<p><strong>ಮೈಸೂರು:</strong> ಇಲ್ಲಿನ ಯಾದವಗಿರಿಯಲ್ಲಿ ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಂದ ಸರಗಳವು ಮಾಡಲು ಇಬ್ಬರು ಕಳ್ಳರು ಯತ್ನಿಸಿದ್ದಾರೆ.</p>.<p>ಜಯಲಕ್ಷ್ಮಿ (60) ಎಂಬುವವರು ರಸ್ತೆ ಬದಿ ಪರಿಚಯಸ್ಥರೊಂದಿಗೆ ಮಾತನಾಡುತ್ತಾ ನಿಂತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ಸರವನ್ನು ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಮಹಿಳೆಯು ಸರವನ್ನು ಬಲವಾಗಿ ಹಿಡಿದುಕೊಂಡಿದ್ದಾರೆ. ಇದರಿಂದ ಸರ ಕಳ್ಳರ ಕೈ ಸೇರಿಲ್ಲ. ಕಳ್ಳರಲ್ಲಿ ಒಬ್ಬಾತ ಹೆಲ್ಮೆಟ್ ಹಾಕಿದ್ದರೆ, ಮತ್ತೊಬ್ಬ ಹಾಕಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣ ವಿ.ವಿ.ಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ವ್ಯಕ್ತಿ ಶವ ಪತ್ತೆ</strong></p>.<p>ಮೈಸೂರು- ಚಾಮರಾಜನಗರ ರೈಲು ನಿಲ್ದಾಣಗಳ ನಡುವೆ ಸುಮಾರು 30-35 ವರ್ಷದ ಪುರುಷ ವ್ಯಕ್ತಿಯ ಮೃತದೇಹವು ಪತ್ತೆಯಾಗಿದೆ. 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕೆಂಪು, ಬಿಳಿ ಕಪ್ಪು ಬಣ್ಣದ ಚೆಕ್ಸ್ವುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದಾರೆ.</p>.<p>ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಗುರುತು ಪತ್ತೆಯಾದವರು ದೂ: 0821-2516579 ನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.</p>.<p><strong>ಆತ್ಮಹತ್ಯೆ</strong></p>.<p>ಇಲ್ಲಿನ ಕೃಷ್ಣಮೂರ್ತಿಪುರಂ ನಿವಾಸಿ ಮದನ್ ಮೋಹನ್ (58) ಮಂಗಳವಾರ ಮಧ್ಯಾಹ್ನ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇದಕ್ಕೂ ಮುನ್ನ ಅವರು ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ಚೆನ್ನೈನ ಅರುಣ್ಕುಮಾರ್, ನಂದಕಿಶೋರ್, ಶ್ರೀನಿವಾಸ್ ಪ್ರಸಾದ್, ತಾರಾನಾಥ್ ಹಾಗೂ ಇತರರು ಹಣದ ವಿಚಾರದಲ್ಲಿ ಮೋಸ ಮಾಡಿದ್ದು, ಇದರಿಂದ ನೊಂದು ನೇಣು ಹಾಕಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಲಕ್ಷ್ಮಿಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಯಾದವಗಿರಿಯಲ್ಲಿ ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಂದ ಸರಗಳವು ಮಾಡಲು ಇಬ್ಬರು ಕಳ್ಳರು ಯತ್ನಿಸಿದ್ದಾರೆ.</p>.<p>ಜಯಲಕ್ಷ್ಮಿ (60) ಎಂಬುವವರು ರಸ್ತೆ ಬದಿ ಪರಿಚಯಸ್ಥರೊಂದಿಗೆ ಮಾತನಾಡುತ್ತಾ ನಿಂತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ಸರವನ್ನು ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಮಹಿಳೆಯು ಸರವನ್ನು ಬಲವಾಗಿ ಹಿಡಿದುಕೊಂಡಿದ್ದಾರೆ. ಇದರಿಂದ ಸರ ಕಳ್ಳರ ಕೈ ಸೇರಿಲ್ಲ. ಕಳ್ಳರಲ್ಲಿ ಒಬ್ಬಾತ ಹೆಲ್ಮೆಟ್ ಹಾಕಿದ್ದರೆ, ಮತ್ತೊಬ್ಬ ಹಾಕಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣ ವಿ.ವಿ.ಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ವ್ಯಕ್ತಿ ಶವ ಪತ್ತೆ</strong></p>.<p>ಮೈಸೂರು- ಚಾಮರಾಜನಗರ ರೈಲು ನಿಲ್ದಾಣಗಳ ನಡುವೆ ಸುಮಾರು 30-35 ವರ್ಷದ ಪುರುಷ ವ್ಯಕ್ತಿಯ ಮೃತದೇಹವು ಪತ್ತೆಯಾಗಿದೆ. 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಕೆಂಪು, ಬಿಳಿ ಕಪ್ಪು ಬಣ್ಣದ ಚೆಕ್ಸ್ವುಳ್ಳ ತುಂಬು ತೋಳಿನ ಶರ್ಟ್ ಧರಿಸಿದ್ದಾರೆ.</p>.<p>ಮೃತದೇಹವನ್ನು ಕೆ.ಆರ್.ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಗುರುತು ಪತ್ತೆಯಾದವರು ದೂ: 0821-2516579 ನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.</p>.<p><strong>ಆತ್ಮಹತ್ಯೆ</strong></p>.<p>ಇಲ್ಲಿನ ಕೃಷ್ಣಮೂರ್ತಿಪುರಂ ನಿವಾಸಿ ಮದನ್ ಮೋಹನ್ (58) ಮಂಗಳವಾರ ಮಧ್ಯಾಹ್ನ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇದಕ್ಕೂ ಮುನ್ನ ಅವರು ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ಚೆನ್ನೈನ ಅರುಣ್ಕುಮಾರ್, ನಂದಕಿಶೋರ್, ಶ್ರೀನಿವಾಸ್ ಪ್ರಸಾದ್, ತಾರಾನಾಥ್ ಹಾಗೂ ಇತರರು ಹಣದ ವಿಚಾರದಲ್ಲಿ ಮೋಸ ಮಾಡಿದ್ದು, ಇದರಿಂದ ನೊಂದು ನೇಣು ಹಾಕಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಲಕ್ಷ್ಮಿಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>