<p><strong>ಮೈಸೂರು</strong>: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಮಾಡಬೇಕು’ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಮ್ಮ ಅಧ್ಯಕ್ಷತೆಯಲ್ಲಿ ಮೊದಲಿಗೆ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ’ (ದಿಶಾ) ಸಭೆಯಲ್ಲಿ ಅವರು ಮಾತನಾಡಿದರು.</p><p>‘ಕೇಂದ್ರದಿಂದ ದೇಶದ ಪ್ರಗತಿಗೆ ಪೂರಕವಾದ ಹಲವು ಯೋಜನೆಗಳನ್ನು ನೀಡಿದ್ದೇವೆ. ವೈಯಕ್ತಿಕವಾಗಿ, ಬಡ ಕುಟುಂಬಗಳು ಹಾಗೂ ಮಹಿಳೆಯರ ಆರ್ಥಿಕ ಶಕ್ತಿ ವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯವೂ ಮಾಡಿದೆ. ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಗುರಿಯನ್ನಷ್ಟೆ ನೋಡದೇ, ಅರ್ಜಿ ಹಾಕಿದವರು ಅರ್ಹರಿದ್ದರೆ ಅಂಥವರನ್ನೂ ಪರಿಗಣಿಸಬೇಕು’ ಎಂದು ಹೇಳಿದರು.</p><p>‘ರೈತರು ಕ್ಲಸ್ಟರ್ ಗ್ರೂಪ್ಗಳನ್ನು ಮಾಡಿಕೊಂಡು ಅನುದಾನ ಪಡೆಯುವಂತೆ ನೋಡಿಕೊಳ್ಳಬೇಕು. ಮುದ್ರಾ, ಪಿಎಂ– ವಿಶ್ವಕರ್ಮ ಮೊದಲಾದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಬಡವರು, ಹೆಣ್ಣು ಮಕ್ಕಳು ಹಾಗೂ ಯುವಕರು ಆರ್ಥಿಕವಾಗಿ ಸದೃಢವಾಗಿಸಲು ಬಹಳಷ್ಟು ಅವಕಾಶವಿದೆ’ ಎಂದರು.</p><p>‘ಆದಿವಾಸಿಗಳಿಗೂ ಹಲವು ಕಾರ್ಯಕ್ರಮ ಇವೆ. ಅವುಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ಕೊಡಬೇಕು. ನಿತ್ಯವೂ ಕೆಲವರಿಗೆ ಒಳ್ಳೆಯದು ಮಾಡಬೇಕು ಎಂಬ ಮನೋಭಾವ ಅಧಿಕಾರಿಗಳಿಗಿರಬೇಕು. ಅದು ಮನಸ್ಸಿಗೆ ನೆಮ್ಮದಿ ನೀಡುತ್ತದೆ’ ಎಂದು ತಿಳಿಸಿದರು.</p><p>‘ಯುವಕರು ದಾರಿ ತಪ್ಪುತ್ತಿದ್ದಾರೆ. ಎಲ್ಲರಿಗೂ ಸರ್ಕಾರಿ ಉದ್ಯೋಗ ಕೊಡುವುದು ಕಷ್ಟ. ಕೆಲಸ ಕೊಡುವುದೇ ಈಗಿರುವ ದೊಡ್ಡ ಸವಾಲು. ಆದ್ದರಿಂದ, ಸ್ವಂತ ಉದ್ಯೋಗ ಕಂಡುಕೊಳ್ಳಲು ಯುವಜನರಿಗೆ ತರಬೇತಿ ಕೊಡಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ಸಾಹದಿಂದ ಕೆಲಸ ಮಾಡಬೇಕು. ಆರ್ಥಿಕ ನೆರವು ಬಳಕೆ ಆಗುವಂತೆ ಮಾಡಬೇಕು’ ಎಂದರು.