<p><strong>ಮೈಸೂರು:</strong> ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಪ್ರಧಾನ ಕಚೇರಿಯಲ್ಲಿ ‘ಕನ್ನಡ ಉತ್ಸವ-2025’ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಪ್ರತಿಭೆ ಪ್ರದರ್ಶನಕ್ಕೆ ಸಾಕ್ಷಿಯಾಯಿತು.</p>.<p>ಹಾಡುಗಾರಿಕೆ, ನೃತ್ಯ, ಕಿರುನಾಟಕ ಪ್ರಸ್ತುತಪಡಿಸಿದರು. ಆಹಾರ ಮೇಳದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ಬೆಂಕಿರಹಿತವಾಗಿ ಹಲವು ಬಗೆಯ ತಿಂಡಿ– ತಿನಿಸುಗಳನ್ನು ಸಿದ್ಧಪಡಿಸಿ ಗಮನಸೆಳೆದರು. ರಂಗೋಲಿ ಸ್ಪರ್ಧೆ, ಕೇರಂ, ರಸಪ್ರಶ್ನೆ, ಮೊಬೈಲ್ ಫೋಟೊಗ್ರಫಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು, ‘ಕನ್ನಡ ಹಬ್ಬವನ್ನು ನವೆಂಬರ್ಗೆ ಮೀಸಲಾಗಿಸದೆ ನಿತ್ಯವೂ ಆಚರಿಸುತ್ತೇವೆ ಎಂಬುದನ್ನು ಈ ಮೂಲಕ ತೋರಿಸಲಾಗಿದೆ. ಕನ್ನಡ ನಮ್ಮ ಮಾತೃ ಭಾಷೆ ಎಂಬುದು ಹೆಮ್ಮೆಯ ಸಂಗತಿ’ ಎಂದರು.</p>.<p>‘ಸೆಸ್ಕ್’ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕಿ(ತಾಂತ್ರಿಕ) ಶರಣಮ್ಮ ಎಸ್. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಲೆಕ್ಕಪರಿಶೋಧಕಿ ನಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರಾದ ಬಿ.ಆರ್. ರೂಪಾ, ಎಲ್. ಲೋಕೇಶ್, ಎಚ್.ಆರ್. ದಿನೇಶ್, ಟಿ. ರಾಮಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಪ್ರಧಾನ ಕಚೇರಿಯಲ್ಲಿ ‘ಕನ್ನಡ ಉತ್ಸವ-2025’ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಪ್ರತಿಭೆ ಪ್ರದರ್ಶನಕ್ಕೆ ಸಾಕ್ಷಿಯಾಯಿತು.</p>.<p>ಹಾಡುಗಾರಿಕೆ, ನೃತ್ಯ, ಕಿರುನಾಟಕ ಪ್ರಸ್ತುತಪಡಿಸಿದರು. ಆಹಾರ ಮೇಳದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ, ಬೆಂಕಿರಹಿತವಾಗಿ ಹಲವು ಬಗೆಯ ತಿಂಡಿ– ತಿನಿಸುಗಳನ್ನು ಸಿದ್ಧಪಡಿಸಿ ಗಮನಸೆಳೆದರು. ರಂಗೋಲಿ ಸ್ಪರ್ಧೆ, ಕೇರಂ, ರಸಪ್ರಶ್ನೆ, ಮೊಬೈಲ್ ಫೋಟೊಗ್ರಫಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು, ‘ಕನ್ನಡ ಹಬ್ಬವನ್ನು ನವೆಂಬರ್ಗೆ ಮೀಸಲಾಗಿಸದೆ ನಿತ್ಯವೂ ಆಚರಿಸುತ್ತೇವೆ ಎಂಬುದನ್ನು ಈ ಮೂಲಕ ತೋರಿಸಲಾಗಿದೆ. ಕನ್ನಡ ನಮ್ಮ ಮಾತೃ ಭಾಷೆ ಎಂಬುದು ಹೆಮ್ಮೆಯ ಸಂಗತಿ’ ಎಂದರು.</p>.<p>‘ಸೆಸ್ಕ್’ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕಿ(ತಾಂತ್ರಿಕ) ಶರಣಮ್ಮ ಎಸ್. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಲೆಕ್ಕಪರಿಶೋಧಕಿ ನಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕರಾದ ಬಿ.ಆರ್. ರೂಪಾ, ಎಲ್. ಲೋಕೇಶ್, ಎಚ್.ಆರ್. ದಿನೇಶ್, ಟಿ. ರಾಮಸ್ವಾಮಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>