‘ಬೆಟ್ಟದಲ್ಲಿ ಶನಿವಾರ ಬೆಳಿಗ್ಗೆ ದೇವಿಗೆ ವಸಂತಪೂಜೆ ನೆರವೇರಿಸಲಾಯಿತು. ಬಳಿಕ ಅವಭೃತ ತೀರ್ಥಸ್ನಾನ ಹಾಗೂ ಮಂಟಪೋತ್ಸವ ನಡೆಯಿತು. ಬಳಿಕ ಉತ್ಸವ ಮೂರ್ತಿಯನ್ನು ಚಿನ್ನದ ಪಲ್ಲಕ್ಕಿಯಲ್ಲಿಟ್ಟು ತೆಪ್ಪೋತ್ಸವ ನೆರವೇರಿಸಿ, ವಿಶೇಷ ಪೂಜಾ ಕಾರ್ಯ ನೆರವೇರಿಸಲಾಯಿತು. ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಸಂಜೆ 6ರೊಳಗೆ ಮೂರ್ತಿಯನ್ನು ದೇವಸ್ಥಾನಕ್ಕೆ ವಾಪಸ್ ತರಲಾಯಿತು.
‘ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಈ ಬಾರಿ ತೆಪ್ಪೋತ್ಸವವನ್ನು ಸಂಜೆಯೇ ನಡೆಸಲಾಯಿತು. ಉತ್ಸವ ಮೂರ್ತಿಯನ್ನು ವಾಸಪ್ ತರುತ್ತಿದ್ದಂತೆಯೇ ದೇವಸ್ಥಾನದ ಬಾಗಿಲನ್ನು ಮುಚ್ಚಲಾಯಿತು. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಪೂಜಾ ಕೈಂಕರ್ಯ ನೆರವೇರಿದವು. ಅ.29ರಂದು (ಭಾನುವಾರ) ಬೆಳಿಗ್ಗೆ 7.30ರಿಂದ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ’ ಎಂದು ಶಶಿಶೇಖರ್ ದೀಕ್ಷಿತ್ ತಿಳಿಸಿದರು.