</p><p>ಫಲಾನುಭವಿಗಳಿಗೆ ನೆರವಾಗಬೇಕು:</p><p>‘ಪಿಎಂ–ವಿಶ್ವಕರ್ಮ ಯೋಜನೆಯಲ್ಲಿ ಕೆಲವು ಪ್ರಕರಣಗಳಲ್ಲಿ ಲಾಗಿನ್ ಸಮಸ್ಯೆ ಆಗುತ್ತಿದೆ. ಅದನ್ನು ಕೇಂದ್ರದ ಗಮನಕ್ಕೆ ತಂದು, ಪರಿಹರಿಸಲು ಕ್ರಮ ವಹಿಸಲಾಗುತ್ತಿದೆ’ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಲಿಂಗಯ್ಯ ತಿಳಿಸಿದರು.</p><p>ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ, ‘ಪಿಎಂ– ವಿಶ್ವಕರ್ಮ ಸೇರಿದಂತೆ ಹಲವು ಯೋಜನೆಗಳಡಿ ಎಲ್ಲ ರೀತಿಯಿಂದಲೂ ಅರ್ಹತೆ ಇದ್ದರೂ ಜನರಿಗೆ ಸಾಲ ಕೊಡಲು ಬ್ಯಾಂಕ್ಗಳು ತೊಂದರೆ ನೀಡುತ್ತಿವೆ. ಇದನ್ನು ಬಿಟ್ಟು ಫಲಾನುಭವಿಗಳಿಗೆ ನೆರವಾಗಬೇಕು’ ಎಂದರು.</p><p>‘ಪಿಎಂ–ವಿಶ್ವಕರ್ಮ ಬಹಳ ಮಹತ್ವಾಕಾಂಕ್ಷಿಯ ಕಾರ್ಯಕ್ರಮ. ಪ್ರಧಾನಿಯು ಬಹಳ ನಿರೀಕ್ಷೆಯೊಂದಿಗೆ ಮಾಡಿರುವ ದೂರದೃಷ್ಟಿಯ ಯೋಜನೆ ಇದು. ಇದರಲ್ಲಿ ಸಾಲ ಸಿಗದೇ, ಜನರಿಗೆ ಅನುಕೂಲ ಆಗದಿದ್ದರೆ ಏನು ಪ್ರಯೋಜನ?’ ಎಂದು ಕುಮಾರಸ್ವಾಮಿ ಕೇಳಿದರು.</p>.<p>ಡಿಸಿಗೆ ಸೂಚನೆ</p><p>‘ಬ್ಯಾಂಕ್ ಅಧಿಕಾರಿಗಳು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಸೂಚಿಸಿದರು.</p><p>‘ಅಭಿವೃದ್ಧಿ ವಿಷಯದಲ್ಲಿ ಕೇಂದ್ರ– ರಾಜ್ಯ ಒಟ್ಟಾಗಿ ಹೋಗಬೇಕು. ಪರಸ್ಪರ ಸಹಭಾಗಿತ್ವ, ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡಬೇಕು. ಈ ಹೊಂದಾಣಿಕೆಯಲ್ಲಿ ಅಧಿಕಾರಿಗಳ ಪಾತ್ರ ದೊಡ್ಡದು. ಇಂತಹ ಉತ್ತಮ ಹೊಂದಾಣಿಕೆ ಇದ್ದರೆ ಮೈಸೂರಿನ ವಿಮಾನನಿಲ್ದಾಣ ಮೇಲ್ದರ್ಜೆಗೇರಿಸುವುದು, ಹೆದ್ದಾರಿ, ರೈಲ್ವೆ ಯೋಜನೆಗಳ ಅನುಷ್ಠಾನ ಸುಲಭವಾಗುತ್ತದೆ’ ಎಂದು ಹೇಳಿದರು.</p><p>‘ಜಲಜೀವನ್ ಮಿಷನ್ ಅನುಷ್ಠಾನಗೊಂಡಿದೆ ಸರಿ. ಎಷ್ಟು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಆಗುತ್ತಿದೆ ಎನ್ನುವುದೇ ಪ್ರಶ್ನೆ. ಹಲವು ಕಡೆಗಳಲ್ಲಿ ಪೈಪ್ ಹಾಕಿದ್ದಾರೆ, ನಲ್ಲಿ ಹಾಕಿದ್ದಾರಾದರೂ ನೀರೇ ಹೋಗುತ್ತಿಲ್ಲ ಎಂಬ ದೂರುಗಳಿವೆ. ಎಲ್ಲಾ ಹಳ್ಳಿಗಳಲ್ಲಿ ನೀರು ಪ್ರತಿ ಮನೆಗಳ ನಲ್ಲಿಗಳ ಮೂಲಕ ದೊರೆಯುತ್ತಿದೆಯೇ?’ ಎಂದು ಸಚಿವರು ಕೇಳಿದರು.