<p><strong>ಮೈಸೂರು</strong>: ಇಲ್ಲಿನ ಗಾಯತ್ರಿಪುರಂ 2ನೇ ಹಂತದ ನಿವಾಸಿ ಹೇಮಾವತಿ (45) ಅವರು ಬುಧವಾರ ಸಂಜೆ 7.30ರ ಸಮಯದಲ್ಲಿ ಹಾಲು ತೆಗೆದುಕೊಂಡು ನಡೆದು ಬರುತ್ತಿರುವಾಗ ಎದುರಿನಿಂದ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಹೇಮಾವತಿ ಅವರ ಕುತ್ತಿಗೆಯಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರ ಕಳ್ಳರ ಪಾಲಾಗಿದೆ. ಈ ಕುರಿತು ನಜರ್ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಸರಗಳ್ಳತನಕ್ಕೆ ಯತ್ನ</strong>: ಇದಕ್ಕೂ ಮುನ್ನ 7.15ರ ಸುಮಾರಿನಲ್ಲಿ ಉದಯಗಿರಿಯ 2ನೇ ಹಂತದಲ್ಲಿ ತಮ್ಮ ಮನೆಯ ಮುಂದೆ ನಿಂತಿದ್ದ 35 ವರ್ಷದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಲು ಕಳ್ಳರು ಯತ್ನಿಸಿದ್ದಾರೆ. ಆದರೆ, ಮಹಿಳೆಯು ಸರವನ್ನು ಬಲವಾಗಿ ಹಿಡಿದುಕೊಂಡಿದ್ದರಿಂದ ಸರ ಕಳ್ಳರ ಕೈ ಸೇರಿಲ್ಲ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಎರಡೂ ಕಡೆಯೂ ಕೃತ್ಯ ನಡೆಸಿರಬಹುದು. ಉದಯಗಿರಿಯಲ್ಲಿ ಯತ್ನಿಸಿದ ನಂತರ ಗಾಯತ್ರಿಪುರಂಗೆ ಹೋಗಿ ಸರಗಳ್ಳತನ ಮಾಡಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಗಾಯತ್ರಿಪುರಂ 2ನೇ ಹಂತದ ನಿವಾಸಿ ಹೇಮಾವತಿ (45) ಅವರು ಬುಧವಾರ ಸಂಜೆ 7.30ರ ಸಮಯದಲ್ಲಿ ಹಾಲು ತೆಗೆದುಕೊಂಡು ನಡೆದು ಬರುತ್ತಿರುವಾಗ ಎದುರಿನಿಂದ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಹೇಮಾವತಿ ಅವರ ಕುತ್ತಿಗೆಯಲ್ಲಿದ್ದ 30 ಗ್ರಾಂ ತೂಕದ ಚಿನ್ನದ ಸರ ಕಳ್ಳರ ಪಾಲಾಗಿದೆ. ಈ ಕುರಿತು ನಜರ್ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಸರಗಳ್ಳತನಕ್ಕೆ ಯತ್ನ</strong>: ಇದಕ್ಕೂ ಮುನ್ನ 7.15ರ ಸುಮಾರಿನಲ್ಲಿ ಉದಯಗಿರಿಯ 2ನೇ ಹಂತದಲ್ಲಿ ತಮ್ಮ ಮನೆಯ ಮುಂದೆ ನಿಂತಿದ್ದ 35 ವರ್ಷದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಲು ಕಳ್ಳರು ಯತ್ನಿಸಿದ್ದಾರೆ. ಆದರೆ, ಮಹಿಳೆಯು ಸರವನ್ನು ಬಲವಾಗಿ ಹಿಡಿದುಕೊಂಡಿದ್ದರಿಂದ ಸರ ಕಳ್ಳರ ಕೈ ಸೇರಿಲ್ಲ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಎರಡೂ ಕಡೆಯೂ ಕೃತ್ಯ ನಡೆಸಿರಬಹುದು. ಉದಯಗಿರಿಯಲ್ಲಿ ಯತ್ನಿಸಿದ ನಂತರ ಗಾಯತ್ರಿಪುರಂಗೆ ಹೋಗಿ ಸರಗಳ್ಳತನ ಮಾಡಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>