‘ರವಿಕೃಷ್ಣಾರೆಡ್ಡಿ, ಮರಡಿಹುಂಡಿ ಗ್ರಾಮದ ನಟರಾಜು ಸೇರಿದಂತೆ 15ರಿಂದ 20 ಜನರ ಗುಂಪು ಆ.31ರಂದು ಸಂಜೆ ತಾಲ್ಲೂಕು ಕಚೇರಿಗೆ ಲಗ್ಗೆ ಹಾಕಿ, ಕರ್ತವ್ಯದಲ್ಲಿದ್ದ ದ್ವಿತೀಯ ದರ್ಜೆ ಸಹಾಯಕ ಶ್ರೀನಿವಾಸ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮರಡಿಹುಂಡಿ ನಟರಾಜು ಎಂಬುವರಿಗೆ ಸಾಗುವಳಿ ಚೀಟಿ ನೀಡುವಂತೆ ಒತ್ತಾಯಿಸಿದ್ದಾರೆ. ಆ ಅರ್ಜಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ವಜಾಗೊಂಡಿರುವ ಬಗ್ಗೆ ತಿಳಿಸಿದ್ದರೂ ಕೇಳಿಲ್ಲ. ನನ್ನ ಕಚೇರಿಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಅನುಮತಿಯಿಲ್ಲದೇ ವಿಡಿಯೊ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ದೂರಿನಲ್ಲಿ ತಿಳಿಸಿದ್ದಾರೆ.