</p><p>ತಿರಸ್ಕೃತವಾಗದಿರಲಿ:</p><p>‘ಅಮೃತ್ ಯೋಜನೆಯಡಿ ಪೈಪ್ಲೈನ್ ಹಾಕಲು ನೆಲ ಅಗೆಯುತ್ತೀರಿ, ಅದನ್ನು ಸರಿಯಾಗಿ ಮುಚ್ಚುವುದಿಲ್ಲ ಎಂಬ ದೂರುಗಳಿವೆ’ ಎಂಬ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮಾತಿಗೆ ದನಿಗೂಡಿಸಿದ ಸಚಿವರು, ‘ಸರಿಯಾಗಿ ಗುಂಡಿ ಮುಚ್ಚಬೇಕು. ಹಳ್ಳಿಗಳಲ್ಲಿ ಮಕ್ಕಳು, ವೃದ್ಧರು ಸುರಕ್ಷಿತವಾಗಿ ಸಂಚರಿಸಲು ಅನುಕೂಲ ಮಾಡಿಕೊಡಬೇಕು’ ಎಂದರು.</p><p>‘ವಂಶಪಾರಂಪರ್ಯವಾಗಿ ಒಂದೇ ವೃತ್ತಿಯಲ್ಲಿದ್ದರೆ ಮಾತ್ರ ವಿಶ್ವಕರ್ಮ ಯೋಜನೆಯ ಸೌಲಭ್ಯ ಸಿಗುತ್ತದೆ. ಇಲ್ಲವಾದರೆ ಅರ್ಜಿ ತಿರಸ್ಕೃತ ಆಗುತ್ತದೆ. ಕೇವಲ ಟೈಲರಿಂಗ್ಗೆ ಎಂದು ಹೇಳಿಕೊಂಡವರಿಗೆ ಸಾಲ ಸಿಗುತ್ತಿಲ್ಲ, ನೈಜ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿದೆ’ ಎಂದು ಜಿಲ್ಲಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳು ಸಮಜಾಯಿಷಿ ನೀಡಿದರು. ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಅಧಿಕಾರಿಗಳು ನೈಜ ಫಲಾನುಭವಿಗಳ ಅರ್ಜಿಗಳು ತಿರಸ್ಕೃತ ಆಗದಂತೆ ನೋಡಿಕೊಳ್ಳಬೇಕು’ ಎಂದು ತಾಕೀತು ಮಾಡಿದರು.</p><p>‘ವಿಶ್ವಕರ್ಮ ಯೋಜನೆ ಸೌಲಭ್ಯ ಕೇಳಿಕೊಂಡು ನಮ್ಮ ಬಳಿಗೆ ಜನ ಬರುತ್ತಾರೆ. ಸಾಲ ಸಿಗುತ್ತಿಲ್ಲ ಎಂದು ಎಲ್ಲರೂ ದೂರುತ್ತಿದ್ದಾರೆ’ ಎಂದು ಶಾಸಕರಾದ ಜಿ.ಡಿ.ಹರೀಶ್ಗೌಡ ಹಾಗೂ ಟಿ.ಎಸ್. ಶ್ರೀವತ್ಸ ಹೇಳಿದರು.</p><p>‘ಪಿಎಂ ಮುದ್ರಾ ಯೋಜನೆಯಡಿ ಈವರೆಗೆ ₹6ಸಾವಿರ ಕೋಟಿ ಕೊಡಲಾಗಿದೆ, ಈ ವರ್ಷವೊಂದರಲ್ಲೇ ₹2ಸಾವಿರ ಕೋಟಿ ನೀಡಲಾಗಿದೆ ಎಂದು ಹೇಳುತ್ತೀರಿ. ಆದರೆ, ಈ ಯೋಜನೆಯಲ್ಲಿ ಸಾಲ ಸಿಗುತ್ತಿಲ್ಲ ಎಂದು ಜನರು ದೂರುತ್ತಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಸಾಲ ನೀಡಲಾಗಿದೆ ಎಂದು ಅಂಕಿ ಅಂಶ ಇದ್ದರೂ ಜನರು ಹೋದ ಕಡೆಯೆಲ್ಲಾ ದೂರು ಹೇಳುತ್ತಾರೇಕೆ? ಕೂಡಲೇ ಈ ಬಗ್ಗೆ ಪರಿಶೀಲನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿಗೆ ಸಚಿವರು ಸೂಚಿಸಿದರು.</p><p>ಹೊಸ ತಳಿ ಹತ್ತಿ ಪರಿಚಯಿಸಿ</p><p>‘ಹಿಂದೆ ಜಿಲ್ಲೆಯಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯಲಾಗುತ್ತಿತ್ತು. ಈಗ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬೆಳೆಯಲಾಗುತ್ತಿದೆ ಎಂಬ ಮಾಹಿತಿ ಇದೆ. ಹತ್ತಿಯಲ್ಲಿ ಹೆಚ್ಚು ಫಸಲು ಕೊಡುವ ಹೊಸ ತಳಿ ಬಂದಿದೆ. ರಾಯಚೂರು ಜಿಲ್ಲೆಯಲ್ಲಿ ಅದನ್ನು ಬೆಳೆಯಲಾಗುತ್ತಿದೆ. ಒಳ್ಳೆಯ ಇಳುವರಿ ಬರುತ್ತಿದೆ. ಇಲ್ಲಿ ಆ ಹತ್ತಿ ತಳಿಯನ್ನು ಪರಿಚಯಿಸಲು ರೈತರಿಗೆ ಮಾಹಿತಿ ಕೊಡಿ. