<p><strong>ಮೈಸೂರು:</strong> ‘ಸರ್ಕಾರಿ ಉದ್ಯೋಗ ಸಿಗುವುದು ಕಷ್ಟಕರವಾದ ಈ ಸಂದರ್ಭದಲ್ಲಿ ದೊರೆತಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಸ್ತು, ನಿಷ್ಠೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಬದುಕಿನಲ್ಲಿ ಪ್ರಗತಿ ಸಾಧಿಸಬಹುದು’ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು ಹೇಳಿದರು.</p><p>ತಾಲ್ಲೂಕಿನ ಕಡಕೊಳದ ಕೆಇಬಿಇಎ ತರಬೇತಿ ಕೇಂದ್ರದಲ್ಲಿ 2026ನೇ ಸಾಲಿನ ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಶುಕ್ರವಾರ ಆಯೋಜಿಸಿದ್ದ ಪರಿಚಯಾತ್ಮಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಕಿರಿಯ ಪವರ್ ಮ್ಯಾನ್ಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ತರಬೇತಿ ನೀಡಲಾಗುತ್ತಿದೆ. ರೋಸ್ಟರ್ ಆಧಾರದ ಮೇಲೆ ಉದ್ಯೋಗ ಲಭಿಸಿದೆ. ತಾಂತ್ರಿಕವಾಗಿ ಸುಸಜ್ಜಿತ ವ್ಯವಸ್ಥೆಯನ್ನು ನಿಗಮದಲ್ಲಿ ಮಾಡಲಾಗಿದೆ’ ಎಂದರು.</p><p>‘ಪವರ್ಮ್ಯಾನ್ಗಳು ಸಂಸ್ಥೆ–ಗ್ರಾಹಕರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದಾರೆ. ಅವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಅದನ್ನು ಸಮರ್ಥವಾಗಿ ನಿರ್ವಹಿಸಬೇಕು. ತರಬೇತಿ ಹಾಗೂ ಸೇವಾ ಅವಧಿಯಲ್ಲಿ ಶಿಸ್ತು ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p><p>‘ಕೆಲಸದ ವೇಳೆ ಸುರಕ್ಷತೆ ಅತ್ಯಂತ ಮುಖ್ಯವಾಗಿದ್ದು, ವಿದ್ಯುತ್ ಅವಘಡಗಳನ್ನು ತಪ್ಪಿಸಲು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಗ್ರಾಹಕರಿಗೆ ನಿರಂತರ ಮತ್ತು ಅಡಚಣೆ ರಹಿತ ವಿದ್ಯುತ್ ಪೂರೈಸುವುದು ನಮ್ಮ ಗುರಿ’ ಎಂದರು.</p><p>ನಿವೃತ್ತ ಎಂಜಿನಿಯರ್ಗಳಾದ ಯೋಗೇಗೌಡ, ಮೋಹನ್ ಶಂಕರ್, ಚನ್ನವೀರಯ್ಯ, ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ವೈ. ಹೇಮಾ, ಎಇಇಗಳಾದ ರಾಮಚಂದ್ರ, ಅನೀಶ್ ಪಾತಕ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸರ್ಕಾರಿ ಉದ್ಯೋಗ ಸಿಗುವುದು ಕಷ್ಟಕರವಾದ ಈ ಸಂದರ್ಭದಲ್ಲಿ ದೊರೆತಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಸ್ತು, ನಿಷ್ಠೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದರೆ ಬದುಕಿನಲ್ಲಿ ಪ್ರಗತಿ ಸಾಧಿಸಬಹುದು’ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು ಹೇಳಿದರು.</p><p>ತಾಲ್ಲೂಕಿನ ಕಡಕೊಳದ ಕೆಇಬಿಇಎ ತರಬೇತಿ ಕೇಂದ್ರದಲ್ಲಿ 2026ನೇ ಸಾಲಿನ ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ನೇಮಕವಾದ ಅಭ್ಯರ್ಥಿಗಳಿಗೆ ಶುಕ್ರವಾರ ಆಯೋಜಿಸಿದ್ದ ಪರಿಚಯಾತ್ಮಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p><p>‘ಕಿರಿಯ ಪವರ್ ಮ್ಯಾನ್ಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ತರಬೇತಿ ನೀಡಲಾಗುತ್ತಿದೆ. ರೋಸ್ಟರ್ ಆಧಾರದ ಮೇಲೆ ಉದ್ಯೋಗ ಲಭಿಸಿದೆ. ತಾಂತ್ರಿಕವಾಗಿ ಸುಸಜ್ಜಿತ ವ್ಯವಸ್ಥೆಯನ್ನು ನಿಗಮದಲ್ಲಿ ಮಾಡಲಾಗಿದೆ’ ಎಂದರು.</p><p>‘ಪವರ್ಮ್ಯಾನ್ಗಳು ಸಂಸ್ಥೆ–ಗ್ರಾಹಕರ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದಾರೆ. ಅವರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಅದನ್ನು ಸಮರ್ಥವಾಗಿ ನಿರ್ವಹಿಸಬೇಕು. ತರಬೇತಿ ಹಾಗೂ ಸೇವಾ ಅವಧಿಯಲ್ಲಿ ಶಿಸ್ತು ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p><p>‘ಕೆಲಸದ ವೇಳೆ ಸುರಕ್ಷತೆ ಅತ್ಯಂತ ಮುಖ್ಯವಾಗಿದ್ದು, ವಿದ್ಯುತ್ ಅವಘಡಗಳನ್ನು ತಪ್ಪಿಸಲು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಗ್ರಾಹಕರಿಗೆ ನಿರಂತರ ಮತ್ತು ಅಡಚಣೆ ರಹಿತ ವಿದ್ಯುತ್ ಪೂರೈಸುವುದು ನಮ್ಮ ಗುರಿ’ ಎಂದರು.</p><p>ನಿವೃತ್ತ ಎಂಜಿನಿಯರ್ಗಳಾದ ಯೋಗೇಗೌಡ, ಮೋಹನ್ ಶಂಕರ್, ಚನ್ನವೀರಯ್ಯ, ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ವೈ. ಹೇಮಾ, ಎಇಇಗಳಾದ ರಾಮಚಂದ್ರ, ಅನೀಶ್ ಪಾತಕ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>