<p><strong>ಮೈಸೂರು: </strong>'ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರಿಂದ ಆರ್ಎಸ್ಎಸ್ ಚಡ್ಡಿಗಳ ಮೆರವಣಿಗೆ ಮಾಡಿಸುವ ಮೂಲಕ ಬಿಜೆಪಿಯು ದಲಿತರನ್ನು ಅವಮಾನಿಸಿದೆ' ಎಂದು ದಲಿತ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, 'ನಾರಾಯಣಸ್ವಾಮಿ ಚಡ್ಡಿಗಳನ್ನು ಹೊತ್ತಿದ್ದು ಮಲ ಹೊತ್ತಿದ್ದಕ್ಕೆ ಸಮಾನವಾಗಿದೆ. ಈ ಹೋರಾಟವನ್ನು ಬಿಜೆಪಿಯಲ್ಲಿರುವ ತೇಜಸ್ವಿ ಸೂರ್ಯ ಮೊದಲಾದವರಿಂದ ಮಾಡಿಸಲಿಲ್ಲವೇಕೆ?' ಎಂದು ಕೇಳಿದರು.</p>.<p>'ಆರ್ಎಸ್ಎಸ್ನವರು ಕೆಲವು ರಾಜಕೀಯ ನಿರುದ್ಯೋಗಿಗಳಿಗೆ ಅವಕಾಶ ಕಲ್ಪಿಸಿ ನಮ್ಮನ್ನು ಒಡೆದು ಆಳುವ ನೀತಿಯನ್ನು ವ್ಯವಸ್ಥಿತವಾಗಿ ಅನುಸರಿಸುತ್ತಿದ್ದಾರೆ. ನಿಜವಾಗಿಯೂ ಸಮಾಜದ ಬಗ್ಗೆ ಕಾಳಜಿ ಇದ್ದಿದ್ದರೆ ಬಿಜೆಪಿಯಲ್ಲಿರುವ ದಲಿತ ಸಂಸದರು ಹಾಗೂ ಶಾಸಕರು ಧಿಕ್ಕರಿಸಿ ಹೊರ ಬರಬೇಕಾಗಿತ್ತು' ಎಂದರು.</p>.<p>'ಬಿಜೆಪಿ, ಆರ್ಎಸ್ಎಸ್ನವರು ಅಸ್ಪೃಶ್ಯತೆ ಮುಂದುವರಿಸುತ್ತಿದ್ದಾರೆ. ಮೂಲನಿವಾಸಿಗಳ ಹಕ್ಕುಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.</p>.<p>'ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಕೊಡುತ್ತೇವೆ ಎಂದು ಆರ್ಎಸ್ಎಸ್ನವರು ಘೋಷಿಸಲಿ' ಎಂದು ಸವಾಲು ಹಾಕಿದರು.</p>.<p>'ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ಗೆ ಜೂನ್ 13ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ನ ಮಧು ಮಾದೇಗೌಡ ಯೋಗ್ಯ ಅಭ್ಯರ್ಥಿಯಾಗಿದ್ದು, ಟ್ರಸ್ಟ್ ಅವರನ್ನು ಬೆಂಬಲಿಸಲಿದೆ' ಎಂದು ತಿಳಿಸಿದರು.</p>.<p>ಮುಖಂಡರಾದ ಸಿದ್ದಸ್ವಾಮಯ್ಯ, ಹೊರಳವಾಡಿ ನಂಜುಂಡಸ್ವಾಮಿ ಹಾಗೂ ಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>'ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರಿಂದ ಆರ್ಎಸ್ಎಸ್ ಚಡ್ಡಿಗಳ ಮೆರವಣಿಗೆ ಮಾಡಿಸುವ ಮೂಲಕ ಬಿಜೆಪಿಯು ದಲಿತರನ್ನು ಅವಮಾನಿಸಿದೆ' ಎಂದು ದಲಿತ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಆಕ್ರೋಶ ವ್ಯಕ್ತಪಡಿಸಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, 'ನಾರಾಯಣಸ್ವಾಮಿ ಚಡ್ಡಿಗಳನ್ನು ಹೊತ್ತಿದ್ದು ಮಲ ಹೊತ್ತಿದ್ದಕ್ಕೆ ಸಮಾನವಾಗಿದೆ. ಈ ಹೋರಾಟವನ್ನು ಬಿಜೆಪಿಯಲ್ಲಿರುವ ತೇಜಸ್ವಿ ಸೂರ್ಯ ಮೊದಲಾದವರಿಂದ ಮಾಡಿಸಲಿಲ್ಲವೇಕೆ?' ಎಂದು ಕೇಳಿದರು.</p>.<p>'ಆರ್ಎಸ್ಎಸ್ನವರು ಕೆಲವು ರಾಜಕೀಯ ನಿರುದ್ಯೋಗಿಗಳಿಗೆ ಅವಕಾಶ ಕಲ್ಪಿಸಿ ನಮ್ಮನ್ನು ಒಡೆದು ಆಳುವ ನೀತಿಯನ್ನು ವ್ಯವಸ್ಥಿತವಾಗಿ ಅನುಸರಿಸುತ್ತಿದ್ದಾರೆ. ನಿಜವಾಗಿಯೂ ಸಮಾಜದ ಬಗ್ಗೆ ಕಾಳಜಿ ಇದ್ದಿದ್ದರೆ ಬಿಜೆಪಿಯಲ್ಲಿರುವ ದಲಿತ ಸಂಸದರು ಹಾಗೂ ಶಾಸಕರು ಧಿಕ್ಕರಿಸಿ ಹೊರ ಬರಬೇಕಾಗಿತ್ತು' ಎಂದರು.</p>.<p>'ಬಿಜೆಪಿ, ಆರ್ಎಸ್ಎಸ್ನವರು ಅಸ್ಪೃಶ್ಯತೆ ಮುಂದುವರಿಸುತ್ತಿದ್ದಾರೆ. ಮೂಲನಿವಾಸಿಗಳ ಹಕ್ಕುಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.</p>.<p>'ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಕೊಡುತ್ತೇವೆ ಎಂದು ಆರ್ಎಸ್ಎಸ್ನವರು ಘೋಷಿಸಲಿ' ಎಂದು ಸವಾಲು ಹಾಕಿದರು.</p>.<p>'ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ಗೆ ಜೂನ್ 13ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ನ ಮಧು ಮಾದೇಗೌಡ ಯೋಗ್ಯ ಅಭ್ಯರ್ಥಿಯಾಗಿದ್ದು, ಟ್ರಸ್ಟ್ ಅವರನ್ನು ಬೆಂಬಲಿಸಲಿದೆ' ಎಂದು ತಿಳಿಸಿದರು.</p>.<p>ಮುಖಂಡರಾದ ಸಿದ್ದಸ್ವಾಮಯ್ಯ, ಹೊರಳವಾಡಿ ನಂಜುಂಡಸ್ವಾಮಿ ಹಾಗೂ ಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>