<p><strong>ಮೈಸೂರು:</strong> ಮೈಸೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಿಗ್ಗೆಯವರೆಗೂ ಗುಡುಗು ಸಹಿತ ಜೋರು ಮಳೆ ಬಿದ್ದಿತು. </p><p>ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಬಳಿ ಚಿಕ್ಕದೇವರಾಯಸಾಗರ (ಸಿಡಿಎಸ್) ನಾಲೆಯ ಏರಿ ಒಡೆದಿದೆ. </p><p>ನಾಲೆಯ 21ನೇ ಮೈಲಿ ಬಳಿ 15 ಅಡಿಗಳಷ್ಟು ಒಡೆದಿದ್ದು, ಕೃಷಿ ಭೂಮಿಗೆ ನೀರು ನುಗ್ಗಿದೆ. ನಾಲೆ ಪಕ್ಕದ ಕೃಷಿ ಭೂಮಿ ಬೆಳೆ ಸಹಿತ ಕೊಚ್ಚಿಹೋಗಿದೆ. ಅಡಿಕೆ, ತೆಂಗು, ಕಬ್ಬು, ಭತ್ತದ ಬೆಳೆ ಜಲಾವೃತವಾಗಿದ್ದು,</p><p>ಕೆಲವೆಡೆ ಬೆಳೆಗಳ ಮೇಲೆ ಮಣ್ಣು ಸಂಗ್ರಹವಾಗಿದೆ. ಇದರಿಂದ ಕೃಷಿಕರು</p><p>ಕಂಗಾಲಾಗಿದ್ದಾರೆ.</p><p>ಶ್ರೀರಂಗಪಟ್ಟಣ ತಾಲ್ಲೂಕಿನ ಚಿಕ್ಕಪಾಳ್ಯ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿದೆ. ಗ್ರಾಮದ ಪುನೀತ್ ಕುಮಾರ ಅವರ ಮನೆಯ ಗೋಡೆ 25 ಅಡಿಗಳಷ್ಟು ಕುಸಿದು ಬಿದ್ದಿದೆ. ಮಲಗಿದ್ದ ಪುನೀತ್ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.</p><p>ಅನುಕೂಲ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಉತ್ತಮ ಮಳೆ ಆಗಿದ್ದು, ರಾಗಿ, ತೊಗರಿ, ಅವರೆ, ಹುರುಳಿ ಮೊದಲಾದ ಬೆಳೆಗಳಿಗೆ ಅನುಕೂಲವಾಗಿದೆ.</p><p>ಹುಣಸೂರು ತಾಲ್ಲೂಕಿನಲ್ಲಿ ಹೊಡಿಜೆ ಕಟ್ಟೆ, ಮೋದೂರು ಕೆರೆ, ನಾಗನಹಳ್ಳಿ ಕೆರೆ ಮತ್ತು ಹಿರಿಕದಯಾತನಗಳ್ಳಿ ಭಾಗದಲ್ಲಿ 50 ಎಕರೆಗೂ ಜಾಸ್ತಿ ಭತ್ತದ ಬೆಳೆ ಕೊಚ್ಚಿ ಹೋಗಿದೆ. </p><p>ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನಲ್ಲಿ ಗುರುವಾರ ರಾತ್ರಿ ಸುರಿದ ಜೋರು ಮಳೆಯು, ಒಣಗುತ್ತಿದ್ದ ಬೆಳೆಗಳಿಗೆ ಜೀವಸೆಲೆ ಒದಗಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಿಗ್ಗೆಯವರೆಗೂ ಗುಡುಗು ಸಹಿತ ಜೋರು ಮಳೆ ಬಿದ್ದಿತು. </p><p>ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದರಸಗುಪ್ಪೆ ಬಳಿ ಚಿಕ್ಕದೇವರಾಯಸಾಗರ (ಸಿಡಿಎಸ್) ನಾಲೆಯ ಏರಿ ಒಡೆದಿದೆ. </p><p>ನಾಲೆಯ 21ನೇ ಮೈಲಿ ಬಳಿ 15 ಅಡಿಗಳಷ್ಟು ಒಡೆದಿದ್ದು, ಕೃಷಿ ಭೂಮಿಗೆ ನೀರು ನುಗ್ಗಿದೆ. ನಾಲೆ ಪಕ್ಕದ ಕೃಷಿ ಭೂಮಿ ಬೆಳೆ ಸಹಿತ ಕೊಚ್ಚಿಹೋಗಿದೆ. ಅಡಿಕೆ, ತೆಂಗು, ಕಬ್ಬು, ಭತ್ತದ ಬೆಳೆ ಜಲಾವೃತವಾಗಿದ್ದು,</p><p>ಕೆಲವೆಡೆ ಬೆಳೆಗಳ ಮೇಲೆ ಮಣ್ಣು ಸಂಗ್ರಹವಾಗಿದೆ. ಇದರಿಂದ ಕೃಷಿಕರು</p><p>ಕಂಗಾಲಾಗಿದ್ದಾರೆ.</p><p>ಶ್ರೀರಂಗಪಟ್ಟಣ ತಾಲ್ಲೂಕಿನ ಚಿಕ್ಕಪಾಳ್ಯ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿದೆ. ಗ್ರಾಮದ ಪುನೀತ್ ಕುಮಾರ ಅವರ ಮನೆಯ ಗೋಡೆ 25 ಅಡಿಗಳಷ್ಟು ಕುಸಿದು ಬಿದ್ದಿದೆ. ಮಲಗಿದ್ದ ಪುನೀತ್ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.</p><p>ಅನುಕೂಲ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಉತ್ತಮ ಮಳೆ ಆಗಿದ್ದು, ರಾಗಿ, ತೊಗರಿ, ಅವರೆ, ಹುರುಳಿ ಮೊದಲಾದ ಬೆಳೆಗಳಿಗೆ ಅನುಕೂಲವಾಗಿದೆ.</p><p>ಹುಣಸೂರು ತಾಲ್ಲೂಕಿನಲ್ಲಿ ಹೊಡಿಜೆ ಕಟ್ಟೆ, ಮೋದೂರು ಕೆರೆ, ನಾಗನಹಳ್ಳಿ ಕೆರೆ ಮತ್ತು ಹಿರಿಕದಯಾತನಗಳ್ಳಿ ಭಾಗದಲ್ಲಿ 50 ಎಕರೆಗೂ ಜಾಸ್ತಿ ಭತ್ತದ ಬೆಳೆ ಕೊಚ್ಚಿ ಹೋಗಿದೆ. </p><p>ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನಲ್ಲಿ ಗುರುವಾರ ರಾತ್ರಿ ಸುರಿದ ಜೋರು ಮಳೆಯು, ಒಣಗುತ್ತಿದ್ದ ಬೆಳೆಗಳಿಗೆ ಜೀವಸೆಲೆ ಒದಗಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>