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭವಾಗುತ್ತದೆ’ ಎಂದು ಸಚಿವರು ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಅವರಿಗೆ ನಿರ್ದೇಶನ ನೀಡಿದರು.</p><p>ಸಾಮಾಜಿಕ ಅರಣ್ಯೀಕರಣದ ಪ್ರಗತಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಸಚಿವರು, ‘ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಸಾಮಾಜಿಕ ಅರಣ್ಯೀಕರಣ ಪ್ರಮಾಣ ಕಡಿಮೆ ಎನ್ನುವ ವರದಿ ಇದೆ. ಮೈಸೂರು ಭಾಗದಲ್ಲಿ ಅರಣ್ಯ ಬೆಳೆಯುವ ಪ್ರಮಾಣ ಹೆಚ್ಚಾಗಬೇಕು. ಪ್ರತಿ ವರ್ಷ ಸಸಿ ನೆಟ್ಟರೂ ಏಕೆ ಹೀಗಾಗುತ್ತಿದೆ? ಗಿಡಗಳನ್ನು ಮುತುವರ್ಜಿಯಿಂದ ಪೋಚಿಸಬೇಕು’ ಎಂದು ಸೂಚಿಸಿದರು.</p><p>ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಮಾತನಾಡಿ, ‘ಮೇ, ಜುಲೈ, ಅಕ್ಟೋಬರ್, ಡಿಸೆಂಬರ್ನಲ್ಲಿ 682 ಎಕರೆ ಬೆಳೆ ಹಾನಿಯಾಗಿದ್ದು ಪರಿಹಾರ ಕೊಡಲಾಗಿದೆ. ಪಿಎಂ–ಕಿಸಾನ್ ನೆರವು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ನಿಂತಿದೆ. 2018ರಿಂದ ಈವರೆಗೆ ಒಟ್ಟು ₹ 699 ಕೋಟಿಯನ್ನು ಯೋಜನೆಯಡಿ ರೈತರಿಗೆ ನೀಡಲಾಗಿದೆ’ ಎಂದು ತಿಳಿಸಿದರು.</p><p>‘ಹುಣಸೂರು ತಾಲ್ಲೂಕಿನ ಹಲವೆಡೆ ಪಶುವೈದ್ಯರಾಗಲಿ, ಇತರ ಸಿಬ್ಬಂದಿಯಾಗಲಿ ಇಲ್ಲ. ಇದರಿಂದ ಹೈನುಗಾರರು ತೊಂದರೆ ಅನುಭವಿಸುತ್ತದ್ದಾರೆ. ಆಸ್ಪತ್ರೆ ಇದ್ದು ಸಿಬ್ಬಂದಿ ಇಲ್ಲದಿದ್ದರೆ ಏನು ಪ್ರಯೋಜನ? ವೈದ್ಯರು ಹಾಗೂ ಇತರ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲಾದರೂ ನೇಮಿಸಿಕೊಂಡು ನೆರವಾಗಬೇಕು’ ಎಂದು ಶಾಸಕ ಹರೀಶ್ ಗೌಡ ಸೂಚಿಸಿದರು.</p><p>ಮೈಸೂರು -ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಕೆ. ಹರೀಶ್ ಗೌಡ, ಜಿ.ಪಂ. ಸಿಇಒ ಕೆ.