ್ತರ ಸಮಂಜಸವಾಗಿರಲಿಲ್ಲ. ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆ ಕಾಯ್ದೆ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿರುವುದರಿಂದ ಅವರು ಮತ್ತು ಬೆಂಬಲಿಗರ ವಿರುದ್ಧ ಏ.6 ರಂದು ಪ್ರಕರಣ ದಾಖಲಿಸಲಾಗಿದೆ’ ಎಂದು ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಬಿ.ಕೆ.ಮನು ‘ಪ್ರಜಾವಾಣಿ’ಗೆ ತಿಳಿಸಿದರು.