<p>ಮೈಸೂರು: ‘ಕನ್ನಡ ನಾಡಿನಲ್ಲಿ ಜಾತಿ ಮೇಲೆ ತೋರುವ ಪ್ರೀತಿ, ಕಾಳಜಿಯನ್ನು ಭಾಷೆ ಮೇಲೆ ತೋರುತ್ತಿಲ್ಲ. ಇದರಿಂದಲೇ ಕನ್ನಡಕ್ಕೆ ಈ ಸ್ಥಿತಿ ಬಂದೊದಗಿದೆ. ಕನ್ನಡಕ್ಕಾಗಿ ಚಳವಳಿ, ಹೋರಾಟ ಮಾಡುತ್ತಲೇ ಇರ ಬೇಕಾದ ಅನಿವಾರ್ಯ ಇದೆ’ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಆರ್.ರಘು (ಕೌಟಿಲ್ಯ) ಹೇಳಿದರು.</p>.<p>ಕನ್ನಡ ಚಳವಳಿ ಕೇಂದ್ರ ಸಮಿತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ವತಿಯಿಂದ ಸೋಮವಾರ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ಹೆಚ್ಚಿನ ಉತ್ತರ ಭಾರತೀಯರಿಗೆ ಕನ್ನಡ ಮತ್ತು ಕರ್ನಾಟಕ ಗೊತ್ತಿಲ್ಲ. ಆದರೆ, ಬೆಂಗಳೂರು ಗೊತ್ತಿದೆ. ಇತರೆ ಭಾಷಿಗರಂತೆ ಇರುವ ಆಕ್ರಮಣಕಾರಿ ಮನೋಭಾವ ಕನ್ನಡಿಗರಿಗಿಲ್ಲ ಎಂದು ಅವರು ಹೇಳಿದರು.</p>.<p>ಅಂದು ಕನ್ನಡಪರ ಹೋರಾಟಗಾರರು ಕನ್ನಡದ ಅಸ್ತಿತ್ವಕ್ಕಾಗಿ ಹೋರಾಟ ನಡೆಸಿದ್ದರು. ಇಂದು ಕನ್ನಡ ಚಳವಳಿ ಮೂಲಕ ತಮ್ಮ ಅಸ್ತಿತ್ವ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ನುಡಿದರು.</p>.<p>ಪ್ರಾಚ್ಯವಿದ್ಯಾ ಸಂಶೋಧನಾ ಸಂಸ್ಥೆ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ‘ಅನ್ಯಭಾಷಿಕರು, ಹೊರಗಿನ ಕೈಗಾರಿಕೋದ್ಯಮಿಗಳು ರಾಜ್ಯ ಆಳುತ್ತಿದ್ದಾರೆ. ಕನ್ನಡದ ಮೇಲೆ ಪ್ರಹಾರ ನಡೆಸುತ್ತಿದ್ದಾರೆ. ಕನ್ನಡಗರಿಗೆ ಉದ್ಯೋಗ ಕೊಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p class="Subhead">ಸನ್ಮಾನ: ಆರ್.ರಘು (ಕೌಟಿಲ್ಯ), ಕಾಡಾ ಅಧ್ಯಕ್ಷ ಶಿವಲಿಂಗಯ್ಯ, ಭಾರತೀಯ ಇತಿಹಾಸ ಸಂಕಲನ ಸಮಿತಿಯ ಉಪಾಧ್ಯಕ್ಷ ಎಸ್.ಬಿ.ಎಂ.ಪ್ರಸನ್ನ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ (ಕರ್ನಾಟಕ ಘಟಕ) ಅಧ್ಯಕ್ಷ ಡಾ.ಸಿ.ವೆಂಕಟೇಶ್ ಅವರನ್ನು ಸನ್ಮಾನಿಲಾಯಿತು.</p>.<p>ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ, ಕಸಾಪ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕಸಾಪ ನಗರ ಘಟಕ ಅಧ್ಯಕ್ಷ ಕೆ.ಎಸ್.