ಎಂ. ಗಾಯಿತ್ರಿ, ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸವನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಮಾಡಬೇಕು’ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ತಮ್ಮ ಅಧ್ಯಕ್ಷತೆಯಲ್ಲಿ ಮೊದಲಿಗೆ ನಡೆದ ‘ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ’ (ದಿಶಾ) ಸಭೆಯಲ್ಲಿ ಅವರು ಮಾತನಾಡಿದರು.</p><p>‘ಕೇಂದ್ರದಿಂದ ದೇಶದ ಪ್ರಗತಿಗೆ ಪೂರಕವಾದ ಹಲವು ಯೋಜನೆಗಳನ್ನು ನೀಡಿದ್ದೇವೆ. ವೈಯಕ್ತಿಕವಾಗಿ, ಬಡ ಕುಟುಂಬಗಳು ಹಾಗೂ ಮಹಿಳೆಯರ ಆರ್ಥಿಕ ಶಕ್ತಿ ವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯವೂ ಮಾಡಿದೆ. ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಗುರಿಯನ್ನಷ್ಟೆ ನೋಡದೇ, ಅರ್ಜಿ ಹಾಕಿದವರು ಅರ್ಹರಿದ್ದರೆ ಅಂಥವರನ್ನೂ ಪರಿಗಣಿಸಬೇಕು’ ಎಂದು ಹೇಳಿದರು.</p><p>‘ರೈತರು ಕ್ಲಸ್ಟರ್ ಗ್ರೂಪ್ಗಳನ್ನು ಮಾಡಿಕೊಂಡು ಅನುದಾನ ಪಡೆಯುವಂತೆ ನೋಡಿಕೊಳ್ಳಬೇಕು. ಮುದ್ರಾ, ಪಿಎಂ– ವಿಶ್ವಕರ್ಮ ಮೊದಲಾದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಬಡವರು, ಹೆಣ್ಣು ಮಕ್ಕಳು ಹಾಗೂ ಯುವಕರು ಆರ್ಥಿಕವಾಗಿ ಸದೃಢವಾಗಿಸಲು ಬಹಳಷ್ಟು ಅವಕಾಶವಿದೆ’ ಎಂದರು.</p><p>‘ಆದಿವಾಸಿಗಳಿಗೂ ಹಲವು ಕಾರ್ಯಕ್ರಮ ಇವೆ. ಅವುಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ಕೊಡಬೇಕು. ನಿತ್ಯವೂ ಕೆಲವರಿಗೆ ಒಳ್ಳೆಯದು ಮಾಡಬೇಕು ಎಂಬ ಮನೋಭಾವ ಅಧಿಕಾರಿಗಳಿಗಿರಬೇಕು. ಅದು ಮನಸ್ಸಿಗೆ ನೆಮ್ಮದಿ ನೀಡುತ್ತದೆ’ ಎಂದು ತಿಳಿಸಿದರು.</p><p>‘ಯುವಕರು ದಾರಿ ತಪ್ಪುತ್ತಿದ್ದಾರೆ. ಎಲ್ಲರಿಗೂ ಸರ್ಕಾರಿ ಉದ್ಯೋಗ ಕೊಡುವುದು ಕಷ್ಟ. ಕೆಲಸ ಕೊಡುವುದೇ ಈಗಿರುವ ದೊಡ್ಡ ಸವಾಲು. ಆದ್ದರಿಂದ, ಸ್ವಂತ ಉದ್ಯೋಗ ಕಂಡುಕೊಳ್ಳಲು ಯುವಜನರಿಗೆ ತರಬೇತಿ ಕೊಡಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಉತ್ಸಾಹದಿಂದ ಕೆಲಸ ಮಾಡಬೇಕು. ಆರ್ಥಿಕ ನೆರವು ಬಳಕೆ ಆಗುವಂತೆ ಮಾಡಬೇಕು’ ಎಂದರು.