<p><strong>ಮೈಸೂರು</strong>: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ದ ನ್ಯಾಯಾಲಯದ ಆದೇಶದ ಮೂಲಕ ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>'2013ರಲ್ಲಿ ವಿಶ್ವನಾಥ್ ಸಂಸದರಾಗಿದ್ದಾಗ ಎಂಟಿಬಿ ನಾಗರಾಜ್ ಮೂಲಕ ವಿಶ್ವನಾಥ್ ಹಾಗೂ ಮಗ ಅಮಿತ್ ದೇವರಹಟ್ಟಿಗೆ ₹ 55 ಲಕ್ಷ ನೀಡಿದ್ದೆ. ಹಣ ಹಿಂದಿರುಗಿಸದೆ ವಿಶ್ವನಾಥ್ ಸತಾಯಿಸುತ್ತಿದ್ದರು. ಹೀಗಾಗಿ ಫೆಬ್ರವರಿ 21 ರಂದು ಮಧ್ಯಾಹ್ನ ಅವರು ಜಲದರ್ಶಿನಿ ಅಥಿತಿಗೃಹದಲ್ಲಿ ಇದ್ದಾಗ ಹಣ ಕೇಳಲು ಹೋಗಿದ್ದೆ. ಅಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ' ಎಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ದೂರಿನಲ್ಲಿ ತಿಳಿಸಿದ್ದಾರೆ.</p><p>ದೇವರಾಜ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎನ್ ಸಿಆರ್ ದಾಖಲಿಸಲಾಗಿತ್ತು. ಬಳಿಕ ಮಹದೇವ್ ನ್ಯಾಯಾಲಯದ ಮೊರೆಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ತಂದಿದ್ದು, ಎಫ್ ಐಆರ್ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ದ ನ್ಯಾಯಾಲಯದ ಆದೇಶದ ಮೂಲಕ ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p><p>'2013ರಲ್ಲಿ ವಿಶ್ವನಾಥ್ ಸಂಸದರಾಗಿದ್ದಾಗ ಎಂಟಿಬಿ ನಾಗರಾಜ್ ಮೂಲಕ ವಿಶ್ವನಾಥ್ ಹಾಗೂ ಮಗ ಅಮಿತ್ ದೇವರಹಟ್ಟಿಗೆ ₹ 55 ಲಕ್ಷ ನೀಡಿದ್ದೆ. ಹಣ ಹಿಂದಿರುಗಿಸದೆ ವಿಶ್ವನಾಥ್ ಸತಾಯಿಸುತ್ತಿದ್ದರು. ಹೀಗಾಗಿ ಫೆಬ್ರವರಿ 21 ರಂದು ಮಧ್ಯಾಹ್ನ ಅವರು ಜಲದರ್ಶಿನಿ ಅಥಿತಿಗೃಹದಲ್ಲಿ ಇದ್ದಾಗ ಹಣ ಕೇಳಲು ಹೋಗಿದ್ದೆ. ಅಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ' ಎಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವ್ ದೂರಿನಲ್ಲಿ ತಿಳಿಸಿದ್ದಾರೆ.</p><p>ದೇವರಾಜ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎನ್ ಸಿಆರ್ ದಾಖಲಿಸಲಾಗಿತ್ತು. ಬಳಿಕ ಮಹದೇವ್ ನ್ಯಾಯಾಲಯದ ಮೊರೆಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ತಂದಿದ್ದು, ಎಫ್ ಐಆರ್ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>