ಶಿವರಾಮು, ಕೋದಂಡರಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಕನ್ನಡ ನಾಡಿನಲ್ಲಿ ಜಾತಿ ಮೇಲೆ ತೋರುವ ಪ್ರೀತಿ, ಕಾಳಜಿಯನ್ನು ಭಾಷೆ ಮೇಲೆ ತೋರುತ್ತಿಲ್ಲ. ಇದರಿಂದಲೇ ಕನ್ನಡಕ್ಕೆ ಈ ಸ್ಥಿತಿ ಬಂದೊದಗಿದೆ. ಕನ್ನಡಕ್ಕಾಗಿ ಚಳವಳಿ, ಹೋರಾಟ ಮಾಡುತ್ತಲೇ ಇರ ಬೇಕಾದ ಅನಿವಾರ್ಯ ಇದೆ’ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಆರ್.ರಘು (ಕೌಟಿಲ್ಯ) ಹೇಳಿದರು.</p>.<p>ಕನ್ನಡ ಚಳವಳಿ ಕೇಂದ್ರ ಸಮಿತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ವತಿಯಿಂದ ಸೋಮವಾರ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.</p>.<p>ಹೆಚ್ಚಿನ ಉತ್ತರ ಭಾರತೀಯರಿಗೆ ಕನ್ನಡ ಮತ್ತು ಕರ್ನಾಟಕ ಗೊತ್ತಿಲ್ಲ. ಆದರೆ, ಬೆಂಗಳೂರು ಗೊತ್ತಿದೆ. ಇತರೆ ಭಾಷಿಗರಂತೆ ಇರುವ ಆಕ್ರಮಣಕಾರಿ ಮನೋಭಾವ ಕನ್ನಡಿಗರಿಗಿಲ್ಲ ಎಂದು ಅವರು ಹೇಳಿದರು.</p>.<p>ಅಂದು ಕನ್ನಡಪರ ಹೋರಾಟಗಾರರು ಕನ್ನಡದ ಅಸ್ತಿತ್ವಕ್ಕಾಗಿ ಹೋರಾಟ ನಡೆಸಿದ್ದರು. ಇಂದು ಕನ್ನಡ ಚಳವಳಿ ಮೂಲಕ ತಮ್ಮ ಅಸ್ತಿತ್ವ ಕಂಡುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ನುಡಿದರು.</p>.<p>ಪ್ರಾಚ್ಯವಿದ್ಯಾ ಸಂಶೋಧನಾ ಸಂಸ್ಥೆ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ‘ಅನ್ಯಭಾಷಿಕರು, ಹೊರಗಿನ ಕೈಗಾರಿಕೋದ್ಯಮಿಗಳು ರಾಜ್ಯ ಆಳುತ್ತಿದ್ದಾರೆ. ಕನ್ನಡದ ಮೇಲೆ ಪ್ರಹಾರ ನಡೆಸುತ್ತಿದ್ದಾರೆ. ಕನ್ನಡಗರಿಗೆ ಉದ್ಯೋಗ ಕೊಡುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p class="Subhead">ಸನ್ಮಾನ: ಆರ್.ರಘು (ಕೌಟಿಲ್ಯ), ಕಾಡಾ ಅಧ್ಯಕ್ಷ ಶಿವಲಿಂಗಯ್ಯ, ಭಾರತೀಯ ಇತಿಹಾಸ ಸಂಕಲನ ಸಮಿತಿಯ ಉಪಾಧ್ಯಕ್ಷ ಎಸ್.ಬಿ.ಎಂ.ಪ್ರಸನ್ನ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ (ಕರ್ನಾಟಕ ಘಟಕ) ಅಧ್ಯಕ್ಷ ಡಾ.ಸಿ.ವೆಂಕಟೇಶ್ ಅವರನ್ನು ಸನ್ಮಾನಿಲಾಯಿತು.</p>.<p>ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ, ಕಸಾಪ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕಸಾಪ ನಗರ ಘಟಕ ಅಧ್ಯಕ್ಷ ಕೆ.ಎಸ್.ಶಿವರಾಮು, ಕೋದಂಡರಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>