</p><p>ಫಲಾನುಭವಿಗಳಿಗೆ ನೆರವಾಗಬೇಕು:</p><p>‘ಪಿಎಂ–ವಿಶ್ವಕರ್ಮ ಯೋಜನೆಯಲ್ಲಿ ಕೆಲವು ಪ್ರಕರಣಗಳಲ್ಲಿ ಲಾಗಿನ್ ಸಮಸ್ಯೆ ಆಗುತ್ತಿದೆ. ಅದನ್ನು ಕೇಂದ್ರದ ಗಮನಕ್ಕೆ ತಂದು, ಪರಿಹರಿಸಲು ಕ್ರಮ ವಹಿಸಲಾಗುತ್ತಿದೆ’ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಲಿಂಗಯ್ಯ ತಿಳಿಸಿದರು.</p><p>ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ, ‘ಪಿಎಂ– ವಿಶ್ವಕರ್ಮ ಸೇರಿದಂತೆ ಹಲವು ಯೋಜನೆಗಳಡಿ ಎಲ್ಲ ರೀತಿಯಿಂದಲೂ ಅರ್ಹತೆ ಇದ್ದರೂ ಜನರಿಗೆ ಸಾಲ ಕೊಡಲು ಬ್ಯಾಂಕ್ಗಳು ತೊಂದರೆ ನೀಡುತ್ತಿವೆ. ಇದನ್ನು ಬಿಟ್ಟು ಫಲಾನುಭವಿಗಳಿಗೆ ನೆರವಾಗಬೇಕು’ ಎಂದರು.</p><p>‘ಪಿಎಂ–ವಿಶ್ವಕರ್ಮ ಬಹಳ ಮಹತ್ವಾಕಾಂಕ್ಷಿಯ ಕಾರ್ಯಕ್ರಮ. ಪ್ರಧಾನಿಯು ಬಹಳ ನಿರೀಕ್ಷೆಯೊಂದಿಗೆ ಮಾಡಿರುವ ದೂರದೃಷ್ಟಿಯ ಯೋಜನೆ ಇದು. ಇದರಲ್ಲಿ ಸಾಲ ಸಿಗದೇ, ಜನರಿಗೆ ಅನುಕೂಲ ಆಗದಿದ್ದರೆ ಏನು ಪ್ರಯೋಜನ?’ ಎಂದು ಕುಮಾರಸ್ವಾಮಿ ಕೇಳಿದರು.</p>.<p>ಡಿಸಿಗೆ ಸೂಚನೆ</p><p>‘ಬ್ಯಾಂಕ್ ಅಧಿಕಾರಿಗಳು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಸೂಚಿಸಿದರು.</p><p>‘ಅಭಿವೃದ್ಧಿ ವಿಷಯದಲ್ಲಿ ಕೇಂದ್ರ– ರಾಜ್ಯ ಒಟ್ಟಾಗಿ ಹೋಗಬೇಕು. ಪರಸ್ಪರ ಸಹಭಾಗಿತ್ವ, ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡಬೇಕು. ಈ ಹೊಂದಾಣಿಕೆಯಲ್ಲಿ ಅಧಿಕಾರಿಗಳ ಪಾತ್ರ ದೊಡ್ಡದು. ಇಂತಹ ಉತ್ತಮ ಹೊಂದಾಣಿಕೆ ಇದ್ದರೆ ಮೈಸೂರಿನ ವಿಮಾನನಿಲ್ದಾಣ ಮೇಲ್ದರ್ಜೆಗೇರಿಸುವುದು, ಹೆದ್ದಾರಿ, ರೈಲ್ವೆ ಯೋಜನೆಗಳ ಅನುಷ್ಠಾನ ಸುಲಭವಾಗುತ್ತದೆ’ ಎಂದು ಹೇಳಿದರು.</p><p>‘ಜಲಜೀವನ್ ಮಿಷನ್ ಅನುಷ್ಠಾನಗೊಂಡಿದೆ ಸರಿ. ಎಷ್ಟು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಆಗುತ್ತಿದೆ ಎನ್ನುವುದೇ ಪ್ರಶ್ನೆ. ಹಲವು ಕಡೆಗಳಲ್ಲಿ ಪೈಪ್ ಹಾಕಿದ್ದಾರೆ, ನಲ್ಲಿ ಹಾಕಿದ್ದಾರಾದರೂ ನೀರೇ ಹೋಗುತ್ತಿಲ್ಲ ಎಂಬ ದೂರುಗಳಿವೆ. ಎಲ್ಲಾ ಹಳ್ಳಿಗಳಲ್ಲಿ ನೀರು ಪ್ರತಿ ಮನೆಗಳ ನಲ್ಲಿಗಳ ಮೂಲಕ ದೊರೆಯುತ್ತಿದೆಯೇ?’ ಎಂದು ಸಚಿವರು ಕೇಳಿದರು.