<p><strong>ಹಂಪಾಪುರ</strong>: ‘ಬಸವಣ್ಣ ಮತ್ತು ಶ್ರೀರಾಮಚಂದ್ರ ಮಾದರಿ ವ್ಯಕ್ತಿಗಳು, ಇವರ ತತ್ವ ಮತ್ತು ಆದರ್ಶಗಳನ್ನು ನಾವು ಅಳವಡಿಸಿಕೊಂಡು ನಡೆದರೆ ಸಮ ಸಮಾಜ ನಿರ್ಮಾಣ ಸಾಧ್ಯ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.</p>.<p>ಎಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕೆರೆಯೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮಮಂದಿರ ಮತ್ತು ಬಸವೇಶ್ವರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ದೇವಾಲಯಗಳನ್ನು ನಿರ್ಮಿಸಿ, ದೇವರ ಬಗೆಗೆ ಯುವ ಪೀಳಿಗೆಗೆ ತಿಳಿಸಬೇಕು. ಈ ನಿಟ್ಟಿನಲ್ಲಿ ಚಿಕ್ಕೆರೆಯೂರು ಗ್ರಾಮಸ್ಥರ ಕಾರ್ಯ ಮಾದರಿ ಎಂದರು.</p>.<p>ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ‘ಹಿಂದೂ ಸಮಾಜದಲ್ಲಿ ರಾಮ–ಲಕ್ಷ್ಮಣರಿಗೆ ಗೌರವ ಸ್ಥಾನವನ್ನು ನೀಡುತ್ತಾ ಬಂದಿದ್ದೇವೆ. ದಂಪತಿಗೆ ರಾಮ–ಸೀತೆಯಂತೆ ಮಾದರಿಯಾಗಿ ಬದುಕಿರಿ ಎಂದು ಹಿರಿಯರು ಆಶೀರ್ವಾದ ಮಾಡುತ್ತಾರೆ. ಇದು ರಾಮನಿಗೆ ಇರುವ ಮಹತ್ವ ತಿಳಿಸುತ್ತದೆ’ ಎಂದು ಹೇಳಿದರು.</p>.<p>ಸ್ವಾಮೀಜಿಗಳನ್ನು ಗ್ರಾಮಸ್ಥರು ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಸ್ವಾಗತಿಸಿದರು.</p>.<p>ಬಿಡಗಲಿನ ಮಹದೇವ ಸ್ವಾಮೀಜಿ, ಮಾದಾಪುರದ ಚಂದ್ರಮೌಳೇಶ್ವರ ಸ್ವಾಮೀಜಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-38-471243110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂಪಾಪುರ</strong>: ‘ಬಸವಣ್ಣ ಮತ್ತು ಶ್ರೀರಾಮಚಂದ್ರ ಮಾದರಿ ವ್ಯಕ್ತಿಗಳು, ಇವರ ತತ್ವ ಮತ್ತು ಆದರ್ಶಗಳನ್ನು ನಾವು ಅಳವಡಿಸಿಕೊಂಡು ನಡೆದರೆ ಸಮ ಸಮಾಜ ನಿರ್ಮಾಣ ಸಾಧ್ಯ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.</p>.<p>ಎಚ್.ಡಿ.ಕೋಟೆ ತಾಲ್ಲೂಕಿನ ಚಿಕ್ಕೆರೆಯೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮಮಂದಿರ ಮತ್ತು ಬಸವೇಶ್ವರ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ದೇವಾಲಯಗಳನ್ನು ನಿರ್ಮಿಸಿ, ದೇವರ ಬಗೆಗೆ ಯುವ ಪೀಳಿಗೆಗೆ ತಿಳಿಸಬೇಕು. ಈ ನಿಟ್ಟಿನಲ್ಲಿ ಚಿಕ್ಕೆರೆಯೂರು ಗ್ರಾಮಸ್ಥರ ಕಾರ್ಯ ಮಾದರಿ ಎಂದರು.</p>.<p>ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ‘ಹಿಂದೂ ಸಮಾಜದಲ್ಲಿ ರಾಮ–ಲಕ್ಷ್ಮಣರಿಗೆ ಗೌರವ ಸ್ಥಾನವನ್ನು ನೀಡುತ್ತಾ ಬಂದಿದ್ದೇವೆ. ದಂಪತಿಗೆ ರಾಮ–ಸೀತೆಯಂತೆ ಮಾದರಿಯಾಗಿ ಬದುಕಿರಿ ಎಂದು ಹಿರಿಯರು ಆಶೀರ್ವಾದ ಮಾಡುತ್ತಾರೆ. ಇದು ರಾಮನಿಗೆ ಇರುವ ಮಹತ್ವ ತಿಳಿಸುತ್ತದೆ’ ಎಂದು ಹೇಳಿದರು.</p>.<p>ಸ್ವಾಮೀಜಿಗಳನ್ನು ಗ್ರಾಮಸ್ಥರು ಮಂಗಳವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಸ್ವಾಗತಿಸಿದರು.</p>.<p>ಬಿಡಗಲಿನ ಮಹದೇವ ಸ್ವಾಮೀಜಿ, ಮಾದಾಪುರದ ಚಂದ್ರಮೌಳೇಶ್ವರ ಸ್ವಾಮೀಜಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-38-471243110</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>