ಬುಧವಾರ ರಾತ್ರಿ ಸಂಭವಿಸಿದ ಅಪಘಾತದ ವಿಚಾರವಾಗಿ, ಎರಡು ಗುಂಪುಗಳ ಮಧ್ಯೆ ಗುರುವಾರ ಘರ್ಷಣೆ ಉಂಟಾಗಿತ್ತು. ಉದ್ರಿಕ್ತರಿಂದ ಕಲ್ಲು ತೂರಾಟವೂ ನಡೆದಿತ್ತು. ಈ ವೇಳೆ, ಅಪಘಾತಕ್ಕೆ ಕಾರಣ ಎನ್ನಲಾದ ದಲಿತ ಯುವಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಒಕ್ಕಲಿಗ ಸಮುದಾಯ ಪ್ರತಿಭಟನೆ ನಡೆಸಿತ್ತು. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿತ್ತು.