</p><p>ತಿರಸ್ಕೃತವಾಗದಿರಲಿ:</p><p>‘ಅಮೃತ್ ಯೋಜನೆಯಡಿ ಪೈಪ್ಲೈನ್ ಹಾಕಲು ನೆಲ ಅಗೆಯುತ್ತೀರಿ, ಅದನ್ನು ಸರಿಯಾಗಿ ಮುಚ್ಚುವುದಿಲ್ಲ ಎಂಬ ದೂರುಗಳಿವೆ’ ಎಂಬ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮಾತಿಗೆ ದನಿಗೂಡಿಸಿದ ಸಚಿವರು, ‘ಸರಿಯಾಗಿ ಗುಂಡಿ ಮುಚ್ಚಬೇಕು. ಹಳ್ಳಿಗಳಲ್ಲಿ ಮಕ್ಕಳು, ವೃದ್ಧರು ಸುರಕ್ಷಿತವಾಗಿ ಸಂಚರಿಸಲು ಅನುಕೂಲ ಮಾಡಿಕೊಡಬೇಕು’ ಎಂದರು.</p><p>‘ವಂಶಪಾರಂಪರ್ಯವಾಗಿ ಒಂದೇ ವೃತ್ತಿಯಲ್ಲಿದ್ದರೆ ಮಾತ್ರ ವಿಶ್ವಕರ್ಮ ಯೋಜನೆಯ ಸೌಲಭ್ಯ ಸಿಗುತ್ತದೆ. ಇಲ್ಲವಾದರೆ ಅರ್ಜಿ ತಿರಸ್ಕೃತ ಆಗುತ್ತದೆ. ಕೇವಲ ಟೈಲರಿಂಗ್ಗೆ ಎಂದು ಹೇಳಿಕೊಂಡವರಿಗೆ ಸಾಲ ಸಿಗುತ್ತಿಲ್ಲ, ನೈಜ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿದೆ’ ಎಂದು ಜಿಲ್ಲಾಧಿಕಾರಿ ಸೇರಿದಂತೆ ಇತರ ಅಧಿಕಾರಿಗಳು ಸಮಜಾಯಿಷಿ ನೀಡಿದರು. ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ಅಧಿಕಾರಿಗಳು ನೈಜ ಫಲಾನುಭವಿಗಳ ಅರ್ಜಿಗಳು ತಿರಸ್ಕೃತ ಆಗದಂತೆ ನೋಡಿಕೊಳ್ಳಬೇಕು’ ಎಂದು ತಾಕೀತು ಮಾಡಿದರು.</p><p>‘ವಿಶ್ವಕರ್ಮ ಯೋಜನೆ ಸೌಲಭ್ಯ ಕೇಳಿಕೊಂಡು ನಮ್ಮ ಬಳಿಗೆ ಜನ ಬರುತ್ತಾರೆ. ಸಾಲ ಸಿಗುತ್ತಿಲ್ಲ ಎಂದು ಎಲ್ಲರೂ ದೂರುತ್ತಿದ್ದಾರೆ’ ಎಂದು ಶಾಸಕರಾದ ಜಿ.ಡಿ.ಹರೀಶ್ಗೌಡ ಹಾಗೂ ಟಿ.ಎಸ್. ಶ್ರೀವತ್ಸ ಹೇಳಿದರು.</p><p>‘ಪಿಎಂ ಮುದ್ರಾ ಯೋಜನೆಯಡಿ ಈವರೆಗೆ ₹6ಸಾವಿರ ಕೋಟಿ ಕೊಡಲಾಗಿದೆ, ಈ ವರ್ಷವೊಂದರಲ್ಲೇ ₹2ಸಾವಿರ ಕೋಟಿ ನೀಡಲಾಗಿದೆ ಎಂದು ಹೇಳುತ್ತೀರಿ. ಆದರೆ, ಈ ಯೋಜನೆಯಲ್ಲಿ ಸಾಲ ಸಿಗುತ್ತಿಲ್ಲ ಎಂದು ಜನರು ದೂರುತ್ತಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಸಾಲ ನೀಡಲಾಗಿದೆ ಎಂದು ಅಂಕಿ ಅಂಶ ಇದ್ದರೂ ಜನರು ಹೋದ ಕಡೆಯೆಲ್ಲಾ ದೂರು ಹೇಳುತ್ತಾರೇಕೆ? ಕೂಡಲೇ ಈ ಬಗ್ಗೆ ಪರಿಶೀಲನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿಗೆ ಸಚಿವರು ಸೂಚಿಸಿದರು.</p><p>ಹೊಸ ತಳಿ ಹತ್ತಿ ಪರಿಚಯಿಸಿ</p><p>‘ಹಿಂದೆ ಜಿಲ್ಲೆಯಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯಲಾಗುತ್ತಿತ್ತು. ಈಗ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬೆಳೆಯಲಾಗುತ್ತಿದೆ ಎಂಬ ಮಾಹಿತಿ ಇದೆ. ಹತ್ತಿಯಲ್ಲಿ ಹೆಚ್ಚು ಫಸಲು ಕೊಡುವ ಹೊಸ ತಳಿ ಬಂದಿದೆ. ರಾಯಚೂರು ಜಿಲ್ಲೆಯಲ್ಲಿ ಅದನ್ನು ಬೆಳೆಯಲಾಗುತ್ತಿದೆ. ಒಳ್ಳೆಯ ಇಳುವರಿ ಬರುತ್ತಿದೆ. ಇಲ್ಲಿ ಆ ಹತ್ತಿ ತಳಿಯನ್ನು ಪರಿಚಯಿಸಲು ರೈತರಿಗೆ ಮಾಹಿತಿ ಕೊಡಿ. