<p><strong>ಮೈಸೂರು</strong>: ‘ಚಾಮುಂಡೇಶ್ವರಿ ಹಾಗೂ ಉತ್ತನಹಳ್ಳಿಯ ಜ್ವಾಲಾ ತ್ರಿಪುರ ಸುಂದರಿ ದೇವಾಲಯಕ್ಕೆ ಆಷಾಢ ಶುಕ್ರವಾರಗಳು ಸೇರಿದಂತೆ ವಾರಾಂತ್ಯದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.</p>.<p>ಆಷಾಢ ಮಾಸದ ಶುಕ್ರವಾರ ಹಾಗೂ ವಾರಾಂತ್ಯ ದಿನಗಳಂದು ಚಾಮುಂಡೇಶ್ವರಿ ದರ್ಶನಕ್ಕೆ 1 ಲಕ್ಷಕ್ಕೂ ಹೆಚ್ಚು ಭಕ್ತರು ಬರುವ ಸಾಧ್ಯತೆಯಿದೆ. ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟಲಿಕ್ಕಾಗಿ ಜುಲೈ 5ರಿಂದ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಆಚರಣೆ ಹೊರತುಪಡಿಸಿ, ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದಿದ್ದಾರೆ.</p>.<p>ನಿಷೇಧಿತ ಅವಧಿಯಲ್ಲಿ ಮೆಟ್ಟಿಲು ಮಾರ್ಗದಿಂದ ಚಾಮುಂಡಿಬೆಟ್ಟಕ್ಕೆ ಭಕ್ತರು ಮತ್ತು ಸಾರ್ವಜನಿಕರು ಬರುವುದನ್ನು ಸಹ ನಿಷೇಧಿಸಿದ್ದು, ದೇವಾಲಯದಲ್ಲಿ ದೇಗುಲ ಅಥವಾ ದಾನಿಗಳ ವತಿಯಿಂದಾಗಲಿ ದಾಸೋಹ, ಊಟದ ವ್ಯವಸ್ಥೆ ಮಾಡುವುದನ್ನು ಹಾಗೂ ಪ್ರಸಾದ ವಿತರಣೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.</p>.<p>ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿರುವ ದಿನಗಳಂದು ಪೂರ್ತಿ ದಿನ ಹಾಗೂ ಇತರೆ ದಿನಗಳಂದು ಸಂಜೆ 6 ಗಂಟೆಯ ನಂತರ ಚಾಮುಂಡಿ ಬೆಟ್ಟದ ಗ್ರಾಮಸ್ಥರ ವಾಹನಗಳಿಗೆ ಮತ್ತು ತುರ್ತು ಸೇವಾ ವಾಹನ ಹೊರತುಪಡಿಸಿ, ಇತರೆ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.</p>.<p>ಕೇಂದ್ರ–ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ಹೊಂದಿರುವ ಗಣ್ಯ ವ್ಯಕ್ತಿಗಳ ವಾಹನಗಳು ಸಂಚರಿಸಬಹುದಾಗಿದ್ದು, ಚಾಮುಂಡಿಬೆಟ್ಟದ ಗ್ರಾಮದ ಸ್ಥಳೀಯರು ವಾಸಸ್ಥಳದ ಗುರುತಿನ ಚೀಟಿ ಬಳಸಬೇಕಿದೆ.</p>.<p>ನಿಷೇಧಿತ ಅವಧಿಯಲ್ಲಿ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆದು ಬಂದಿರುವ ರೂಢಿ ಸಂಪ್ರದಾಯದಂತೆ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಅಧಿಕಾರಿಗಳು, ಅರ್ಚಕರು, ಸಿಬ್ಬಂದಿಗಳು ಮಾತ್ರ ದೇವಾಲಯದ ಆವರಣದಲ್ಲೇ ನಡೆಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಚಾಮುಂಡೇಶ್ವರಿ ಹಾಗೂ ಉತ್ತನಹಳ್ಳಿಯ ಜ್ವಾಲಾ ತ್ರಿಪುರ ಸುಂದರಿ ದೇವಾಲಯಕ್ಕೆ ಆಷಾಢ ಶುಕ್ರವಾರಗಳು ಸೇರಿದಂತೆ ವಾರಾಂತ್ಯದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.</p>.<p>ಆಷಾಢ ಮಾಸದ ಶುಕ್ರವಾರ ಹಾಗೂ ವಾರಾಂತ್ಯ ದಿನಗಳಂದು ಚಾಮುಂಡೇಶ್ವರಿ ದರ್ಶನಕ್ಕೆ 1 ಲಕ್ಷಕ್ಕೂ ಹೆಚ್ಚು ಭಕ್ತರು ಬರುವ ಸಾಧ್ಯತೆಯಿದೆ. ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟಲಿಕ್ಕಾಗಿ ಜುಲೈ 5ರಿಂದ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ ಧಾರ್ಮಿಕ ಆಚರಣೆ ಹೊರತುಪಡಿಸಿ, ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದಿದ್ದಾರೆ.</p>.<p>ನಿಷೇಧಿತ ಅವಧಿಯಲ್ಲಿ ಮೆಟ್ಟಿಲು ಮಾರ್ಗದಿಂದ ಚಾಮುಂಡಿಬೆಟ್ಟಕ್ಕೆ ಭಕ್ತರು ಮತ್ತು ಸಾರ್ವಜನಿಕರು ಬರುವುದನ್ನು ಸಹ ನಿಷೇಧಿಸಿದ್ದು, ದೇವಾಲಯದಲ್ಲಿ ದೇಗುಲ ಅಥವಾ ದಾನಿಗಳ ವತಿಯಿಂದಾಗಲಿ ದಾಸೋಹ, ಊಟದ ವ್ಯವಸ್ಥೆ ಮಾಡುವುದನ್ನು ಹಾಗೂ ಪ್ರಸಾದ ವಿತರಣೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.</p>.<p>ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿರುವ ದಿನಗಳಂದು ಪೂರ್ತಿ ದಿನ ಹಾಗೂ ಇತರೆ ದಿನಗಳಂದು ಸಂಜೆ 6 ಗಂಟೆಯ ನಂತರ ಚಾಮುಂಡಿ ಬೆಟ್ಟದ ಗ್ರಾಮಸ್ಥರ ವಾಹನಗಳಿಗೆ ಮತ್ತು ತುರ್ತು ಸೇವಾ ವಾಹನ ಹೊರತುಪಡಿಸಿ, ಇತರೆ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.</p>.<p>ಕೇಂದ್ರ–ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ಹೊಂದಿರುವ ಗಣ್ಯ ವ್ಯಕ್ತಿಗಳ ವಾಹನಗಳು ಸಂಚರಿಸಬಹುದಾಗಿದ್ದು, ಚಾಮುಂಡಿಬೆಟ್ಟದ ಗ್ರಾಮದ ಸ್ಥಳೀಯರು ವಾಸಸ್ಥಳದ ಗುರುತಿನ ಚೀಟಿ ಬಳಸಬೇಕಿದೆ.</p>.<p>ನಿಷೇಧಿತ ಅವಧಿಯಲ್ಲಿ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆದು ಬಂದಿರುವ ರೂಢಿ ಸಂಪ್ರದಾಯದಂತೆ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಅಧಿಕಾರಿಗಳು, ಅರ್ಚಕರು, ಸಿಬ್ಬಂದಿಗಳು ಮಾತ್ರ ದೇವಾಲಯದ ಆವರಣದಲ್ಲೇ ನಡೆಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>