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭವಾಗುತ್ತದೆ’ ಎಂದು ಸಚಿವರು ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಅವರಿಗೆ ನಿರ್ದೇಶನ ನೀಡಿದರು.</p><p>ಸಾಮಾಜಿಕ ಅರಣ್ಯೀಕರಣದ ಪ್ರಗತಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಸಚಿವರು, ‘ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಸಾಮಾಜಿಕ ಅರಣ್ಯೀಕರಣ ಪ್ರಮಾಣ ಕಡಿಮೆ ಎನ್ನುವ ವರದಿ ಇದೆ. ಮೈಸೂರು ಭಾಗದಲ್ಲಿ ಅರಣ್ಯ ಬೆಳೆಯುವ ಪ್ರಮಾಣ ಹೆಚ್ಚಾಗಬೇಕು. ಪ್ರತಿ ವರ್ಷ ಸಸಿ ನೆಟ್ಟರೂ ಏಕೆ ಹೀಗಾಗುತ್ತಿದೆ? ಗಿಡಗಳನ್ನು ಮುತುವರ್ಜಿಯಿಂದ ಪೋಚಿಸಬೇಕು’ ಎಂದು ಸೂಚಿಸಿದರು.</p><p>ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಮಾತನಾಡಿ, ‘ಮೇ, ಜುಲೈ, ಅಕ್ಟೋಬರ್, ಡಿಸೆಂಬರ್ನಲ್ಲಿ 682 ಎಕರೆ ಬೆಳೆ ಹಾನಿಯಾಗಿದ್ದು ಪರಿಹಾರ ಕೊಡಲಾಗಿದೆ. ಪಿಎಂ–ಕಿಸಾನ್ ನೆರವು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ನಿಂತಿದೆ. 2018ರಿಂದ ಈವರೆಗೆ ಒಟ್ಟು ₹ 699 ಕೋಟಿಯನ್ನು ಯೋಜನೆಯಡಿ ರೈತರಿಗೆ ನೀಡಲಾಗಿದೆ’ ಎಂದು ತಿಳಿಸಿದರು.</p><p>‘ಹುಣಸೂರು ತಾಲ್ಲೂಕಿನ ಹಲವೆಡೆ ಪಶುವೈದ್ಯರಾಗಲಿ, ಇತರ ಸಿಬ್ಬಂದಿಯಾಗಲಿ ಇಲ್ಲ. ಇದರಿಂದ ಹೈನುಗಾರರು ತೊಂದರೆ ಅನುಭವಿಸುತ್ತದ್ದಾರೆ. ಆಸ್ಪತ್ರೆ ಇದ್ದು ಸಿಬ್ಬಂದಿ ಇಲ್ಲದಿದ್ದರೆ ಏನು ಪ್ರಯೋಜನ? ವೈದ್ಯರು ಹಾಗೂ ಇತರ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲಾದರೂ ನೇಮಿಸಿಕೊಂಡು ನೆರವಾಗಬೇಕು’ ಎಂದು ಶಾಸಕ ಹರೀಶ್ ಗೌಡ ಸೂಚಿಸಿದರು.</p><p>ಮೈಸೂರು -ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಕೆ. ಹರೀಶ್ ಗೌಡ, ಜಿ.ಪಂ. ಸಿಇಒ ಕೆ.ಎಂ. ಗಾಯಿತ್ರಿ, ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>